ಲಷ್ಕರ್ ಎ ತೋಯ್ಬಾದ ಮೂವರು ಉಗ್ರರನ್ನು ಸೆರೆ ಹಿಡಿದ ಭದ್ರತಾ ಪಡೆಗಳು!
Team Udayavani, May 3, 2022, 9:51 AM IST
ಶ್ರೀನಗರ: ಜಮ್ಮು ಕಾಶ್ಮೀರ ಪೊಲೀಸರು ಮೂರು ಲಷ್ಕರ್ ಎ ತೋಯ್ಬಾ ಸಂಘಟನೆಯ ಮೂವರು ಉಗ್ರರನ್ನು ಬಂಧಿಸಿದ್ದಾರೆ. ಉತ್ತರ ಕಾಶ್ಮೀರದ ಸೋಪೋರ್ ನಲ್ಲಿ ಈ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಇತ್ತೀಚೆಗೆ ಸ್ಥಳೀಯರಲ್ಲದ ಕಾರ್ಮಿಕರ ಹತ್ಯೆಗಳು ಮತ್ತು ಅನೇಕ ಸ್ಥಳಗಳಲ್ಲಿ ಗ್ರೆನೇಡ್ ದಾಳಿಗಳ ಬಗ್ಗೆ ತನಿಖೆ ನಡೆಸಲಾಯಿತು. ವಿವಿಧ ಸ್ಥಳಗಳಿಂದ ಶಂಕಿತ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇವರ ನಿರಂತರ ವಿಚಾರಣೆಯಿಂದ ಹತ್ಯೆಗಳ ಹಿಂದೆ ಎಲ್ಇಟಿ ಸಂಘಟನೆಯ ಪಾತ್ರವನ್ನು ಪತ್ತೆ ಮಾಡಲಾಗಿದೆ ಎಂದು ಹೇಳಿದರು.
ಮೇ 2 ರಂದು, ಹೈಗಮ್ ಪ್ರದೇಶದ ತೋಟಗಳಲ್ಲಿ ಮೂವರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಚಲಿಸುತ್ತಿರುವುದನ್ನು ಭದ್ರತಾ ಪಡೆಗಳು ಗಮನಿಸಿವೆ. ಈ ವೇಳೆ ಈ ಮೂವರು ತಪ್ಪಿಸಿಕೊಳ್ಳಲು ಯತ್ನಿಸಿವೆ, ಆದರೆ ಭದ್ರತಾ ಪಡೆಗಳು ಅವರನ್ನು ಸೆರೆ ಹಿಡಿಯುವಲ್ಲಿ ಸಫಲವಾಗಿದೆ.
ಇದನ್ನೂ ಓದಿ:ಎರಡು ಭಾರೀ ಗಾತ್ರದ ಹೆಬ್ಟಾವುಗಳ ಜತೆ ವ್ಯಕ್ತಿಯ ಡ್ಯಾನ್ಸ್… ವಿಡಿಯೋ ಸಿಕ್ಕಾಪಟ್ಟೆ ವೈರಲ್
ಬಂಧಿತರನ್ನು ಉಸ್ಮಾನ್-ಬಾದ್ ವಾರ್ಪೋರಾದ ತಫ್ಹೀಮ್ ರೆಯಾಜ್, ಸೋಪೋರ್ ನ ಸೀರತ್ ಶಾಬಾಜ್ ಮಿರ್ ಮತ್ತು ಮಿರ್ಪೋರಾ ನ ರಮೀಜ್ ಅಹ್ಮದ್ ಖಾನ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಮೂರು ಚೀನಾ ನಿರ್ಮಿತ ಪಿಸ್ತೂಲುಗಳನ್ನು ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ
Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು
ಬಿಲ್ಡರ್ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್
QR code system: ರೈಲ್ವೆ ಟಿಕೆಟ್ ಖರೀದಿಗೆ ಕ್ಯೂಆರ್ಕೋಡ್ ವ್ಯವಸ್ಥೆ; ಉತ್ತಮ ಸ್ಪಂದನೆ
BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ