ಮಾಸ್ಕ್‌ ಧರಿಸಿ ಇಲ್ಲವೇ ಕೋವಿಡ್‌ ಕೇಂದ್ರದಲ್ಲಿ ಸೇವೆ ಸಲ್ಲಿಸಿ: ಗುಜರಾತ್‌ ಹೈಕೋರ್ಟ್


Team Udayavani, Dec 2, 2020, 3:32 PM IST

Mask

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಅಹ್ಮದಾಬಾದ್‌: ಕೋವಿಡ್‌ 19 ಸೋಂಕನ್ನು ತಡೆಗಟ್ಟಲು ಸಾಮಾಜಿಕ ಅಂತರ ಸೇರಿದಂತೆ ಮಾಸ್ಕ್‌ ಧರಿಸುವ ನಿಯಮಗಳನ್ನು ಜಾರಿಗೆ ತರಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಅಂತರ ಕಣ್ಮರೆಯಾಗಿದ್ದು ಕನಿಷ್ಠ ಮಾಸ್ಕ್‌ ಅನ್ನೂ ಧರಿಸದೇ ಜನರು ಓಡಾಡುತ್ತಿದ್ದಾರೆ. ಕೋವಿಡ್‌ ಭಯವಿಲ್ಲದೇ ಈ ರೀತಿ ಮಾಸ್ಕ್‌ ಬಿಟ್ಟು ಓಡಾಡುವವರಿಗೆ ಗುಜರಾತ್‌ ಹೈಕೋರ್ಟ್‌ ಶಾಕ್‌ ಕೊಟ್ಟಿದೆ.

ಗುಜರಾತ್‌ನಲ್ಲಿ ಮಾಸ್ಕ್‌ ಧರಿಸದೇ ಓಡಾಡುವವರು ಇನ್ನು ಮುಂದೆ ಅಲ್ಲಿನ ಕೋವಿಡ್‌ ಕೇಂದ್ರಗಳಲ್ಲಿ 5ರಿಂದ 6 ಗಂಟೆಗಳ ಕಾಲ ಸೇವೆ ಸಲ್ಲಿಸಬೇಕಾಗುತ್ತದೆ. ಈ ಸೇವೆಯ ದಿನಗಳನ್ನು 5ರಿಂದ 15ರ ವರೆಗೆ ವಿಸ್ತರಿಸಬಹುದಾಗಿದೆ. ಶಿಕ್ಷೆಯ ರೂಪದಲ್ಲಿ ನೀಡಲಾಗುವ ಈ ಸೇವಾ ದಿನಗಳನ್ನು ಜನರ ವಯಸ್ಸು ಮತ್ತು ವೈದ್ಯಕೀಯ ದಾಖಲೆಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಧರಿಸಲಾಗುತ್ತದೆ.

ದೇಶದ ಕೆಲವು ಭಾಗಗಳಲ್ಲಿ ಎರಡನೇ ತರಂಗದ ಕೋವಿಡ್‌ ಪ್ರಸರಣವಾಗುತ್ತಿದ್ದು ಅದರಲ್ಲಿಯೂ ಗುಜರಾತ್‌ನಲ್ಲಿ ಸೋಂಕು ತೀವ್ರತೆಯನ್ನು ಹೆಚ್ಚಿಸಿಕೊಂಡಿದೆ. ಎರಡನೇ ತರಂಗದಲ್ಲಿರುವಾಗಲೂ ಅನೇಕ ಜನರು ಮಾಸ್ಕ್‌ ಧರಿಸುವುದಿಲ್ಲ. ಹೀಗಾಗಿ ಸೋಂಕಿನ ತೀವ್ರತೆಯನ್ನು ಅರಿಯದೇ ನಿರ್ಲಕ್ಷ್ಯ ತೋರಿಸುವ ಜನರನ್ನು ಕೋವಿಡ್‌ ಕೇಂದ್ರದಲ್ಲಿ ಸೇವೆ ಸಲ್ಲಿಸಲು ಸೂಚಿಸಬೇಕು ಎಂಬ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಬುಧವಾರ ತೀರ್ಪು ನೀಡಿದೆ. ಇದಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನು ಶೀಘ್ರ ಹೊರಡಿಸುವಂತೆ ಸರಕಾರವನ್ನು ಕೇಳಿದೆ.

ಕೇವಲ ದಂಡ ಸಾಕಾಗುವುದಿಲ್ಲ
ಮಾಸ್ಕ್‌ ನಿಯಮ ಉಲ್ಲಂಘನೆಯ ಕುರಿತಾದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರ ನ್ಯಾಯಪೀಠದಲ್ಲಿ ನಡೆಸಲಾಯಿತು. ಮಾಸ್ಕ್‌ ಧರಿಸದವರಿಂದ ದಂಡ ವಸೂಲಿ ಮಾಡಿದರೆ ಸಾಲದು ಎಂದು ನ್ಯಾಯಪೀಠ ಹೇಳಿದೆ. ಹೀಗಾಗಿ ಇಂತಹ ಜನರು ಕೋವಿಡ್‌ ಕೇಂದ್ರದಲ್ಲಿ ಸೇವೆ ಮಾಡುವ ಜವಾಬ್ದಾರಿಯನ್ನು ಹೊರಬೇಕು ಎಂದಿದೆ. ಇದು ಮಹತ್ವದ ವಿಷಯವಾಗಿದೆ, ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಅವಶ್ಯಕ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

108 ಆಂಬ್ಯುಲೆನ್ಸ್ ಸೇವೆ ಮತ್ತು 104 ಫೋನ್ ಕರೆಗಳ ಸೇವೆಯನ್ನು ಜಾರಿಗೆ ತಂದಿದೆ ಎಂದು ರಾಜ್ಯ ಸರಕಾರವು ನ್ಯಾಯಾಲಯದಲ್ಲಿ ಹೇಳಿದೆ. ಆಸ್ಪತ್ರೆಗಳಿಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಆಮ್ಲಜನಕದ ಕೊರತೆ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಮಾಸ್ಕ್‌ ಧರಿಸದೇ ಸಮಸ್ಯೆಯನ್ನುಂಟು ಮಾಡುವವರ ವಿರುದ್ಧ ಕ್ರಮಕೈಗೊಳ್ಳಲು ಕಠಿನ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.