ತೌಖ್ತೇ ಚಂಡಮಾರುತ : ಗೋವಾ ಕಡಲ ತೀರದಲ್ಲಿ ಅವಾಂತರ
Team Udayavani, May 16, 2021, 4:40 PM IST
ಸಾಂದರ್ಭಿಕ ಚಿತ್ರ
ಪಣಜಿ: ಕಳೆದ ಕೆಲ ದಿನಗಳಿಂದ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಎದ್ದಿರುವ ತೌಖ್ತೇ ಚಂಡಮಾರುತದ ಪರಿಣಾಮವಾಗಿ ಗೋವಾ ರಾಜ್ಯಾದ್ಯಂತ ಭಾರಿ ಗಾಳಿ ಸಹಿತ ಮಳೆಯಾಗಿದೆ.
ಇದನ್ನೂ ಓದಿ : ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ: ಸಚಿವ ಡಾ.ಕೆ.ಸುಧಾಕರ್
ಭಾನುವಾರ(ಮೇ.16) ಬೆಳಿಗ್ಗೆ ಗೋವಾದ ಕಡಲ ತೀರದಲ್ಲಿ ಚಂಡಮಾರುತದ ಭೀಕರತೆ ಆತಂಕ ಸೃಷ್ಠಿಸುವಂತಾಗಿದೆ. ತೀರ ಭಾಗದಲ್ಲಿ ಚಂಡ ಮಾರುತದ ಕಾರಣದಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ತೀರ ವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
ಸಮುದ್ರದಲ್ಲಿ ಆಳೆತ್ತರದ ಅಲೆಗಳು ಏಳಲಾರಂಭಿಸಿದ್ದು, ಅಲೆಗಳು ದಡಕ್ಕೆ ಬಂದು ಅಪ್ಪಳಿಸುತ್ತಿವೆ. ಸಮುದ್ರದ ಅಲೆಗಳ ರಭಸಕ್ಕೆ ಕೆಲವೆಡೆ ಕಡಲಕೊರೆತವುಂಟಾಗುತ್ತಿದೆ. ರಾಜ್ಯದ ಹಲವೆಡೆ ಬೃಹತ್ ಗಾತ್ರದ ಮರಗಳು ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಲವು ಮನೆಗಳ ಮೇಲೆ ಮರಗಳು ಬಿದ್ದು ದೊಡ್ಡ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಈ ಕುರಿತಂತೆ ಮಾಹಿತಿ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಎನ್ ಡಿ ಆರ್ ಎಫ್ ತಂಡ ಶನಿವಾರವೇ(ಮೇ.15) ರಾಜ್ಯಕ್ಕೆ ಆಗಮಿಸಿದ್ದು, ಶಸ್ತ್ರ ಸಜ್ಜಿತವಾಗಿದೆ. ಯಾವುದೇ ತುರ್ತು ಸಂದರ್ಭವನ್ನು ಎದುರಿಸಲು ಸಜ್ಜಾಗಿದೆ. ಮುಂದಿನ ಮೂರು ದಿನಗಳ ವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಮತ್ತು ನದಿ ತೀರಗಳಲ್ಲಿ ವಾಸಿಸುವ ಜನರು ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಜನರಿಂದ ಹೆಚ್ಚಿನ ದರ ವಸೂಲು ಮಾಡುವ ಆಸ್ಪತ್ರೆಗಳ ವಿರುದ್ಧ ಕ್ರಮ: ರಮೇಶ ಜಾರಕಿಹೊಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ