ಪೋರ್ನ್ ವಿಡಿಯೋ ವೀಕ್ಷಿಸಲು ನಿರಾಕರಿಸಿದ 6 ವರ್ಷದ ಬಾಲಕಿಯ ಕೊಲೆ! ಮೂವರು ಬಾಲಕರ ಬಂಧನ!
Team Udayavani, Oct 21, 2021, 12:50 PM IST
ನಾಗೂನ್: ತಮ್ಮ ಜೊತೆ ಅಶ್ಲೀಲ ವಿಡಿಯೋಗಳನ್ನು ನೋಡಲು ನಿರಾಕರಿಸಿದ ಆರು ವರ್ಷ ಪ್ರಾಯದ ಬಾಲಕಿಯನ್ನು ಮೂರು ಅಪ್ರಾಪ್ತ ವಯಸ್ಕ ಹುಡುಗರು ಕೊಲೆಗೈದ ಘಟನೆ ಅಸ್ಸಾಂ ರಾಜ್ಯದ ನಾಗೂನ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಬಾಲಕರನ್ನು ಬಂಧಿಸಿದ್ದಾರೆ. ಆರೋಪಿಗಳಾದ ಮೂವರು 8 ರಿಂದ 11 ವರ್ಷದೊಳಗೆ ಬಾಲಕರು ಎಂದು ತಿಳಿದು ಬಂದಿದೆ.
ಈ ಘಟನೆಯು ನಾಗೂನ್ ಜಿಲ್ಲೆಯ ಬಲಿಬತ್ ಬಳಿಯ ಕಲ್ಲು ಕ್ರಶರ್ ಬಳಿ ನಡೆದಿದೆ. ಮಂಗಳವಾರ ಬಾಲಕಿಯ ಮೃತದೇಹವು ಶೌಚಾಲಯದಲ್ಲಿ ಪತ್ತೆಯಾದಾಗ ಘಟನೆಯು ಬೆಳಕಿಗೆ ಬಂದಿದೆ. ಕುಟುಂಬಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
6 ವರ್ಷದ ಬಾಲಕಿಯ ಹತ್ಯೆಯನ್ನು 24 ಗಂಟೆಗಳಲ್ಲಿ ಪರಿಹರಿಸಲಾಗಿದೆ ಎಂದು ನಾಗಾಂವ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಮಿಶ್ರಾ ಹೇಳಿದ್ದಾರೆ. ಮತ್ತೊಂದೆಡೆ, ಕಲಿಯಾಬೋರ್ ಉಪ-ವಿಭಾಗದ ಪೊಲೀಸ್ ಅಧಿಕಾರಿಯೊಬ್ಬರು ತನಿಖೆಯ ಸಮಯದಲ್ಲಿ, ಅಪ್ರಾಪ್ತ ವಯಸ್ಕರು ಕೂಡ ಹುಡುಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಪತ್ತೆಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ:‘ಕಾರ್ಗಲ್ ನೈಟ್ಸ್’ ನಲ್ಲಿ ಥ್ರಿಲ್ಲರ್ ಝಲಕ್
“ನಮ್ಮ ತನಿಖೆಯ ಸಮಯದಲ್ಲಿ, ಅದೇ ಗ್ರಾಮದ 8 ರಿಂದ 11 ವರ್ಷದೊಳಗಿನ ಮೂವರು ಅಪ್ರಾಪ್ತ ಬಾಲಕರು 6 ವರ್ಷದ ಬಾಲಕಿಯನ್ನು ಬರ್ಬರವಾಗಿ ಕೊಂದಿದ್ದಾರೆ ಎಂಬುವುದು ಪತ್ತೆಯಾಗಿದೆ. ಒಬ್ಬ ಆರೋಪಿಯ ತಂದೆ ಇಡೀ ಘಟನೆಯನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ. ನಾವು ಆತನನ್ನು ಬಂಧಿಸಿದ್ದೇವೆ ಎಂದು ಆನಂದ್ ಮಿಶ್ರಾ ಹೇಳಿದರು
“ಆರೋಪಿ ಅಪ್ರಾಪ್ತ ವಯಸ್ಕರು ಅಶ್ಲೀಲ ವ್ಯಸನಿಗಳಾಗಿದ್ದಾರೆ. 11 ವರ್ಷದವನು ತನ್ನ ತಂದೆಯ ಮೊಬೈಲ್ ಫೋನ್ ಅನ್ನು ಅಶ್ಲೀಲ ತುಣುಕುಗಳನ್ನು ವೀಕ್ಷಿಸಲು ಬಳಸುತ್ತಿದ್ದ ಎಂದು ತನಿಖೆಯ ಸಮಯದಲ್ಲಿ ತಿಳಿದುಬಂದಿದೆ. ಇದು ತುಂಬಾ ಆತಂಕಕಾರಿಯಾಗಿದೆ. ನಾವು ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು