
ತಿರುವನಂತಪುರಂ: ಮೇಯರ್ ಪತ್ರ ವಿವಾದ: ಎಫ್ಐಆರ್ ದಾಖಲು
Team Udayavani, Nov 22, 2022, 9:30 PM IST

ತಿರುವನಂತಪುರಂ: “ಪಾಲಿಕೆಯಲ್ಲಿ ಖಾಲಿಯಿರುವ 295 ತಾತ್ಕಾಲಿಕ ಹುದ್ದೆಗಳ ಭರ್ತಿಗೆ ಪಕ್ಷದ ಕಾರ್ಯಕರ್ತರ ಪಟ್ಟಿ ಕೊಡಿ’ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿಗೆ ಮೇಯರ್ ಆರ್ಯ ರಾಜೇಂದ್ರನ್ ಅವರು ಪತ್ರ ಬರೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿವಾದ ಮುಂದುವರಿದಿದೆ.
ಮಂಗಳವಾರವೂ ಮೇಯರ್ ವಿರುದ್ಧ ಬಿಜೆಪಿ ಮತ್ತು ಯುಡಿಎಫ್ ಕೌನ್ಸಿಲರ್ಗಳು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ, “ನಕಲಿ ಪತ್ರ’ ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿ ಆರ್ಯ ಅವರು ನೀಡಿರುವ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದಾರೆ.
ಇದರ ನಡುವೆಯೇ, ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡಿರುವ ಕ್ರೈಂ ಬ್ರಾಂಚ್, “ಮೇಯರ್ ಆರ್ಯ ರಾಜೇಂದ್ರನ್ ಅವರ ಹೆಸರನ್ನು ಕೆಡಿಸಬೇಕು, ಅವರ ಘನತೆಗೆ ಧಕ್ಕೆ ತರಬೇಕು, ಪಾಲಿಕೆಗೆ ಅವಹೇಳನ ಮಾಡಬೇಕು ಎಂಬ ದುರುದ್ದೇಶದಿಂದಲೇ ಈ ಪತ್ರವನ್ನು ಸಿದ್ಧಪಡಿಸಲಾಗಿತ್ತು’ ಎಂದು ಹೇಳಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಭಾರತದಲ್ಲಿ ಪಾಕ್ ಸರ್ಕಾರದ ಟ್ವಿಟರ್ ಖಾತೆಗೆ ಮತ್ತೆ ತಡೆ
MUST WATCH
ಹೊಸ ಸೇರ್ಪಡೆ

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫಸ್ಟ್ ಲುಕ್ ಪೋಸ್ಟರ್ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್