ಮೂವರು ಲಷ್ಕರ್ ಉಗ್ರರನ್ನು ಗುಂಡಿಕ್ಕಿ ಕೊಂದ ಜಮ್ಮು ಕಾಶ್ಮೀರ ಪೊಲೀಸರು
Team Udayavani, Jun 12, 2022, 8:22 AM IST
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮೂವರು ಲಷ್ಕರ್ ಉಗ್ರರನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಶನಿವಾರ ರಾತ್ರಿ ಈ ಕಾರ್ಯಾಚರಣೆ ಆರಂಭವಾಗಿದ್ದು, ಸುಮಾರು 12 ಗಂಟೆಗಳ ಕಾಲ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎನ್ ಕೌಂಟರ್ ನಲ್ಲಿ ಹತರಾದ ಮೂವರು ಉಗ್ರರನ್ನು ಜುನೈದ್ ಶೀರ್ಗೋಜ್ರಿ, ಫಾಜಿಲ್ ನಜೀರ್ ಭಟ್ ಮತ್ತು ಇರ್ಫಾನ್ ಅಹ್ ಮಲಿಕ್ ಎಂದು ಗುರುತಿಸಲಾಗಿದೆ.
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಡ್ರಾಬ್ಗಮ್ ಪ್ರದೇಶದಲ್ಲಿ ಈ ಎನ್ ಕೌಂಟರ್ ನಡೆದಿದೆ. ಹತ್ಯೆಯಾದವರಲ್ಲಿ ಓರ್ವ ಪೊಲೀಸ್ ಅಧಿಕಾರಿಯ ಹತ್ಯೆಯಲ್ಲಿ ಭಾಗಿಯಾಗಿದ್ದ.
ಇದನ್ನೂ ಓದಿ:ಅಮೆರಿಕಕ್ಕೆ ತೆರಳುವ ಪ್ರಯಾಣಿಕರಿಗೆ ಸಿಹಿಸುದ್ದಿ; ಕೋವಿಡ್ ತಪಾಸಣೆಗೆ ವಿನಾಯಿತಿ
“ಹತರಾದ ಮೂವರೂ ಸ್ಥಳೀಯರು, ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ನೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರಲ್ಲಿ ಒಬ್ಬನನ್ನು ಜುನೈದ್ ಶೀರ್ಗೋಜ್ರಿ ಎಂದು ಗುರುತಿಸಲಾಗಿದ್ದು, ಮೇ 13 ರಂದು ನಮ್ಮ ಸಹೋದ್ಯೋಗಿ ರಿಯಾಜ್ ಅಹ್ಮದ್ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ” ಎಂದು ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲೀಸ್ ವಿಜಯ್ ಕುಮಾರ್ ಹೇಳಿದರು.
ಎರಡು ಎಕೆ-47 ರೈಫಲ್ಗಳು ಮತ್ತು ಪಿಸ್ತೂಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ