ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!
Team Udayavani, Oct 28, 2020, 12:04 AM IST
ಚೆನ್ನೈ: ತಮಿಳುನಾಡಿನ ತೂತುಕುಡಿಯಲ್ಲಿ ಪೊಲೀಸರ ದೌರ್ಜನ್ಯಕ್ಕೆ ಒಳಗಾಗಿ ಅಪ್ಪ-ಮಗ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ಜಯರಾಜ್ ಹಾಗೂ ಬೆನ್ನಿಕ್ಸ್ಗೆ ಸುಮಾರು 7 ಗಂಟೆಗಳ ಕಾಲ ಪೊಲೀಸರು ಚಿತ್ರಹಿಂಸೆ ನೀಡಿದ್ದರು ಎಂದು ಸಿಬಿಐ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಸಾತಂಕುಲಂ ಪೊಲೀಸ್ ಠಾಣೆಯಲ್ಲಿ ಅಪ್ಪ-ಮಗನ ಮೇಲೆ ಜೂ.9ರ ರಾತ್ರಿ 7.45ರಿಂದ ಮಾರನೇ ದಿನ ಬೆಳಗಿನ ಜಾವ 3 ಗಂಟೆಯವರೆಗೂ ಪೊಲೀಸರು ಹಲ್ಲೆ ನಡೆಸಿದ್ದರು. ಅವರ ಬಟ್ಟೆಗಳನ್ನು ಬಿಚ್ಚಿ ಇನ್ನಷ್ಟು ಥಳಿಸುವಂತೆ ಇತರೆ ಪೊಲೀಸರಿಗೆ ಇನ್ಸ್ಪೆಕ್ಟರ್ ಎಸ್. ಶ್ರೀಧರ್ ಸೂಚಿಸುತ್ತಿದ್ದರು. ಅವರ ರಕ್ತದ ಕಲೆಗಳು ಪೊಲೀಸರ ಲಾಠಿ ಹಾಗೂ ಠಾಣೆಯ ಗೋಡೆಗಳಲ್ಲೂ ಅಂಟಿಕೊಂಡಿದ್ದವು ಎಂದೂ ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಲಾಕ್ಡೌನ್ ನಿಯಮ ಉಲ್ಲಂಘಿಸಿ ಕತ್ತಲಾದ ಬಳಿಕವೂ ತಮ್ಮ ಮೊಬೈಲ್ ರೀಚಾರ್ಜ್ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ಜೂ.9ರಂದು ಅಪ್ಪ- ಮಗನನ್ನು ಪೊಲೀಸರು ಬಂಧಿಸಿದ್ದರು. ನಂತರ ಪೊಲೀಸರು ನೀಡಿದ ಚಿತ್ರಹಿಂಸೆಯಿಂದಾಗಿ ಇಬ್ಬರೂ ಸಾವಿಗೀಡಾ ಗಿದ್ದರು. ಈ ಘಟನೆ ತಮಿಳುನಾಡಿನಾ ದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ