ಏಕ ಇಲಾಖೆ, ಏಕ ಪ್ರಶಸ್ತಿಗೆ ಚಿಂತನೆ? ಶಿಕ್ಷಣ, ಸಿನೆಮಾ, ಸಂಗೀತ, ಸಾಹಿತ್ಯ ಪ್ರಶಸ್ತಿ ಕಡಿತ

ಒಂದೊಂದೇ ಪರಮೋಚ್ಚ ಪ್ರಶಸ್ತಿ ನೀಡಲು ಕೇಂದ್ರ ಇಂಗಿತ

Team Udayavani, Nov 23, 2022, 7:00 AM IST

ಏಕ ಇಲಾಖೆ, ಏಕ ಪ್ರಶಸ್ತಿಗೆ ಚಿಂತನೆ? ಶಿಕ್ಷಣ, ಸಿನೆಮಾ, ಸಂಗೀತ, ಸಾಹಿತ್ಯ ಪ್ರಶಸ್ತಿ ಕಡಿತ

ಹೊಸದಿಲ್ಲಿ: “ಏಕ ಇಲಾಖೆ, ಏಕ ಪ್ರಶಸ್ತಿ’ ವ್ಯವಸ್ಥೆ ಜಾರಿಗೆ ತರಲು ಮುಂದಾಗಿರುವ ಕೇಂದ್ರ ಸರಕಾರವು ಈಗ ಇರುವ ಪ್ರಶಸ್ತಿಗಳ ಸಂಖ್ಯೆಯನ್ನು ಗಣನೀಯ ಪ್ರಮಾಣದಲ್ಲಿ ಕಡಿತಗೊಳಿಸಲು ಮುಂದಾಗಿದೆ.

ಶಿಕ್ಷಣ ಇಲಾಖೆ, ಸಿನೆಮಾ, ಸಂಗೀತ, ನಾಟಕ, ಸಾಹಿತ್ಯ ಅಕಾಡೆಮಿಯಿಂದ ನೀಡುವ ಪ್ರಶಸ್ತಿಗಳನ್ನು ಕಡಿತಗೊಳಿಸಿ, ತಲಾ ಒಂದು ಅಥವಾ ವಿಭಾಗವಾರು ಒಂದೊಂದು ಪ್ರಶಸ್ತಿ ನೀಡಲು ಅದು ಚಿಂತನೆ ನಡೆಸಿದೆ.

ಸೆ. 22ರಂದು ಗೃಹ ಇಲಾಖೆ ಕಾರ್ಯದರ್ಶಿ ಅಜಯ್‌ ಭಲ್ಲಾ ನೇತೃತ್ವದಲ್ಲಿ ಅಂತರ್‌ ಸಚಿವಾಲಯದ ಸಭೆ ನಡೆದಿದ್ದು, ಇದರಲ್ಲಿ ಪ್ರಧಾನಿ ಮೋದಿ ಆಶಯದಂತೆ ಪ್ರಶಸ್ತಿ ನೀಡುವ ವ್ಯವಸ್ಥೆಯೇ ಬದಲಾಗಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ. ಹಾಗೆಯೇ ಈ ಎಲ್ಲ ಸಚಿವಾಲಯಗಳ ಜತೆ ಚರ್ಚಿಸಿ, ಪ್ರಶಸ್ತಿಗಳನ್ನು ವಿಲೀನಗೊಳಿಸುವ ಅಥವಾ ಕಡಿತಗೊಳಿಸುವ ಬಗ್ಗೆ ನಿರ್ಧರಿಸಲಾಗಿದೆ.

ಸಾಹಿತ್ಯ, ಸಂಗೀತ-ನಾಟಕಕ್ಕೆ ತಲಾ ಒಂದು
ಸಂಗೀತ ಮತ್ತು ನಾಟಕ ಅಕಾಡೆಮಿಯಲ್ಲಿ ವರ್ಷಕ್ಕೆ 40 ಪ್ರಶಸ್ತಿ ಹಾಗೂ ಸಾಹಿತ್ಯ ಅಕಾ ಡೆಮಿಯಲ್ಲಿ 24 ಪ್ರಶಸ್ತಿ ನೀಡಲಾಗುತ್ತಿದೆ. ಈ ಎಲ್ಲ ಪ್ರಶಸ್ತಿಗಳನ್ನು ಸ್ಥಗಿತಗೊಳಿಸಿ ಸಂಗೀತ – ನಾಟಕ ಅಕಾಡೆಮಿಯಲ್ಲಿ ಹಾಗೂ ಸಾಹಿತ್ಯ ಅಕಾ ಡೆಮಿಯಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುನ್ನತ ಪ್ರಶಸ್ತಿ ನೀಡಬಹುದು ಎಂದಿದೆ.

ಕೃಷಿ: ಮೂರು ಪ್ರಶಸ್ತಿ
ಮುಖ್ಯವಾಗಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಮೂರು ಪ್ರಶಸ್ತಿ ನೀಡಲು ಸಲಹೆ ನೀಡಲಾಗಿದೆ. ಸಂಶೋಧನೆ ಮತ್ತು ತಂತ್ರಜ್ಞಾನ, ಒಂದು ರಾಷ್ಟ್ರೀಯ ಪ್ರಶಸ್ತಿ ಹಾಗೂ ಕೃಷಿಕ ರತ್ನ ಎಂಬ ಹೆಸರಲ್ಲಿ ಪ್ರಶಸ್ತಿ ನೀಡಬಹುದು ಎಂದು ಹೇಳಲಾಗಿದೆ.

ಶಿಕ್ಷಣ: ಒಂದೇ ಪ್ರಶಸ್ತಿ
ಪ್ರತೀ ವರ್ಷ ಶಿಕ್ಷಣ ಇಲಾಖೆ ಕಡೆ ಯಿಂದ ಉತ್ತಮ ಶಿಕ್ಷಕ ಎಂದು 45-47 ಮಂದಿಗೆ ಶಿಕ್ಷಕರ ದಿನವಾದ ಸೆ. 5ರಂದು ಪ್ರಶಸ್ತಿ ನೀಡಲಾಗುತ್ತಿತ್ತು. ಇನ್ನು ಮುಂದೆ ಈ ಪ್ರಶಸ್ತಿಗಳನ್ನು ಕಡಿತಗೊಳಿಸಿ ದೇಶಕ್ಕೊಂದೇ ಅತ್ಯುನ್ನತ ಪ್ರಶಸ್ತಿ ಅಥವಾ 2ರಿಂದ 3 ವಿಭಾಗ ಮಾಡಿ ಅತ್ಯುನ್ನತ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಹಾಗೆಯೇ ವಿವಿಧ ಇಲಾಖೆಗಳಿಂದ ಶಿಕ್ಷಕರಿಗೆ ನೀಡುವ ಪ್ರಶಸ್ತಿಗಳನ್ನೂ ವಿಲೀನ ಮಾಡಲಾಗುತ್ತದೆ.

ದಾದಾ ಸಾಹೇಬ್‌ ಪ್ರಶಸ್ತಿ ಮುಂದುವರಿಕೆ
ಮಾಹಿತಿ ಮತ್ತು ಪ್ರಸಾರ ಖಾತೆಯಿಂದ ನೀಡಲಾಗುವ ರಾಷ್ಟ್ರೀಯ ಸಿನೆಮಾ ಪ್ರಶಸ್ತಿಗಳು, ಅಂತಾರಾಷ್ಟ್ರೀಯ ಮಕ್ಕಳ ಸಿನೆಮಾ ಪ್ರಶಸ್ತಿಗಳು, ಭಾರತ ಚಲನಚಿತ್ರೋತ್ಸವ ಪ್ರಶಸ್ತಿಗಳ ಅಡಿಯಲ್ಲಿ ಬರುವಂಥವುಗಳನ್ನೂ ಕಡಿತಗೊಳಿಸಲು ಸೂಚಿಸಲಾಗಿದೆ. ಅಂದರೆ ದೂರದರ್ಶನ ರಾಷ್ಟ್ರೀಯ ಪ್ರಶಸ್ತಿ, ರಾಷ್ಟ್ರೀಯ ಸಮುದಾಯ ರೇಡಿಯೋ ಪ್ರಶಸ್ತಿ, ಎಫ್ಟಿಐಐ ವಿದ್ಯಾರ್ಥಿಗಳ ಪ್ರಶಸ್ತಿ ಮತ್ತು ಆಕಾಶವಾಣಿ ಪ್ರಶಸ್ತಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಜತೆಗೆ ಅಂತಾರಾಷ್ಟ್ರೀಯ ಸಿನೆಮಾ ಪ್ರಶಸ್ತಿ, ಮುಂಬಯಿ ಅಂತಾರಾಷ್ಟ್ರೀಯ ಸಿನೆಮಾ ಪ್ರಶಸ್ತಿಯ ನಗದು ಬಹುಮಾನ ನಿಲ್ಲಿಸಲು ಸೂಚಿಸಲಾಗಿದೆ. ಆದರೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಮುಂದುವರಿಯಲಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.