Threat Call: ದೆಹಲಿಯ ಶಾಲೆ ಹಾಗೂ ಪಾಟ್ನಾದ ಏರ್ರ್ಪೋರ್ಟ್ ಗೆ ಬಾಂಬ್ ಬೆದರಿಕೆ: ಪರಿಶೀಲನೆ
Team Udayavani, Apr 12, 2023, 2:05 PM IST
ನವದೆಹಲಿ/ಪಾಟ್ನಾ: ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿದ್ದೇವೆ ಎನ್ನುವ ಬೆದರಿಕೆ ಇ-ಮೇಲ್ ಹಾಕಿದ ಪರಿಣಾಮ ಭೀತಿಯಿಂದ ಮಕ್ಕಳನ್ನು ಸ್ಥಳಾಂತರಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ಸಾದಿಕ್ ನಗರದಲ್ಲಿರುವ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬುಧವಾರ ಮುಂಜಾನೆ 10:49 ರ ಹೊತ್ತಿಗೆ ಶಾಲೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಬೆದರಿಕೆಯ ಇಮೇಲ್ ವೊಂದು ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ ಮಕ್ಕಳನ್ನು ಸ್ಥಳಾಂತರಿಸಲಾಗಿದೆ. ವಿಚಾರ ತಿಳಿದ ಕೂಡಲೇ ಪೋಷಕರು ಶಾಲಾ ಗೇಟ್ ಬಳಿ ಬಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಶಾಲಾ ಆಡಳಿತ ಮಂಡಳಿ ಇಮೇಲ್ ಬಂದ ಬಳಿಕ ಮಕ್ಕಳನ್ನು ಕರೆದುಕೊಂಡು ಹೋಗಿ ಎಂದು ಸಂದೇಶ ಕಳುಹಿಸಿದ್ದಾರೆ ಎಂದು ಪೋಷಕರಲ್ಲಿ ಒಬ್ಬರು ಹೇಳಿದ್ದಾರೆ.
ಸದ್ಯ ಈ ಬಗ್ಗೆ ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸುತ್ತಿದ್ದು, ಇದುವರೆಗೆ ಯಾವ ಅನುಮಾನದ ವಸ್ತುಗಳು ಪತ್ತೆಯಾಗಿಲ್ಲ ಎಂದು ವರದಿ ತಿಳಿಸಿದೆ.
ಈ ಶಾಲೆಗೆ ಇಂಥ ಬಾಂಬ್ ಬೆದರಿಕೆಗಳು ಬರುತ್ತಿರುವುದು ಇದೇ ಮೊದಲಲ್ಲ. ಕಳೆದ ನವೆಂಬರ್ ನಲ್ಲೂ ಇದೇ ರೀತಿಯ ಬೆದರಿಕೆ ಬಂದಿತ್ತು. ಆ ಬಳಿಕ ಅದು ಹುಸಿ ಬೆದರಿಕೆ ಎನ್ನುವುದು ತಿಳಿದು ಬಂದಿತ್ತು.
ಪಾಟ್ನಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ:
ಇನ್ನೊಂದೆಡೆ ಪಾಟ್ನಾದ ಜಯಪ್ರಕಾಶ್ ನಾರಾಯಣ ವಿಮಾನ ನಿಲ್ದಾಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬನಿಂದ ಬಾಂಬ್ ಬೆದರಿಕೆ ಕರೆ ಬಂದಿದೆ. ಬುಧವಾರ ಬೆಳಗ್ಗೆ 10:47 ರ ಹೊತ್ತಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಸದ್ಯ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದ್ದಾರೆ. ವಿಮಾನಗಳು ಯಾವುದೇ ಅಡೆತಡೆಯಿಲ್ಲದೆ ಕಾರ್ಯಾಚರಿಸುತ್ತಿವೆ ಎಂದು ʼಇಂಡಿಯಾ ಟುಡೇʼ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ