
J-K’s LoC ; ಗಡಿ ನುಸುಳುತ್ತಿದ್ದ ಮೂವರು ಭಯೋತ್ಪಾದಕರ ಬಂಧನ
ಶಸ್ತ್ರಾಸ್ತ್ರ , 100 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕವಸ್ತು...
Team Udayavani, May 31, 2023, 5:47 PM IST

ಪೂಂಚ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (LoC) ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳೊಂದಿಗೆ ಮೂವರು ಭಯೋತ್ಪಾದಕರನ್ನು ಸೇನೆ ಬುಧವಾರ ಬಂಧಿಸಿದೆ.
ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಸೇನೆ 10 ಕೆಜಿಯ ಶಕ್ತಿಶಾಲಿ ಸುಧಾರಿತ ಸ್ಫೋಟಕ ಸಾಧನವನ್ನು (IED) ಹೊಂದಿದ್ದ ಭಯೋತ್ಪಾದಕರು ಈ ಭಾಗಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದಾಗ ಗಡಿ ಬೇಲಿ ಬಳಿ ಗುಂಡಿನ ಚಕಮಕಿ ನಡೆಸಿದ್ದು ಆ ಬಳಿಕ ಬಂಧಿಸಲಾಯಿತು ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾ ಸಿಬಂದಿ ಹಾಗೂ ಓರ್ವ ಭಯೋತ್ಪಾದಕ ಗಾಯಗೊಂಡಿದ್ದಾರೆ. ಸೇನೆಯು ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿತ್ತು.
ಮೇ 30 ಮತ್ತು 31 ರ ರಾತ್ರಿ ಕೆಟ್ಟ ಹವಾಮಾನ ಮತ್ತು ಭಾರೀ ಮಳೆಯ ಲಾಭವನ್ನು ಪಡೆದುಕೊಂಡು ಪೂಂಚ್ ಸೆಕ್ಟರ್ನ ಎಲ್ಒಸಿಯಲ್ಲಿ ಮೂರ್ನಾಲ್ಕು ಭಯೋತ್ಪಾದಕರು ಬೇಲಿ ದಾಟಲು ಪ್ರಯತ್ನಿಸುತ್ತಿದ್ದಾಗ ತಡೆಯಲಾಗಿದೆ ಎಂದು ಜಮ್ಮು- ಮೂಲದ ಸೇನಾ ಪಿಆರ್ಒ ಲೆಫ್ಟಿನೆಂಟ್ ಕರ್ನಲ್ ದೇವೆಂದರ್ ಆನಂದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕರ್ಮರ ನಿವಾಸಿಗಳಾದ ಮೊಹಮ್ಮದ್ ಫಾರೂಕ್ (26)ಕಾಲಿಗೆ ಗುಂಡು ತಗುಲಿದೆ , ಮೊಹಮ್ಮದ್ ರಿಯಾಜ್ (23) ಮತ್ತು ಮೊಹಮ್ಮದ್ ಜುಬೇರ್ (22) ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಗಡಿಯಾಚೆಯಿಂದ ಶಸ್ತ್ರಾಸ್ತ್ರಗಳು ಮತ್ತು ಮಾದಕ ದ್ರವ್ಯಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತರಿಂದ ಎಕೆ ಅಸಾಲ್ಟ್ ರೈಫಲ್, ಎರಡು ಪಿಸ್ತೂಲುಗಳು, ಆರು ಗ್ರೆನೇಡ್ಗಳು, ಪ್ರೆಶರ್ ಕುಕ್ಕರ್ನಲ್ಲಿ ಅಳವಡಿಸಲಾಗಿದ್ದ 10 ಕೆಜಿ ಐಇಡಿ ಮತ್ತು 100 ಕೋಟಿ ರೂ.ಗೂ ಅಧಿಕ ಮೌಲ್ಯದ 20 ಹೆರಾಯಿನ್ ಪ್ಯಾಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ತಾಯಿ!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ
MUST WATCH
ಹೊಸ ಸೇರ್ಪಡೆ

Cauvery issue; ಕಾಂಗ್ರೆಸ್ ಗೆ ರಾಜ್ಯದ ಜನರ ಹಿತ ಮುಖ್ಯವಲ್ಲ: ಆರಗ ಟೀಕೆ

Couples: ಲಿವಿಂಗ್ ಟುಗೆದರ್ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Belagavi: ಶೆಫರ್ಡ ಇಂಡಿಯಾ ಇಂಟರ್ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ