ಹಿಂದಿನ ಒಪ್ಪಂದಕ್ಕಿಂತ ಇದೇ ಉತ್ತಮ: ಕೇಂದ್ರ


Team Udayavani, Feb 8, 2018, 8:15 AM IST

25.jpg

ನವದೆಹಲಿ: ಫ್ರಾನ್ಸ್‌ ಜತೆಗಿನ ರಾಫೆಲ್‌ ಡೀಲ್‌ ಕುರಿತಂತೆ ಕಾಂಗ್ರೆಸ್‌ ಎತ್ತಿರುವ “ಅನುಮಾನ’ಗಳ ಬಗ್ಗೆ ಉತ್ತರ ಕೊಟ್ಟಿರುವ ಕೇಂದ್ರ ಸರ್ಕಾರ, ನಿಮ್ಮ ಅವಧಿಯ ಡೀಲ್‌ಗಿಂತಲೂ ಇದು ಅತ್ಯುತ್ತಮವಾಗಿದೆ ಎಂದು ಹೇಳಿದೆ. ಈ ಸಂಬಂಧ ರಕ್ಷಣಾ ಇಲಾಖೆ ಹೇಳಿಕೆಯೊಂದನ್ನು ಹೊರಡಿಸಿದ್ದು, ಕಳೆದ ಸರ್ಕಾರಕ್ಕಿಂತ ಚೆನ್ನಾಗಿಯೇ ವ್ಯವಹರಿಸಿದ್ದೇವೆ ಎಂದು ಹೇಳಿದೆ. ಹಾಗೆಯೇ ಕಾಂಗ್ರೆಸ್‌ ಹೇಳಿದಂತೆ ಈ ಡೀಲ್‌ನಲ್ಲಿ ಅನುಮಾನ ಪಡುವ ಯಾವ ಸಂಗತಿಗಳೂ ಇಲ್ಲವೆಂದೂ ಹೇಳಿದೆ. 

ಇದರ ಜತೆಗೆ 36 ರಾಫೆಲ್‌ ವಿಮಾನಗಳ ಖರೀದಿಗೆ ಮಾಡಲಾಗಿರುವ ಅಂದಾಜು ವೆಚ್ಚದ ಬಗ್ಗೆ ಸಂಸತ್‌ನಲ್ಲೇ ಮಾಹಿತಿ ನೀಡಲಾಗಿದೆ. ಆದರೆ, 2008ರಲ್ಲಿ ಈ ಯುದ್ಧ ವಿಮಾನಗಳನ್ನು ಖರೀದಿ ಮಾಡುವಾಗ ಮಾಡಿಕೊಂಡಿರುವ ಒಪ್ಪಂದದಂತೆ ನಿಖರ ವೆಚ್ಚ ಬಹಿರಂಗ ಮಾಡಲು ಸಾಧ್ಯವಿಲ್ಲ ಎಂದೂ ಅದು ತನ್ನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ. 

ಕಾಂಗ್ರೆಸ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಲಾಖೆ, ಇಂಥ ಆರೋಪಗಳಿಗೆ ಉತ್ತರ ಕೊಡುವುದು ಸರಿಯಾದ ಕ್ರಮವೂ ಅಲ್ಲ. ಆದರೆ, ಪ್ರತಿಪಕ್ಷಗಳು ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ಇದರಿಂದಾಗಿ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ ಎಂಬ ಕಾರಣಕ್ಕಾಗಿ ಸ್ಪಷ್ಟನೆ ನೀಡಲಾಗುತ್ತಿದೆ ಎಂದೂ ಹೇಳಿದೆ. 

ಅಲ್ಲದೆ ರಾಫೆಲ್‌ ಕಂಪನಿಯೊಂದಿಗೆ ಡೀಲ್‌ ಮುಕ್ತಾಯವಾಗಿದ್ದರೂ ಬೇರೊಂದು ಕಂಪನಿ ಜತೆ ಸರ್ಕಾರ ಏಕೆ ಮಾತುಕತೆ ನಡೆಸಲಿಲ್ಲವೆಂಬ ಆರೋಪಕ್ಕೂ ತಿರುಗೇಟು ನೀಡಿರುವ ಸರ್ಕಾರ, ಯುಪಿಎ ಸರ್ಕಾರವೇ ಈ ಹಿಂದೆ ಒಪ್ಪಂದವೊಂದು ಮುಕ್ತಾಯದ ಹಂತಲ್ಲಿದ್ದಾಗ ಬೇರೆ ಕಂಪನಿಗಳು ಬಿಡ್‌ ಹಾಕಲು ಮುಂದೆ ಬಂದಿದ್ದರೂ ಇದನ್ನು ತಿರಸ್ಕರಿಸಿ ರಾಫೆಲ್‌ನೊಂದಿಗೇ 2012ರಲ್ಲಿ ಡೀಲ್‌ ಮುಂದುವರಿಸಿದ್ದು ಮರೆತಿದೆ ಎಂದು ಹೇಳಿದೆ. ಅಲ್ಲದೆ 36 ವಿಮಾನಗಳ ಖರೀದಿ ಸಂಬಂಧ ಫ್ರಾನ್ಸ್‌ನೊಂದಿಗೆ ಸಾಮರ್ಥ್ಯ, ದರ, ಉಪಕರಣಗಳು, ವಿತರಣೆ, ನಿರ್ವಹಣೆ, ತರಬೇತಿ ವಿಚಾರದಲ್ಲಿ ಉತ್ತಮವಾಗಿಯೇ ಮಾತುಕತೆ ನಡೆಸಲಾಗಿದೆ ಎಂದೂ ಇಲಾಖೆ ಸ್ಪಷ್ಟವಾಗಿ ಹೇಳಿದೆ. 

ರಾಫೆಲ್‌ ಬಗ್ಗೆ ಪ್ರತಿಪಕ್ಷಗಳ ಟೀಕೆ: ಈ ಮಧ್ಯೆ, ಸಂಸತ್‌ನ ಉಭಯ ಸದನಗಳಲ್ಲೂ ಕಾಂಗ್ರೆಸ್‌ ಸೇರಿದಂತೆ ಎಲ್ಲಾ ಪ್ರತಿಪಕ್ಷಗಳು ರಾಫೆಲ್‌ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದವು. ಅಲ್ಲದೆ, ಹಿಂದೆ ಯುಪಿಎ ಸರ್ಕಾರದಲ್ಲಿನ ಡೀಲ್‌ಗಿಂತಲೂ ನಾಲ್ಕು ಪಟ್ಟು ಹೆಚ್ಚು ಹಣ ನೀಡಲಾಗಿದೆ. ಅಲ್ಲದೆ ರಕ್ಷಣಾ ಸಚಿವರಿಗೇ ಗೊತ್ತಿಲ್ಲದಂತೆ ಪ್ರಧಾನಿಗಳೇ ಫ್ರಾನ್ಸ್‌ ಸರ್ಕಾರದ ಜತೆ ಮಾತುಕತೆ ನಡೆಸಿದ್ದಾರೆ ಎಂದು ಆರೋಪಿಸಿದವು.

ರಾಫೆಲ್‌ ಡೀಲ್‌ ಕುರಿತ ಕಾಂಗ್ರೆಸ್‌ ಆರೋಪಕ್ಕೆ ರಕ್ಷಣಾ ಇಲಾಖೆ ಸ್ಪಷ್ಟನೆ
ಯುಪಿಎ ಅವಧಿಗಿಂತಲೂ ಚೆನ್ನಾಗಿಯೇ ವ್ಯವಹರಿಸಿ ಖರೀದಿಸಿದ್ದೇವೆ
ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಕೇಂದ್ರ ಸರ್ಕಾರದ ಪ್ರತ್ಯುತ್ತರ
ಪ್ರತಿಪಕ್ಷಗಳ ಆರೋಪದಿಂದಾಗಿ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಈ ಸ್ಪಷ್ಟನೆ

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.