ಮಮತಾಗೆ ಮತ್ತೊಂದು ಶಾಕ್: ಪ್ರಭಾವಿ ಮುಖಂಡ ವರ್ಮಾ ಟಿಎಂಸಿಗೆ ರಾಜೀನಾಮೆ
ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ. ನಿಮಗೆ ಶುಭ ಹಾರೈಸುತ್ತೇನೆ ಎಂದು ಉಲ್ಲೇಖಿಸಿದ್ದಾರೆ.
Team Udayavani, Aug 12, 2022, 2:23 PM IST
ಕೋಲ್ಕತಾ: ಪಶ್ಚಿಮಬಂಗಾಳದ ಟಿಎಂಸಿ ಘಟಾನುಘಟಿ ನಾಯಕರು ಇ.ಡಿ, ಸಿಬಿಐ ಬಲೆಗೆ ಸಿಕ್ಕಿಹಾಕಿಕೊಳ್ಳುತ್ತಿದ್ದು, ಮತ್ತೊಂದೆಡೆ ಟಿಎಂಸಿ ಪ್ರಭಾವಿ ಮುಖಂಡ ಪವನ್ ಕೆ ವರ್ಮಾ ಶುಕ್ರವಾರ (ಆಗಸ್ಟ್ 12)ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಇಕ್ಕಟ್ಟಿಗೆ ಸಿಲುಕುವಂತಾಗಿದೆ.
ಇದನ್ನೂ ಓದಿ:ಎಸ್ಯುವಿ ಅಪಘಾತದಲ್ಲಿ 6 ಸಾವು: ಕಾಂಗ್ರೆಸ್ ಶಾಸಕನ ಅಳಿಯನ ವಿರುದ್ಧ ಪ್ರಕರಣ
ವರ್ಮಾ ಈ ಬಗ್ಗೆ ಟ್ವೀಟ್ ಮಾಡಿದ್ದು, ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿ. ನನಗೆ ನೀಡಿದ ಆತ್ಮೀಯ ಸ್ವಾಗತ ಮತ್ತು ನಿಮ್ಮ ಪ್ರೀತಿ, ಸೌಜನ್ಯಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ. ನಿಮಗೆ ಶುಭ ಹಾರೈಸುತ್ತೇನೆ ಎಂದು ಉಲ್ಲೇಖಿಸಿದ್ದಾರೆ.
ಜೆಡಿಯು ಮಾಜಿ ಸಂಸದ ಪವನ್ ಕೆ ವರ್ಮಾ ಅವರು ಕಳೆದ ವರ್ಷ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಈ ಸಂದರ್ಭದಲ್ಲಿ ಪ್ರತಿಪಕ್ಷಗಳನ್ನು ಬಲಪಡಿಸುವ ಕೆಲಸ ಮಾಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಹೇಳಿರುವುದುನ್ನು ಸ್ಮರಿಸಿಕೊಳ್ಳಬಹುದು.
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ವಿರುದ್ಧ ಬಿಜೆಪಿ ಮೈತ್ರಿ ಪಕ್ಷವಾಗಿದ್ದ ಜೆಡಿಯು ವಿರುದ್ಧ ವಾಗ್ದಾಳಿ ನಡೆಸಿದ್ದ ಪರಿಣಾಮ ಪ್ರಶಾಂತ್ ಕಿಶೋರ್ ಮತ್ತು ವರ್ಮಾ ಅವರನ್ನು ಕಳೆದ ವರ್ಷ ಜೆಡಿಯುನಿಂದ ವಜಾಗೊಳಿಸಲಾಗಿತ್ತು.
ಭ್ರಷ್ಟಾಚಾರ ಮತ್ತು ವಿವಿಧ ಪ್ರಕರಣಗಳಲ್ಲಿ ಟಿಎಂಸಿ ಮುಖಂಡರಾದ ಪಾರ್ಥ ಚಟರ್ಜಿ ಮತ್ತು ಅನುಬ್ರತಾ ಮೊಂಡಲ್ ಅವರನ್ನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಬಂಧಿಸಿದ ನಂತರ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು