ಜಲ ಸಂರಕ್ಷಣೆಗೆ ಮೂರು ಮನವಿ

ಮನ್‌ ಕಿ ಬಾತ್‌ 2ರಲ್ಲಿ ಪ್ರಧಾನಿ ಮೋದಿ

Team Udayavani, Jul 1, 2019, 6:00 AM IST

MODI-A

ನವದೆಹಲಿ: ‘ಸ್ಪರ್ಶ ಮಾತ್ರದಿಂದಲೇ ಬದುಕನ್ನು ಬದಲಿಸಬಲ್ಲ ಪಾರಸ್‌ ಮಣಿಯಂಥ ಶಕ್ತಿಯನ್ನು ನೀರು ಹೊಂದಿದ್ದು, ಅದನ್ನು ಸಂರಕ್ಷಿಸಬೇಕಾದ್ದು ನಮ್ಮ ಆದ್ಯ ಕರ್ತವ್ಯ’ ಎಂದು ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಜಲ ಸಂರಕ್ಷಣೆಗಾಗಿ ಸಾರ್ವಜನಿಕರಲ್ಲಿ ಮೂರು ಮನವಿಗಳನ್ನು ಮಾಡಿದ್ದಾರೆ.

ಎರಡನೇ ಬಾರಿ ಪ್ರಧಾನಿಯಾದ ನಂತರ ತಮ್ಮ ಜನಪ್ರಿಯ ಮಾಸಿಕ ರೇಡಿಯೋ ಕಾರ್ಯಕ್ರಮವಾದ ‘ಮನ್‌ ಕೀ ಬಾತ್‌’ ಅನ್ನು ಪುನರಾರಂಭಿಸಿರುವ ಅವರು, ಭಾನುವಾರ 2ನೇ ಸರಣಿಯ ಮೊದಲ ಕಂತಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಗುರವಾಗಿ ಪರಿಗಣಿಸದಿರಿ: 1975ರಲ್ಲಿ ದೇಶದಲ್ಲಿ ಜಾರಿಯಾಗಿದ್ದ ತುರ್ತು ಪರಿಸ್ಥಿತಿಗೆ ಇದೇ ಜೂ. 24ಕ್ಕೆ 44 ವರ್ಷಗಳು ಸಂದ ಹಿನ್ನೆಲೆಯಲ್ಲಿ ಪ್ರಧಾನಿ, ಆ ವಿಚಾರವನ್ನೂ ಉಲ್ಲೇಖೀಸಿ, ತುರ್ತು ಪರಿಸ್ಥಿತಿಗೆ ಕಾರಣರಾದವರು ಪ್ರಜಾಪ್ರಭುತ್ವವನ್ನು ಹಗುರವಾಗಿ ಪರಿಗಣಿಸಬಾರದು ಎಂದು ಎಚ್ಚರಿಸಿದರು. ”ಹಾಗೆಯೇ, ನಮ್ಮಲ್ಲಿರುವ ಅನೇಕ ಸೌಕರ್ಯಗಳ ಮಹತ್ವ ಅವು ನಮ್ಮ ಜತೆಗಿರುವವರೆಗೆ ನಮಗೆ ತಿಳಿಯುವುದಿಲ್ಲ. ಯಾರಾದರೂ ಅವನ್ನು ಅಪಹರಿಸಿದಾಗ ಅಥವಾ ಕಿತ್ತುಕೊಂಡಾಗ ಮಾತ್ರ ಅವುಗಳ ಮಹತ್ವ ನಮಗೆ ತಿಳಿಯುತ್ತದೆ” ಎಂದ ಅವರು, ”ತುರ್ತು ಪರಿಸ್ಥಿತಿ ವೇಳೆಯಲ್ಲೂ ಜನರಿಗೆ ತಮಗೆ ಹತ್ತಿರವಾದ ಕೆಲವು ವಿಚಾರ, ಸ್ವಾತಂತ್ರ್ಯಗಳನ್ನು ಯಾರೋ ಅಪಹರಿಸಿದರು ಎಂಬ ಭಾವನೆ ನೆಲೆಸಿತು. ಹಾಗಾಗಿಯೇ 1977ರ ಮಹಾಚುನಾವಣೆಯಲ್ಲಿ ಅವರು ಪ್ರಜಾಪ್ರಭುತ್ವದ ಉಳಿವಿಗಾಗಿಯೇ ಮತ ಹಾಕಿದರು. ದೇಶದ ಇತಿಹಾಸದಲ್ಲಿ ಅದೊಂದು ಮಹತ್ವದ ಚುನಾವಣೆ” ಎಂದು ಮೋದಿ ಅಭಿಪ್ರಾಯಿಸಿದರು.

ಜನಾಂದೋಲನಕ್ಕೆ ಕರೆ
ದೇಶದ ಹಲವಾರು ಕಡೆ ಇತ್ತೀಚಿನ ವರ್ಷಗಳಲ್ಲಿ ಕಾಣಿಸಿಕೊಂಡಿರುವ ಜಲಕ್ಷಾಮ ಕಳವಳಕಾರಿ. ಸ್ವಚ್ಛ ಭಾರತದ ಪರಿಕಲ್ಪನೆ ಹೇಗೆ ಜನಾಂದೋಲನವಾಯಿತೋ ಅದೇ ಮಾದರಿಯಲ್ಲಿ ಜಲಸಂರಕ್ಷಣೆಗಾಗಿಯೂ ನಾವು ಸಾಮೂಹಿಕ ಅಭಿಯಾನ ಕೈಗೊಳ್ಳಬೇಕು. ಪ್ರತಿಯೊಂದು ಹನಿ ನೀರನ್ನು ಉಳಿಸಲು ಜಲ ಸಾಕ್ಷರತೆ ಕೈಗೊಳ್ಳಬೇಕು. ಇದಕ್ಕಾಗಿ ಸಮಾಜದ ಎಲ್ಲಾ ಸ್ತರಗಳ ನಾಗರಿಕರೂ ಕೈ ಜೋಡಿಸಬೇಕು. ನಮ್ಮ ದೇಶದಲ್ಲಿ ಸಾಂಪ್ರದಾಯಿಕವಾಗಿ ಅನುಸರಿಸುತ್ತಿರುವ ಜಲಸಂರಕ್ಷಣೆ ವಿಧಾನಗಳು ಹಲವು ಇವೆ. ಅವುಗಳನ್ನು ಇತರರಿಗೂ ತಿಳಿಸುವ ಕೆಲಸ ಮಾಡಬೇಕು. ಸಮಾಜದ ಗಣ್ಯರು ಜಲಸಂರಕ್ಷಣೆಗಾಗಿ ಇರುವ ವಿನೂತನ ಮಾದರಿಗಳ ಬಗ್ಗೆ ಜನಜಾಗೃತಿ ನಡೆಸಬೇಕು. ನೀರಿನ ಸಂರಕ್ಷಣೆಗಾಗಿ ಶ್ರಮಿಸುತ್ತಿರುವ ವ್ಯಕ್ತಿಗಳು, ಸಾಮಾಜಿಕ ಕಾರ್ಯಕರ್ತರು ಅಥವಾ ಸರ್ಕಾರೇತರ ಸಂಘ-ಸಂಸ್ಥೆಗಳ ಬಗ್ಗೆ ನಿಮಗೆ ತಿಳಿದಿದ್ದರೆ ಅಂಥವರ ಬಗ್ಗೆ ಸಮಾಜದಲ್ಲಿ ಮಾಹಿತಿಗಳನ್ನು ಹಂಚಿಕೊಳ್ಳಿ. ನೀರನ್ನು ಸಂರಕ್ಷಿಸಲು ನಮ್ಮ ದೇಶದ ಒಂದೊಂದು ಪ್ರಾಂತ್ಯದಲ್ಲಿ ಒಂದೊಂದು ರೀತಿಯ ವಿಧಾನವನ್ನು ಅನುಸರಿಸಲಾಗುತ್ತದೆ. ಅಂಥ ಯಾವುದಾದರೂ ಒಂದು ಮಾದರಿಯನ್ನು ಅಳವಡಿಸಿಕೊಂಡರೆ ಸಾಕು. ಆ ಎಲ್ಲಾ ಮಾದರಿಯ ಒಟ್ಟಾರೆ ಉದ್ದೇಶ ಹನಿ ಹನಿ ನೀರನ್ನು ಸಂರಕ್ಷಿಸುವುದು ಎಂದಾಗಿದ್ದರೆ ಸಾಕು.

ಕೊನೆಯ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ಮತ್ತೆ ಭೇಟಿಯಾಗೋಣ ಅಂದಿದ್ದೆ. ಹಾಗೆ ನಾನು ಹೇಳಲು, ನನ್ನ ಮೇಲೆ ನನಗಿದ್ದ ನಂಬಿಕೆ ಕಾರಣವಲ್ಲ. ಸಾರ್ವಜನಿಕರು ನನ್ನ ಮೇಲಿಟ್ಟಿದ್ದ ವಿಶ್ವಾಸವೇ ಕಾರಣ.
-ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.