ದೇಶದ ಹಲವು ರಾಜ್ಯಗಳಲ್ಲಿ ಮೆಡಿಕಲ್ ಆಕಿಜನ್ಸ್ ಕೊರತೆ
ಬಳಕೆ ಪ್ರಮಾಣ ಪ್ರತಿ ದಿನಕ್ಕೆ 2,800 ಟನ್ಗೆ ಏರಿಕೆಯಾಗಿದೆ
Team Udayavani, Sep 29, 2020, 6:33 PM IST
ನವದೆಹಲಿ: ದೇಶದ ಹಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಉಂಟಾಗಿದೆ. ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದೇಶದಲ್ಲಿ
ಹೆಚ್ಚಾಗುತ್ತಿರುವಂತೆಯೇ ಈ ಆತಂಕಕಾರಿ ವಿಚಾರ ಹೊರಬಿದ್ದಿದೆ.
ದೇಶದ ಪೂರ್ವ ಭಾಗ ಮತ್ತು ಪಶ್ಚಿಮ ಭಾಗಗಳಲ್ಲಿ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡುವ ಸ್ಥಾವರಗಳು ಹೆಚ್ಚಾಗಿವೆ. ಆದರೆ, ನವದೆಹಲಿ, ಮಧ್ಯ ಪ್ರದೇಶ,ಬಿಹಾರಗಳಲ್ಲಿಅಂಥ ಸ್ಥಾವರಗಳ ಕೊರತೆ ಇದೆ.
ಮಾರ್ಚ್ನಲ್ಲಿ 1,300 ಸೋಂಕಿನ ಪ್ರಕರಣಗಳು ವರದಿಯಾಗಿದ್ದಾಗ 750 ಟನ್ ಮೆಡಿಕಲ್ ಆಕ್ಸಿಜನ್ ಬಳಕೆ ಮಾಡಲಾಗಿತ್ತು ಎಂದು ಅಖಿಲ ಭಾರತ ಅನಿಲ
ಉತ್ಪಾದಕರ ಸಂಘಟನೆ ಅಧ್ಯಕ್ಷ ಸಾಕೇತ್ ಟಿಕು ತಿಳಿಸಿದ್ದಾರೆ. ಈ ತಿಂಗಳಲ್ಲಿ ಅದರ ಬಳಕೆ ಪ್ರಮಾಣ ಪ್ರತಿ ದಿನಕ್ಕೆ 2,800 ಟನ್ಗೆ ಏರಿಕೆಯಾಗಿದೆ ಎಂದಿದ್ದಾರೆ.
ಹೀಗಾಗಿ, ಆಸ್ಪತ್ರೆ ಮತ್ತು ವೈದ್ಯಕೀಯ ಅಗತ್ಯ ಪೂರೈಸಲು ಹೆಣಗಾಡುವಂತಾಗಿದೆ ಎಂದರು.
ದೇಶದಲ್ಲಿ ಕೋವಿಡ್ ಸೋಂಕಿನಿಂದ ಗುಣ ಮುಖರಾಗುವವರ ಶೇಕಡಾವಾರು ಪ್ರಮಾಣ 83ಕ್ಕೆ ಏರಿಕೆಯಾಗಿದೆ. ಕರ್ನಾಟಕ, ಮಹಾರಾಷ್ಟ್ರ. ಆಂಧ್ರಪ್ರದೇಶ, ತಮಿಳುನಾಡು, ಉ.ಪ್ರದೇಶ, ದೆಹಲಿ, ಒಡಿಶಾ, ಕೇರಳ, ಪ. ಬಂಗಾಳ, ಮಧ್ಯ ಪ್ರದೇಶಗಳಿಂದ ಶೇ.73ರಷ್ಟು ಗುಣ ಮುಖರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ದಿನವಹಿ 20 ಸಾವಿರ ಗುಣಮುಖರಾಗಿದ್ದರೆ, ಕರ್ನಾಟಕ, ಆಂಧ್ರದಲ್ಲಿ 7 ಸಾವಿರಕ್ಕಿಂತಲೂ ಅಧಿಕ ಮಂದಿ ಚೇತರಿಸಿಕೊಂಡಿದ್ದಾರೆ.
ಸೋಮವಾರ ಬೆಳಗ್ಗೆ 8 ಗಂಟೆಯಿಂದ ಮಂಗಳವಾರ ಬೆಳಗ್ಗೆ 8 ಗಂಟೆಯ ವರೆಗಿನ ಅವಧಿಯಲ್ಲಿ 70,589 ಹೊಸ ಕೇಸುಗಳು ದಾಖಲಾಗಿವೆ. 776 ಮಂದಿ ಅಸುನೀಗಿದ್ದಾರೆ. ಕಳೆದ ಕೆಲ ದಿನಗಳಿಗೆ ಹೋಲಿಕೆ ಮಾಡಿದರೆ ದಿನವಹಿ ಸೋಂಕು ದಾಖಲೆ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ