4000 ಜನಸಂಖ್ಯೆ ಇರುವ ಈ ಪುಟ್ಟ ಹಳ್ಳಿಯಲ್ಲಿದ್ದಾರೆ 150 ಮಂದಿ ವೈದ್ಯರು

ದೇಶ-ವಿದೇಶಗಳಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ ಈ ಹಳ್ಳಿಯ ವೈದ್ಯರು

Team Udayavani, Feb 19, 2023, 7:31 PM IST

4000 ಜನಸಂಖ್ಯೆ ಇರುವ ಈ ಪುಟ್ಟ ಹಳ್ಳಿಯಲ್ಲಿದ್ದಾರೆ 150 ಮಂದಿ ವೈದ್ಯರು

ಆಂಧ್ರಪ್ರದೇಶ: ಅದೊಂದು 4000 ಜನಸಂಖ್ಯೆ ಇರುವ ಪುಟ್ಟ ಹಳ್ಳಿ, ಈ ಹಳ್ಳಿಯಲ್ಲಿರುವುದು 7 ತರಗತಿವರೆಗಿನ ಶಾಲೆ ಆದರೆ ಈ ಪುಟ್ಟ ಹಳ್ಳಿಯಲ್ಲಿ ಕಲಿತ ಸುಮಾರು 150 ಮಂದಿ ವೈದ್ಯರಾಗಿ ಉನ್ನತ ಹುದ್ದೆಯಲ್ಲಿ ದೇಶ ವಿದೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹೌದು ಇದು ನಂಬಲೇ ಬೇಕಾದ ವಿಚಾರ, ಆಂಧ್ರಪ್ರದೇಶದ ಅಮದಲವಾಲಸ ಮಂಡಲ್‌ನಲ್ಲಿರುವ ಕಾನುಗುಲವಾಲಸ ಎಂಬ ಪುಟ್ಟ ಹಳ್ಳಿಯೇ ಈಗ ಹೆಚ್ಚು ಪ್ರಸಿದ್ದಿ ಪಡೆದ ಹಳ್ಳಿಯಾಗಿದೆ.
ಈ ಹಳ್ಳಿಯಲ್ಲಿ 500 ಕುಟುಂಬಗಳು ವಾಸಿಸುತ್ತಿದ್ದು, ಸುಮಾರು 2,200 ಮತದಾರರಿದ್ದಾರೆ. ಮಂಡಲ ಪ್ರಧಾನ ಕಚೇರಿಯಿಂದ ಈ ಗ್ರಾಮಕ್ಕೆ ಕೇವಲ 2 ಕಿ.ಮೀ.ಗಳಷ್ಟೇ ದೂರವಿದ್ದರೂ, ಕೇವಲ ಪ್ರಾಥಮಿಕ ಶಿಕ್ಷಣ ಮಾತ್ರ ಈ ಹಳ್ಳಿಯಲ್ಲಿ ಪಡೆಯಬಹುದಾಗಿತ್ತು. ಆದರೂ ಈ ಹಳ್ಳಿಯಲ್ಲಿ ಸುಮಾರು 1970ರಿಂದ ಇಂದಿನವರೆಗೆ ಸುಮಾರು 150 ಮಂದಿ ವೈದ್ಯರಾಗಿ ಸರಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹಳ್ಳಿಯ ವೈದ್ಯರ ಹಿನ್ನೆಲೆ : 1970 ರ ದಶಕದಲ್ಲಿ ಗ್ರಾಮದ ಮೊದಲ ವೈದ್ಯರಾದ ಬೆಂಡಿ ಚಂದ್ರ ರಾವ್ ಅವರಿಂದ ಕಾರ್ಯ ಪ್ರಾರಂಭವಾಯಿತು, ನಂತರ ಗ್ರಾಮದ ನೂಕಾ ಭಾಸ್ಕರ ರಾವ್ ಅವರು ಚಂದ್ರರಾವ್ ಅವರಿಂದ ಸ್ಫೂರ್ತಿ ಪಡೆದರು ಎಂಬುದು ಇಲ್ಲಿನ ಸ್ಥಳೀಯರ ಮಾತು, ಅಷ್ಟು ಮಾತ್ರವಲ್ಲದೆ ಈ ಜೋಡಿ ವೈದ್ಯರು ಈ ಊರಿನಲ್ಲಿ ವೈದ್ಯಕೀಯ ಅಧ್ಯಯನದತ್ತ ಆಸಕ್ತಿ ತೋರಿಸಲು ಪ್ರಾರಂಭಿಸಿದ ಅನೇಕ ಯುವಕರಿಗೆ ಸ್ಫೂರ್ತಿಯಾಗಿದ್ದರಂತೆ. ಈ ಗ್ರಾಮವು 1985 ರಿಂದ ಪ್ರತಿ ವರ್ಷ ಕನಿಷ್ಠ ಎರಡರಿಂದ ಐದು ವೈದ್ಯರನ್ನು ಸೃಷ್ಟಿ ಮಾಡುತ್ತಿದೆಯಂತೆ.

ಕನುಗುಲವಲಸೆಯಲ್ಲಿ ಕಲಿತ ವೈದ್ಯರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಆಸ್ಪತ್ರೆ, ವಿಶಾಖಪಟ್ಟಣದ ಕಿಂಗ್ ಜಾರ್ಜ್ ಆಸ್ಪತ್ರೆ, ಏಮ್ಸ್ ಮಂಗಳಗಿರಿ, ನಿಮ್ಸ್ ಹೈದರಾಬಾದ್ ಮತ್ತು ದೇಶದ ಇತರ ಪ್ರತಿಷ್ಠಿತ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಈ ಗ್ರಾಮದ ಕೆಲವು ವೈದ್ಯರು ವಿದೇಶದ ವಿವಿಧ ಆಸ್ಪತ್ರೆಗಳು ಮತ್ತು ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುತ್ತಿದ್ದಾರಂತೆ.

ಈ ಕುರಿತು ಮಾತನಾಡಿದ ನೂಕಾ ಭಾಸ್ಕರ ರಾವ್, “ನಾನು ಕೃಷಿ ಕುಟುಂಬದಿಂದ ಬಂದವನು ಮತ್ತು ನನ್ನ ಪೋಷಕರು ಅನಕ್ಷರಸ್ಥರು. ನಮ್ಮ ಗ್ರಾಮದ ಮೊದಲ ವೈದ್ಯರಾಗಿದ್ದ ಬೆಂಡಿ ಚಂದ್ರರಾವ್ ಅವರ ಪ್ರೇರಣೆಯಿಂದ 1971ರಲ್ಲಿ ನಾನು ಎಂಬಿಬಿಎಸ್ ಮುಗಿಸಿ ವೈದ್ಯನಾದೆ. ಅಮದಾಲವಲಸದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಅಭ್ಯಾಸ ಮಾಡಿ ನಂತರ ಸರ್ಕಾರಿ ಸೇವೆಗೆ ಸೇರಿದ್ದೇನೆ. ನಾನು 2006 ರಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಡಾ.ಬೊಡ್ಡೆಪಾಲು ಸುರೇಶ್, “ನಮ್ಮ ಗ್ರಾಮದಲ್ಲಿ ಇಂದಿನ ಪೀಳಿಗೆಯ ಯುವಕರಿಗೆ ವೈದ್ಯನಾಗುವುದು ಗುರಿಯಾಗಿದೆ. ಬಹುಪಾಲು ಯುವಕರು ವೈದ್ಯಕೀಯ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ನಮ್ಮ ಹಿರಿಯರ ಮಾರ್ಗದರ್ಶನ ಯುವಕರು ವೈದ್ಯರಾಗಲು ಸಹಕಾರಿಯಾಗಿದೆ. ಅಷ್ಟುಮಾತ್ರವಲ್ಲದೆ ಇಲ್ಲಿನ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದೇನೆ ಅಷ್ಟುಮಾತ್ರವಲ್ಲದೆ ಹಳ್ಳಿಯಿಂದ ಬರುವ ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ಜೊತೆಗೆ ಅವರ ಪ್ರಯಾಣ ವೆಚ್ಚವನ್ನೂ ತಾವೇ ಭರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಸಮರಕ್ಕಿಳಿದ ಡಿ.ರೂಪಾ ; ಖಾಸಗಿ ಫೋಟೋಗಳ ಬಿಡುಗಡೆ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.