ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ


Team Udayavani, Jul 15, 2018, 6:00 AM IST

41.jpg

ಹೊಸದಿಲ್ಲಿ: ಮಾಜಿ ಸಂಸದ ಮತ್ತು ದಲಿತ ನಾಯಕ ರಾಮ್‌ ಶಕಲ್‌, ಆರ್‌ಎಸ್‌ಎಸ್‌ ಸಿದ್ಧಾಂತ ಪ್ರತಿಪಾದಕ ಮತ್ತು ಅಂಕಣಕಾರ ರಾಕೇಶ್‌ ಸಿನ್ಹಾ, ಶಾಸ್ತ್ರೀಯ ನೃತ್ಯಗಾರ್ತಿ ಸೋನಲ್‌ ಮಾನ್‌ಸಿಂಗ್‌ ಮತ್ತು ಶಿಲ್ಪಿ ರಘುನಾಥ ಮಹಾಪಾತ್ರ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಆದೇಶ ಹೊರಡಿಸಿದ್ದಾರೆ.

ಪ್ರಧಾನಮಂತ್ರಿಗಳ ಶಿಫಾರಸಿನ ಆಧಾರದ ಮೇಲೆ ರಾಷ್ಟ್ರಪತಿಗಳು ಈ ಆದೇಶ ಹೊರಡಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ. ಖ್ಯಾತ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌, ಬಾಲಿವುಡ್‌ ನಟಿ ರೇಖಾ, ಉದ್ಯಮಿ ಅನು ಅಘಾ ಮತ್ತು ವಕೀಲ ಕೆ.ಪರಾಸರನ್‌ ಅವರ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ. ಸಾಹಿತ್ಯ, ವಿಜ್ಞಾನ, ಕಲೆ ಮತ್ತು ಸಾಮಾಜಿಕ ಸೇವೆ ಪರಿಗಣಿಸಿ ರಾಷ್ಟ್ರಪತಿಗಳು ಒಟ್ಟು 12 ಮಂದಿಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಬಹುದು. ಈ ವಿಭಾಗದಲ್ಲಿ ಈಗಾಗಲೇ 8 ಸದಸ್ಯರಿದ್ದು, 4 ಸ್ಥಾನಗಳು ಖಾಲಿ ಉಳಿದಿದ್ದವು.

ಸೋನಾಲ್‌ ಮಾನ್ಸಿಂಗ್‌ 
ಭಾರತೀಯ ಶಾಸ್ತ್ರೀಯ ನೃತ್ಯ ಕಲಾವಿದೆ ಮತ್ತು ಪದ್ಮವಿಭೂಷಣ(2003) ಪುರಸ್ಕೃತೆಯಾಗಿರುವ ಸೋನಾಲ್‌ ಮಾನ್‌ಸಿಂಗ್‌ ಸದ್ಯ ಮಹಾರಾಷ್ಟ್ರ ಮತ್ತು ದಿಲ್ಲಿಯಲ್ಲಿ ವಾಸ ಮಾಡುತ್ತಿದ್ದಾರೆ. ಇವರಿಗೆ 1992ರಲ್ಲೇ ಪದ್ಮಭೂಷಣ, 1987ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ. ಇವರು ನೃತ್ಯ ನಿರ್ದೇಶಕಿ, ಶಿಕ್ಷಕಿ, ಮಾರ್ಗದರ್ಶಕಿ ಮತ್ತು ಸಾಮಾಜಿಕ ಹೋರಾಟ ಗಾರ್ತಿಯೂ ಆಗಿದ್ದಾರೆ. 1977ರಲ್ಲಿ ಇವರು ಭಾರ ತೀಯ ಶಾಸ್ತ್ರೀಯ ನೃತ್ಯಗಳ ಕೇಂದ್ರ ಆರಂಭಿಸಿದ್ದಾರೆ.

ರಾಮ್‌ ಶಕಲ್‌

55 ವರ್ಷದ ಇವರು ಉತ್ತರ ಪ್ರದೇಶದ ರಾಬರ್ಟ್ಸ್ಗಂಜ್‌ನಿಂದ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ರಾಮ್‌ ಶಕಲ್‌ಅವರು ಕಾರ್ಮಿಕ ಕಲ್ಯಾಣ, ಇಂಧನ, ಕೃಷಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲಗಳಿಗೆ ಸಂಬಂಧಿಸಿದ ವಿವಿಧ ಸಮಿತಿಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಬೈಷಾರ್‌ ಸಮುದಾಯಕ್ಕೆ ಸೇರಿದ ದಲಿತ ನಾಯಕರಾಗಿರುವ ಇವರು ಮಧ್ಯಪ್ರದೇಶದ ಗಡಿಭಾಗದಲ್ಲೂ ಪ್ರಭಾವ ಹೊಂದಿದ್ದಾರೆ. ಇವರ ನೇಮಕದಿಂದಾಗಿ ವರ್ಷಾಂತ್ಯದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಮತ್ತು ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲಾಭವಾಗಬಹುದು ಎಂಬುದು ರಾಜಕೀಯ ತಜ್ಞರ ಲೆಕ್ಕಾಚಾರ.

ರಘುನಾಥ ಮಹಾಪಾತ್ರ

75 ವರ್ಷ ವಯಸ್ಸಿನ ಶಿಲ್ಪಿ ರಘುನಾಥ ಮಹಾಪಾತ್ರ ಅವರದ್ದು ಒಡಿಶಾ ಮೂಲ. ಸದ್ಯ ಇಲ್ಲಿನ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ 2013ರಲ್ಲಿ ಪದ್ಮವಿಭೂಷಣ, 2001ರಲ್ಲಿ ಪದ್ಮಭೂಷಣ, 1975ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಂದಿದ್ದವು. 1964ರಲ್ಲೇ ಶಿಲ್ಪಕಲೆಯಲ್ಲಿನ ಸಾಧನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು. ಆಗ ಇವರಿಗಿನ್ನೂ 22 ವರ್ಷ ವಯಸ್ಸು. ಇದಷ್ಟೇ ಅಲ್ಲ, ಪುರಿ ಜಗನ್ನಾಥ ದೇಗುಲದ ಸೌಂದಯೀì ಕರಣದಲ್ಲಿ ಅಭೂತಪೂರ್ವ ಕೆಲಸ ಮಾಡಿರುವ ಇವರು, 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

ರಾಕೇಶ್‌ ಸಿನ್ಹಾ

ದಿಲ್ಲಿ ವಿಶ್ವವಿದ್ಯಾನಿಲಯದ ಮೋತಿಲಾಲ್‌ ನೆಹರು ಕಾಲೇಜಿನ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 53 ವಯಸ್ಸಿನ ಸಿನ್ಹಾ  ಭಾರತೀಯ
ಸಾಮಾಜಿಕ ವಿಜ್ಞಾನ ಸಂಶೋಧನಾ ಮಂಡಳಿಯ ಸದಸ್ಯರಾಗಿದ್ದಾರೆ. ಇವರು ಸ್ವರಾಜ್‌ ಇಂಡಿಯಾ: ಭಾರತೀಯ ಮನಸ್ಸುಗಳ ಸ್ವಾತಂತ್ರ್ಯದ ಸಂಶೋಧನೆ, ಡಾ. ಕೆ.ಬಿ.ಹೆಡೆವಾರ್‌ ಜೀವನಚರಿತ್ರೆ ಮತ್ತು ಸಾಮಾಜಿಕ ಕ್ರಾಂತಿಯ ತತ್ವಶಾಸ್ತ್ರ ಕುರಿತಂತೆ ಪುಸ್ತಕಗಳನ್ನೂ ಬರೆದಿದ್ದಾರೆ. ಅಲ್ಲದೆ ದೆಹಲಿ ಮೂಲದ ಭಾರತ ನೀತಿ ಪ್ರತಿಷ್ಠಾನದ ಸ್ಥಾಪಕರೂ ಆಗಿದ್ದಾರೆ. ಸಾಮಾಜಿಕ ವಿಜ್ಞಾನದಲ್ಲಿನ ಸೇವೆ ಪರಿಗಣಿಸಿ 2017ರಲ್ಲಿ ಸಿನ್ಹಾ ಅವರಿಗೆ ದೀನದಯಾಳ್‌ ಉಪಾಧ್ಯಾಯ್‌ ಪ್ರಶಸ್ತಿ ದೊರೆತಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.