ಕೊನೆಗೂ ಅಂತ್ಯಕಂಡ ದೆಹಲಿ ಪೊಲೀಸರ 11 ಗಂಟೆಗಳ ಮುಷ್ಕರ
Team Udayavani, Nov 5, 2019, 10:28 PM IST
ನವದೆಹಲಿ: ಕಳೆದ ಶನಿವಾರ ವಕೀಲರೊಂದಿಗಿನ ಘರ್ಷಣೆಯಲ್ಲಿ ತಮಗಾದ ಅನ್ಯಾಯಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ದೆಹಲಿ ಪೊಲೀಸ್ ಸಿಬ್ಬಂದಿ ಕಳೆದ 11 ಗಂಟೆಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಕೈಬಿಟ್ಟಿದ್ದಾರೆ. ನ್ಯಾಯಕ್ಕಾಗಿ ಆಗ್ರಹಿಸಿ ಸಾವಿರಾರು ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರು ಪೊಲೀಸ್ ಮುಖ್ಯ ಕಛೇರಿಯ ಮುಂಭಾಗ ಸತ್ಯಾಗ್ರಹವನ್ನು ನಡೆಸುತ್ತಿದ್ದರು.
ಪೊಲೀಸ್ ಸಿಬ್ಬಂದಿ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ನೀಡಿದ ಭರವಸೆಯ ಮೇಲೆ ಪೊಲೀಸ್ ಸಿಬ್ಬಂದಿ ತಮ್ಮ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ.
ತೀಸ್ ಹಝಾರಿ ನ್ಯಾಯಾಲಯಗಳ ಸಂಕೀರ್ಣದಲ್ಲಿ ಕಳೆದ ಶನಿವಾರ ವಕೀಲರು ಮತ್ತು ಪೊಲೀಸರ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಈ ಘಟನೆಗೆ ಕಾರಣರಾದ ಆರೋಪಿಗಳ ವಿರುದ್ದ ದೆಹಲಿ ಹೈಕೋರ್ಟಿನ ಆದೇಶದ ಪ್ರಕಾರ ಹೊಸ ದೂರುಗಳನ್ನು ದಾಖಲಿಸಿಕೊಳ್ಳುವುದಾಗಿ ವಿಶೇಷ ಪೊಲೀಸ್ ಆಯುಕ್ತ (ಅಪರಾಧ ವಿಭಾಗ) ಸತೀಶ್ ಗೋಲ್ಚಾ ಅವರು ಭರವಸೆ ನೀಡುವ ಮೂಲಕ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರು ನಡೆಸುತ್ತಿರುವ ಸತ್ಯಾಗ್ರಹವನ್ನು ಕೂಡಲೇ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮಾಡಿಕೊಂಡ ಮನವಿಗೆ ಸ್ಪಂದಿಸಿದ ಪ್ರತಿಭಟನಾಕಾರರು ತಮ್ಮ ಸತ್ಯಾಗ್ರಹವನ್ನು ಕೈಬಿಟ್ಟರು.
ತೀಸ್ ಹಝಾರಿ ಘಟನೆಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಕನಿಷ್ಟ 25 ಸಾವಿರ ರೂಪಾಯಿಗಳ ಪರಿಹಾರವನ್ನು ಒದಗಿಸಲಾಗುವುದು ಎಂದೂ ಸಹ ಗೋಲ್ಚಾ ಅವರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ