ಇದು ವಿಫ‌ಲ ಸರಕಾರ ಲೋಕಸಭೆಯಲ್ಲಿ ಕಾಂಗ್ರೆಸ್‌ ಆರೋಪ


Team Udayavani, Feb 7, 2018, 10:55 AM IST

kharge.jpg

ಹೊಸದಿಲ್ಲಿ: ಕೇಂದ್ರ ಸರಕಾರ ಭರವಸೆಗಳನ್ನು ಈಡೇರಿಸುವಲ್ಲಿ ವಿಫ‌ಲವಾಗಿದೆ ಎಂದು ವಿಪಕ್ಷಗಳು ಲೋಕಸಭೆಯಲ್ಲಿ ಆರೋಪಿಸಿವೆ. ರಾಷ್ಟ್ರಪತಿಗಳ ಭಾಷಣದ ಮೇಲೆ ಧನ್ಯವಾದ ಸಮರ್ಪಿಸುವ ಗೊತ್ತುವಳಿ ಮೇಲೆ ಮಾತ ನಾಡಿದ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಸರಕಾರದ ನೀತಿ ಗಳಿಂದ ಜನರಿಗೆ ತೊಂದರೆಯಾಗುತ್ತಿವೆ ಎಂದರು.  ಕಾಂಗ್ರೆಸ್‌ ನೇತೃತ್ವದ ಹಿಂದಿನ ಸರಕಾರಗಳು 70 ವರ್ಷಗಳಲ್ಲಿ ಜಾರಿಗೆ ತಂದಿರುವ ಉತ್ತಮ ಕೆಲಸಗಳನ್ನು ಕಡೆಗಣಿಸುವ ಕೆಲಸವನ್ನು ಹಾಲಿ ಸರಕಾರ ಮಾಡುತ್ತಿದೆ. ಕಾಂಗ್ರೆಸ್‌ ದೇಶಕ್ಕೇನು ಮಾಡಿದೆ ಎಂಬುದನ್ನು ಹಿಂದಿನ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರಕಾರ ತಿಳಿದುಕೊಳ್ಳಲೇ ಇಲ್ಲ ಎಂದು ಅವರು ಹೇಳಿದ್ದಾರೆ. 

ಪಾಕ್‌ ಕುರಿತ ಸರಕಾರದ ನೀತಿ ವಿಫ‌ಲವಾ ಗಿದೆ. ಇದರಿಂದಾಗಿ ಆ ದೇಶ ನಮ್ಮವರನ್ನು ಕೊಲ್ಲುತ್ತಿದೆ ಎಂದು ಟೀಕಿಸಿದರು. ಹೀಗಾಗಿ 56 ಇಂಚಿನ ಎದೆ ಎಲ್ಲಿದೆ ಎಂದು ಮೋದಿಯ ವರನ್ನು ಉದ್ದೇಶಿಸಿ ಪ್ರಶ್ನಿಸಿದರು ಖರ್ಗೆ.

ರಫೇಲ್‌ ಅವ್ಯವಹಾರ: ರಫೇಲ್‌ ಯುದ್ಧ ವಿಮಾನಗಳ ಖರೀದಿ ಬಗ್ಗೆ ಮಾಹಿತಿ ಬಹಿರಂಗ ಗೊಳಿಸುವುದಿಲ್ಲ ಎಂದು ಸರಕಾರ ಹೇಳು ತ್ತಿದ್ದು, ಅದರಲ್ಲಿ ಅವ್ಯವಹಾರ ಉಂಟಾಗಿರುವ ಸಾಧ್ಯತೆ ಹೆಚ್ಚಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಪ್ರಧಾನಿ ಮೋದಿಯವರೇ ಖುದ್ದಾಗಿ ಪ್ಯಾರಿಸ್‌ಗೆ ತೆರಳಿ, ಡೀಲ್‌ನಲ್ಲಿ ಬದಲು ಮಾಡಿದ್ದಾರೆ. ಭಾರತಕ್ಕೆ ಈ ಮಾಹಿತಿ ಗೊತ್ತಿದೆ ಎಂದಿದ್ದಾರೆ. 

21.54 ಕೋಟಿ ನಕಲಿ ನೋಟು:  ಈವರೆಗೆ 21.54 ಕೋಟಿ ನಕಲಿ ನೋಟುಗಳನ್ನು ವಶಪ ಡಿಸಿಕೊಳ್ಳಲಾಗಿದೆ ಎಂದು ಸರಕಾರ ತಿಳಿಸಿದೆ. 

ಇಂದು ಪ್ರಧಾನಿ ಉತ್ತರ: ಪ್ರಧಾನಿ ಮೋದಿ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ನೀಡುವ ಗೊತ್ತುವಳಿಗೆ ಬುಧವಾರ ಉತ್ತರ ನೀಡಲಿದ್ದು, ಎಲ್ಲ ಸಂಸದರು ಹಾಜರಿ ರಬೇಕು ಎಂದು ಬಿಜೆಪಿ ವಿಪ್‌ ನೀಡಿದೆ.

ವಿಪಕ್ಷಗಳ ಆಕ್ರೋಶ: ರಾಜ್ಯಸಭೆ ಕಲಾಪ ಮುಂದೂಡುವುದಕ್ಕೆ ವಿಪಕ್ಷಗಳು ಆಕ್ಷೇಪಿ ಸಿವೆ. ಬೆಳಗ್ಗೆ 11 ಗಂಟೆಗೆ ಸಮಾವೇಶಗೊಂಡಿದ್ದ ಸದನವನ್ನು ಮಧ್ಯಾಹ್ನ 2 ಗಂಟೆವರೆಗೆ ಮುಂದೂ ಡಲಾಗಿತ್ತು. ಸಭಾಪತಿ ವೆಂಕಯ್ಯ ನಾಯ್ಡು ಕ್ರಮದಿಂದ ವಿಚಲಿತರಾದ ಪ್ರತಿಪಕ್ಷ ನಾಯಕ ಗುಲಾಂ ನಬಿ, ಸರ್ಕಾರ ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡುತ್ತಿದೆ. ಪ್ರತಿಪಕ್ಷಗಳ ಧ್ವನಿ ಅಡಗಿಸಲು ಮುಂದಾಗುತ್ತಿದೆ. 1950ರ ಬಳಿಕ ಈ ರೀತಿಯಾಗಿಲ್ಲ ಎಂದರು.

ಅವಕ್ಕಾದ ಖರ್ಗೆ
ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವಕ್ಕಾದ ಘಟನೆ ನಡೆದಿದೆ. ಬಜೆಟ್‌ನಲ್ಲಿ ಆಂಧ್ರಕ್ಕೆ ನೆೆರವು ಪ್ರಕಟಿಸಿಲ್ಲ ವೆಂದು ಟಿಡಿಪಿ ಸಂಸದರು ಪ್ರತಿಭಟನೆ ನಡೆಸುತ್ತಿದ್ದರು. ಇದೇ ಸಂದರ್ಭದಲ್ಲಿ ಖರ್ಗೆ ಮಾತನಾಡುತ್ತಿದ್ದರು. ಟಿಡಿಪಿ ಸಂಸದರೊಬ್ಬರು ಅವರ ಮುಂದೆಯೇ ನಿಂತು ಘೋಷಣೆ ಕೂಗಲಾರಂಭಿಸಿ ದರು. ಸ್ಪೀಕರ್‌ ಅವರನ್ನು ನೋಡಲು ಅಸಾಧ್ಯವಾದ್ದರಿಂದ ಸಂಸದರ ಹೆಗಲು ತಟ್ಟಿ ಕೊಂಚ ಸರಿದು ನಿಲ್ಲುವಂತೆ ಸೂಚಿಸಿ ದರು. ಇದರಿಂದ ಸಿಟ್ಟಿಗೆದ್ದ ಆ ಸಂಸದ “ನೀವೇಕೆ ನನಗೆ ಹೊಡೆಯುತ್ತೀರಿ? ಇದು ಒಳ್ಳೆಯದಲ್ಲ’ ಎನ್ನತೊಡಗಿದರು. ಇದರಿಂದ ಅವಕ್ಕಾದ ಖರ್ಗೆಯವರಿಗೆ ಕೆಲ ಕಾಲ ಮಾತುಗಳೇ ಹೊರಡಲಿಲ್ಲ. ಅನಂತರ ಮತ್ತೂಬ್ಬ ಟಿಡಿಪಿ ಸಂಸದ ಬಂದು ಸಮಾಧಾನಪಡಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.