ಪ್ರಶಸ್ತಿ ಪುರಸ್ಕೃತರ ಹೆಸರು ಗೌಪ್ಯ

132 ವರ್ಷದ ಇತಿಹಾಸದಲ್ಲಿ ಮೊದಲ ಬಾರಿಗೆ ಈ ನಿರ್ಧಾರ

Team Udayavani, Apr 1, 2019, 6:00 AM IST

Ban01041903Medn

ನವದೆಹಲಿ: ಇದೊಂದು ವಿಶಿಷ್ಟ ಪ್ರಶಸ್ತಿ. ಅನುಪಮ ಸಾಧನೆಗೈದ ಈ ಸಾಧಕರನ್ನು ಗುರುತಿಸಿ ರಾಷ್ಟ್ರೀಯ ಪುರಸ್ಕಾರ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ, ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ!

ಏಕೆಂದರೆ, ಹಗಲಿರುಳು ದೇಶದ ಪರ ಮಾಹಿತಿ ಸಂಗ್ರಹಿಸುವ ಭಾರತದ ಗುಪ್ತಚರ ದಳಕ್ಕೆ ನೀಡಲಾಗುವ ಪ್ರಶಸ್ತಿ ಇದು. ಗುಪ್ತಚರ ದಳದ 132 ವರ್ಷಗಳ ಗೌಪ್ಯತೆಯ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶೇಷ ಸಾಧನೆಗೈದವರಿಗೆ ಪುರಸ್ಕಾರ
ನೀಡಲು ನಿರ್ಧರಿಸಲಾಗಿದೆ.

ಅಸಾಧಾರಣ ಆಸೂಚನಾ ಕುಶಲತಾ ಪದಕ ಎಂದು ಈ ಪುರಸ್ಕಾರಕ್ಕೆ ಹೆಸರಿಡಲಾಗಿದ್ದು, ಗುಪ್ತಚರ ವಿಭಾಗದ ಅಧಿಕಾರಿಗಳು ಮತ್ತು ರಾಜ್ಯ ಗುಪ್ತಚರ ವಿಭಾಗದಲ್ಲಿ ಅಪರೂಪದ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ. ಮೂವರು ಐಪಿಎಸ್‌ ಅಧಿಕಾರಿಗಳು, 34 ಇತರ ಗುಪ್ತಚರ ದಳದ ಅಧಿಕಾರಿಗಳಿಗೆ ಈ ಪುರಸ್ಕಾರ ನೀಡಲಾಗುತ್ತಿದೆ “ದ ಹಿಂದುಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.

ಉಗ್ರ ದಾಳಿ ವೇಳೆ ಹೋರಾಡಿದವರು, ಜಮ್ಮು ಕಾಶ್ಮೀರದಲ್ಲಿ ಸೇವೆ ಸಲ್ಲಿಸಿದವರು, ಉಗ್ರರಿಗೆ ಹಣಕಾಸು ನೆರವಿನ ಜಾಡು ಪತ್ತೆ ಹಚ್ಚಿದವರು ಹಾಗೂ ನಕ್ಸಲರು ಹಾಗೂ ಉಗ್ರ ಸಂಘಟನೆಗಳ ವಿರುದ್ಧ ಕಾರ್ಯಾಚರಣೆ ನಡೆಸಿದವರಿಗೆ ಈ ಪುರಸ್ಕಾರ ನೀಡಲು ಗುರುತಿಸಲಾಗಿದೆ. ಆದರೆ ಇವರ ಹೆಸರನ್ನು ಬಹಿರಂಗ ಪಡಿಸಿಲ್ಲ. ಇವರ ಕಾರ್ಯವಿಧಾನವೇ ಗೌಪ್ಯವಾಗಿರುವುದರಿಂದ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು,
ಇತರ ಯಾವುದೇ ವಿವರಗಳನ್ನು ಬಹಿರಂಗ ಪಡಿಸದೇ ಇರಲು ನಿರ್ಧರಿಸಲಾಗಿದೆ.

ಕಳೆದ ಹಲವು ವರ್ಷಗಳಿಂದಲೂ ಗುಪ್ತಚರ ದಳಗಳು ಕಠಿಣ ಪರಿಶ್ರಮ ವಹಿಸಿದ ಅಧಿಕಾರಿಗಳನ್ನು ಗುರುತಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಲೇ ಇದ್ದವು. ಇದಕ್ಕಾಗಿ 2016 ರಲ್ಲಿ ಒಂದು ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯವು ನೇಮಿಸಿತ್ತು. ನಂತರ ಕಳೆದ ಜುಲೈನಲ್ಲಿ ಪುರಸ್ಕಾರ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿತ್ತು.

ಗುಪ್ತಚರ ದಳಗಳು ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಾರೆ. ಅವರನ್ನು ನಾವು ಪುರಸ್ಕರಿಸದೇ ಇದ್ದರೆ ಅವರ ಪರಿಣಿತಿ ನಮ್ಮ ಗಮನಕ್ಕೆ ಬರುವುದಿಲ್ಲ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ. ಗುಪ್ತಚರ ಅಧಿಕಾರಿಗಳನ್ನು ಗುರುತಿಸದೇ ಇರುವುದರಿಂದ, ಅಲ್ಲಿಗೆ ನೇಮಕಗೊಳ್ಳಲು ಜನರು ಇಷ್ಟಪಡುವುದಿಲ್ಲ.ಪುರಸ್ಕಾರಗಳನ್ನು ನೀಡುವ ಸಂಪ್ರದಾಯದಿಂದಾಗಿ ಗುಪ್ತಚರ ಅಧಿಕಾರಿಗಳ ವಲಯದಲ್ಲಾದರೂ ಇವರಿಗೆ ಮೆಚ್ಚುಗೆ ವ್ಯಕ್ತವಾಗುತ್ತದೆ ಎಂಬ ಉದ್ದೇಶದಿಂದ ಈ ನಿರ್ಧಾರ ಮಾಡಲಾಗಿದೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.