ಬೆಳ್ಳಂಬೆಳಗ್ಗೆ ಶೂಟೌಟ್; ಮೂವರು ಸರಗಳ್ಳರು ದೆಹಲಿ ಪೊಲೀಸರ ವಶಕ್ಕೆ
Team Udayavani, Oct 23, 2019, 1:07 PM IST
ನವದೆಹಲಿ:ದೆಹಲಿಯ ಜನನಿಭಿಡ ಕನೌಟ್ ಮತ್ತು ಶಂಕರ್ ಮಾರ್ಕೆಟ್ ಪ್ರದೇಶದಲ್ಲಿ ದೆಹಲಿ ಪೊಲೀಸರು ಶೂಟೌಟ್ ನಡೆಸುವ ಮೂಲಕ ಮೂವರು ಸರಗಳ್ಳರನ್ನು ಸೆರೆ ಹಿಡಿದಿರುವ ಘಟನೆ ಬುಧವಾರ ನಡೆದಿದೆ.
ಸರಣಿ ಸರಗಳ್ಳತನ ರಾಕೆಟ್ ನಡೆಸುತ್ತಿದ್ದ ಕೃತ್ಯದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿರುವ ಮೂವರು ಕ್ರಿಮಿನಲ್ಸ್ ಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.
ಶಂಕಿತ ಸರಗಳ್ಳರನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಪೊಲೀಸರು ಸರಗಳ್ಳರ ಎಡಕಾಲಿಗೆ ಗುಂಡು ಹೊಡೆದು ಮೂವರನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ.
ಸರಗಳ್ಳರನ್ನು ಮೊಹಮ್ಮದ್ ಇಸ್ಮಾಯಿಲ್, ಸಲೀಂ ಹಾಗೂ ಸಾವುದ್ ಎಂದು ಗುರುತಿಸಲಾಗಿದೆ. ರಾಜಧಾನಿಯಲ್ಲಿ ಮೊಬೈಲ್ ಫೋನ್ ಹಾಗೂ ಹಲವಾರು ಸರಗಳ್ಳತನ ಪ್ರಕರಣಗಳಲ್ಲಿ ಈ ಮೂವರು ಶಾಮೀಲಾಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು