ತಾಜ್ ಮಹಲ್ ಅಡಿಯಲ್ಲಿ ಪ್ರಧಾನಿಯ ಡಿಗ್ರಿ ಹುಡುಕುತ್ತಿದ್ದಾರೆ: ಓವೈಸಿ ವ್ಯಂಗ್ಯ
Team Udayavani, May 29, 2022, 3:46 PM IST
ಮುಂಬೈ: ತಾಜ್ ಮಹಲ್ ಅಡಿಯಲ್ಲಿ ಕೆಲವರು ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟನ್ನು ಹುಡುಕುತ್ತಿದ್ದಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಮಹಾರಾಷ್ಟ್ರದ ಭೀವಂಡಿಯ ಸಭೆಯಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಒಂದೆರಡು ವಾರಗಳ ಹಿಂದೆ ಭುಗಿಲೆದ್ದ ತಾಜ್ ಮಹಲ್ ವಿವಾದದ ಹಿನ್ನೆಲೆಯಲ್ಲಿ ಓವೈಸಿ ಈ ಮಾತುಗಳನ್ನಾಡಿದ್ದಾರೆ. ಆಗ್ರಾದ ತಾಜ್ಮಹಲ್ನಲ್ಲಿರುವ 22 ಬೀಗ ಹಾಕಿದ ಕೋಣೆಗಳ ಹಿಂದೆ “ಸತ್ಯವನ್ನು ಕಂಡುಹಿಡಿಯಿರಿ” ಎಂದು ಬಿಜೆಪಿ ನಾಯಕರೊಬ್ಬರು ಅರ್ಜಿ ಸಲ್ಲಿಸಿದ್ದರು. ಸಮಾಧಿಯು ವಾಸ್ತವವಾಗಿ ಹಳೆಯ ಶಿವ ದೇವಾಲಯವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಆದರೆ ಮೇ 12 ರಂದು, ಅಲಹಾಬಾದ್ ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತು ಮತ್ತು ಅಂತಹ ವಿಷಯಗಳನ್ನು “ಇತಿಹಾಸಕಾರರಿಗೆ ಬಿಡಬೇಕು” ಎಂದು ಹೇಳಿದೆ.
ಅದೇ ಭಾಷಣದಲ್ಲಿ ಅಸಾದುದ್ದೀನ್ ಓವೈಸಿ, ಮೊಘಲರು ಭಾರತದ ಹೊರಗಿನಿಂದ ಹೇಗೆ ಬಂದರು ಎಂಬುದರ ಕುರಿತು ಬಿಜೆಪಿ ಮಾತನಾಡುತ್ತಲೇ ಇರುತ್ತದೆ. ಆದರೆ ಪ್ರಪಂಚದ ವಿವಿಧ ಭಾಗಗಳಿಂದ ಹಲವಾರು ಇತರ ಸಮುದಾಯಗಳು ಭಾರತಕ್ಕೆ ಬಂದಿದೆ. ದ್ರಾವಿಡರು ಮತ್ತು ಆದಿವಾಸಿಗಳು ಮಾತ್ರ ಮೂಲ ಭಾರತದವರು ಎಂದು ಹೇಳಿದರು.
ಇದನ್ನೂ ಓದಿ:ಕೇದಾರನಾಥದ ಕಸದ ರಾಶಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ
“ಭಾರತ ನನ್ನದಲ್ಲ, ಠಾಕ್ರೆಯವರದ್ದಲ್ಲ, ಮೋದಿ-ಶಾ ಅವರದ್ದಲ್ಲ, ಭಾರತ ಯಾರದ್ದಾದರೂ ಇದ್ದರೆ ಅದು ದ್ರಾವಿಡರು ಮತ್ತು ಆದಿವಾಸಿಗಳದ್ದು. ವಾಸ್ತವವಾಗಿ ಆಫ್ರಿಕಾ, ಇರಾನ್, ಪೂರ್ವ ಏಷ್ಯಾ, ಮಧ್ಯ ಏಷ್ಯಾದಿಂದ ಜನರು ವಲಸೆ ಬಂದ ನಂತರ ಭಾರತ ರೂಪುಗೊಂಡಿತು” ಎಂದು ಲೋಕಸಭೆ ಸಂಸದ ಓವೈಸಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ