ಹೆಸರು ಬದಲಾವಣೆ; ಒಂದು ಲಕ್ಷ ಲಂಚ ಸ್ವೀಕರಿಸಿದ ಡಿಡಿಎ ಉದ್ಯೋಗಿಗಳು ಸಿಬಿಐ ಬಲೆಗೆ
ನಿವೇಶನ ಮಾರಾಟ ವಿಚಾರದಲ್ಲಿ ಖರೀದಿದಾರರನ ಬಳಿ ನಾಲ್ಕು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು
Team Udayavani, Aug 15, 2020, 6:09 PM IST
ನವದೆಹಲಿ: ನಿವೇಶನ ಖರೀದಿಯ ವಿಚಾರದಲ್ಲಿ ವ್ಯಕ್ತಿಯೊಬ್ಬರಿಂದ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ದೆಹಲಿ ಅಭಿವೃದ್ಧಿ ಪ್ರಾಧಿಕಾರ(ಡಿಡಿಎ)ದ ಸಹಾಯಕ ನಿರ್ದೇಶಕ ಸೇರಿದಂತೆ ಮೂವರು ಉದ್ಯೋಗಿಗಳನ್ನು ಸಿಬಿಐ ಶನಿವಾರ (ಆಗಸ್ಟ್ 15, 2020) ಬಂಧಿಸಿದೆ.
ಲಂಚ ಸ್ವೀಕರಿಸಿದ್ದ ಸಹಾಯಕ ನಿರ್ದೇಶಕ ಸುಧಾಂಶು ರಂಜನ್, ಕ್ಲರ್ಕ್ ಅಜೀತ್ ಭಾರದ್ವಾಜ್ ಮತ್ತು ಭದ್ರತಾ ಸಿಬ್ಬಂದಿ ದಾರ್ವಾನ್ ಸಿಂಗ್ ಸೇರಿದಂತೆ ಮೂವರು ಸಿಬಿಐ ವಶದಲ್ಲಿರುವುದಾಗಿ ವರದಿ ತಿಳಿಸಿದೆ.
ನಿವೇಶನ ಮಾರಾಟ ವಿಚಾರದಲ್ಲಿ ಖರೀದಿದಾರರನ ಬಳಿ ನಾಲ್ಕು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು ನಂತರ ಮಾರಾಟಗಾರನ ಹೆಸರಿಗೆ ನಿವೇಶನ ದಾಖಲು ಮಾಡಿಕೊಡುವುದಾಗಿ ತಿಳಿಸಿದ್ದರು.
ಈ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬ ಖರೀದಿಸಿದ್ದ, ಅಲ್ಲದೇ ಜಾಗವನ್ನು ಬೇರೆಯವರೊಬ್ಬರಿಗೆ ಮಾರಾಟ ಮಾಡಲು ಬಯಸಿದ್ದ. ಆದರೆ ಅದಕ್ಕೆ ಡಿಡಿಎಯಿಂದ ಖಾಸಗಿ ವ್ಯಕ್ತಿಯ ಹೆಸರಿನಲ್ಲಿರುವ ದಾಖಲೆಯ ಅಗತ್ಯವಿತ್ತು. ಇದಕ್ಕಾಗಿ ಡಿಡಿಎ ಅಧಿಕಾರಿಗಳು ನಾಲ್ಕು ಲಕ್ಷ ರೂಪಾಯಿ ಲಂಚ ಕೇಳಿರುವುದಾಗಿ ಖರೀದಿದಾರ ಆರೋಪಿಸಿರುವುದಾಗಿ ಸಿಬಿಐ ವಕ್ತಾರ ಆರ್ ಕೆ ಗೌರ್ ತಿಳಿಸಿದ್ದಾರೆ.
ಹೀಗೆ ಖರೀದಿದಾರನ ದೂರಿನ ಆಧಾರದ ಮೇಲೆ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಅಜೀತ್ ಭಾರದ್ವಾಜ್ ಸಿಬಿಐ ಬಲೆಗೆ ಬಿದ್ದಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ