ಸರ್ಜಿಕಲ್ ದಾಳಿ ಬಳಿಕ ಗಡಿದಾಟಿದ್ದ ಭಾರತೀಯ ಯೋಧನಿಗೆ 3 ತಿಂಗಳು ಜೈಲು!
Team Udayavani, Oct 26, 2017, 2:45 PM IST
ನವದೆಹಲಿ: ಕಳೆದ ವರ್ಷ ಭಾರತೀಯ ಸೇನೆ ಪಾಕಿಸ್ತಾನ ಗಡಿಭಾಗದಲ್ಲಿ ನಡೆಸಿದ್ದ ಸರ್ಜಿಕಲ್ ದಾಳಿಯ(ಸೀಮಿತ ವ್ಯಾಪ್ತಿಯ ದಾಳಿ) ಬಳಿಕ ಗಡಿ ಉಲ್ಲಂಘಿಸಿ ಪ್ರವೇಶಿಸಿದ್ದ ಭಾರತೀಯ ಯೋಧನಿಗೆ ಸೇನಾ ನ್ಯಾಯಾಲಯ ಮೂರು ತಿಂಗಳ ಜೈಲುಶಿಕ್ಷೆ ವಿಧಿಸಿದೆ ಎಂದು ಮೂಲಗಳು ತಿಳಿಸಿವೆ.
ಜನವರಿ ತಿಂಗಳಲ್ಲಿ ಯೋಧನನ್ನು ಭಾರತಕ್ಕೆ ಹಸ್ತಾಂತರಿಸಲಾಗಿತ್ತು, ಇದೀಗ ಸೇನಾ ನ್ಯಾಯಾಲಯದಲ್ಲಿ ದೋಷಿ ಎಂದು ಸಾಬೀತಾಗಿದ್ದು, ಕನಿಷ್ಠ ಮೂರು ತಿಂಗಳ ಜೈಲುಶಿಕ್ಷೆ ವಿಧಿಸಬೇಕೆಂದು ಶಿಫಾರಸು ಮಾಡಿರುವುದಾಗಿ ವರದಿ ಹೇಳಿದೆ.
ಮೂಲಗಳ ಪ್ರಕಾರ, ಆರ್ಮಿ ಕೋರ್ಟ್ ಯೋಧ ಚಂದು ಬಾಬುಲಾಲ್ ಚವಾಣ್ ಗೆ ಕನಿಷ್ಠ ಮೂರು ತಿಂಗಳ ಜೈಲುಶಿಕ್ಷೆ ವಿಧಿಸಿದೆ. ಆದರೆ ಶಿಕ್ಷೆಯ ಪ್ರಮಾಣದ ಜಾರಿಗೆ ಸಂಬಂಧಪಟ್ಟ ಅಧಿಕಾರಿಗಳು ಇನ್ನಷ್ಟೇ ಅಂಕಿತ ಹಾಕಬೇಕಾಗಿದೆ.
ಕೋರ್ಟ್ ಮಾರ್ಷಲ್ ನಲ್ಲಿ ಯೋಧ ಚವಾಣ್ ದೋಷಿ ಎಂದು ಘೋಷಿಸಿದೆ. ಈ ತೀರ್ಪಿನ ವಿರುದ್ಧ ಚವಾಣ್ ಮೇಲ್ಮನವಿ ಸಲ್ಲಿಸಬಹುದಾಗಿದೆ. ಚವಾಣ್ 37ರಾಷ್ಟ್ರೀಯ ರೈಫಲ್ಸ್ ನ ಯೋಧನಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಭಾರತೀಯ ಸೇನಾ ಪಡೆ ಕಾಶ್ಮೀರ ಗಡಿಯಲ್ಲಿ ಸರ್ಜಿಕಲ್ ದಾಳಿ ನಡೆಸಿದ ಗಂಟೆಯ ನಂತರ ಚವಾಣ್ ಆಕಸ್ಮಿಕವಾಗಿ ಗಡಿದಾಟಿದ್ದರು. ಈ ಸಂದರ್ಭದಲ್ಲಿ ಬಂಧನಕ್ಕೀಡಾಗಿದ್ದ ಯೋಧ ಚವಾಣ್ ಅವರನ್ನು ಪಾಕಿಸ್ತಾನ ಜನವರಿಯಲ್ಲಿ ಭಾರತಕ್ಕೆ ಹಸ್ತಾಂತರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…