ಸರ್ಜಿಕಲ್ ಸ್ಟ್ರೈಕ್ ಗೆ ಮೂರು ವರ್ಷ: ಹೇಗಿತ್ತು ಅಂದಿನ ದಾಳಿ ?


Team Udayavani, Sep 29, 2019, 10:30 AM IST

surgical

ಮಣಿಪಾಲ: ಪಾಕಿಸ್ಥಾನದ ಉಗ್ರರು ನಡೆಸಿದ ಭಯೋತ್ಪಾದನ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಗೆ ಇಂದು ಮೂರು ವರ್ಷ ಪೂರ್ಣಗೊಂಡಿದೆ. ಅಂದು ನಮ್ಮ ಸೇನೆ ಅಕ್ಷರಶಃ ಮಿಂಚಿನ ದಾಳಿ ನಡೆಸಿತ್ತು. ನಮ್ಮ ತಂಟೆಗೆ ಬಂದರೆ ಯಾವ ರೀತಿ ಪಾಠ ಕಲಿಸುತ್ತೇವೆ ಎಂಬುದನ್ನು ತೋರ್ಪಡಿಸಿತ್ತು.

ಜಮ್ಮು ಕಾಶ್ಮೀರದ ಸೇನಾ ಉರಿ ನೆಲೆಯ ಮೇಲೆ 2016 ರ ಸೆಪ್ಟೆಂಬರ್ 18 ರಂದು ಉಗ್ರರು ಆತ್ಮಾಹುತಿ ದಾಳಿ ನಡೆಸಿ  ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದ್ದರು. ಹಠಾತ್ ದಾಳಿ ನಡೆಸಿ 19 ಭಾರತೀಯ ಯೋಧರನ್ನು ಬಲಿ ಪಡೆದಿದ್ದರು. ಈ ದಾಳಿಯಲ್ಲಿ ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಪಾಕಿಸ್ಥಾನದ ಜೈಷೆ ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡವಿತ್ತು. ಭಾರತೀಯ ಸೇನೆ ಮೇಲೆ ನಡೆದ ಅತ್ಯಂತ ಘೋರ ದಾಳಿಗಳಲ್ಲಿ ಇದು ಒಂದಾಗಿತ್ತು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಐತಿಹಾಸಿಕ ಸರ್ಜಿಕಲ್ ದಾಳಿ ನಡೆಸಿತ್ತು. ಆ ಮೂಲಕ ಪಾಕಿಸ್ಥಾನಕ್ಕೆ ಮರ್ಮಾಘಾತ ನೀಡಿ ಇಡೀ ವಿಶ್ವಕ್ಕೆ ಸೇನೆಯ ಶಕ್ತಿ ಸಾಮಾರ್ಥ್ಯವನ್ನು ತೋರಿಸಿಕೊಟ್ಟಿತು.

2016ರ ಸೆಪ್ಟೆಂಬರ್ 28, 29ರ ಮಧ್ಯರಾತ್ರಿ ಭಾರತೀಯ ವಿಶೇಷ ಸೇನಾ ಪಡೆಗಳು ಪಾಕ್ ಆಕ್ರಮಿತ ಕಾಶ್ಮೀರದ  ಗಡಿ ನಿಯಂತ್ರಣ ರೇಖೆಯೊಳಗೆ ನುಗ್ಗಿ ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದ್ದವು . ಇದರಲ್ಲಿ20ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಭಾರತದ ಮೇಲೆ ದಾಳಿ ಮಾಡಲು ಬಳಕೆಯಾಗುತ್ತಿದ್ದ ಈ ಉಗ್ರರ ಅಡ್ಡೆಗಳು  ಭಾರತೀಯ ಸೇನೆಯ ಕರಾರುವಾಕ್ ದಾಳಿಗೆ ನಾಶವಾಗಿ ಹೋಗಿದ್ದವು.

ಭಾರತ ಪಾಕ್ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತದೊಳಗೆ ನುಸುಳಲು ಉಗ್ರರು ,7 ನೆಲೆಗಳನ್ನು ಸ್ಥಾಪಿಸಿ ಸನ್ನದ್ಧರಾಗಿದ್ದರು. ಇದರ ಖಚಿತ ಮಾಹಿತಿ ಪಡೆದ ಗುಪ್ತಚರ ಇಲಾಖೆ ಸೇನೆಗೆ ಮಾಹಿತಿ ರವಾನಿಸಿತ್ತು. ನಂತರದಲ್ಲಿ ಕಾರ್ಯಾಚರಣೆಗಳಿದ ಸೇನೆ , ಉಗ್ರರ ಮೇಲೆ ದಾಳಿ ನಡೆಸಲು ಕರಾರುವಕ್ಕಾದ ಯೋಜನೆ ತಯಾರಿಸಿ, ಗುಪ್ತ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್  ಅವರಿಗೆ ಸಂದೇಶ ರವಾನಿಸಿತ್ತು.

ಮಧ್ಯರಾತ್ರಿ ಸುಮಾರು 12 ಗಂಟೆಗೆ ದಾಳಿ ಮಾಡಲು ನಿರ್ಧರಿಸಿ , ಗಡಿ ನಿಯಂತ್ರಣ ರೇಖೆಯ ಬಳಿ ಭಾರತೀಯ ಸೈನಿಕರನ್ನು ವಿಮಾನದ ಮೂಲಕ ಇಳಿಸಲಾಗಿತ್ತು. ಗಡಿ ನಿಯಂತ್ರಣಾ ರೇಖೆಯಿಂದ 500 ಮೀಟರಿನಿಂದ  ಹಿಡಿದು 2 ಕಿ. ಮೀ ವರೆಗೂ ಗುರುತಿಸಲಾಗಿದ್ದ 7 ಭಯೋತ್ಪಾದನಾ ಕ್ಯಾಂಪ್ ನ ಮೇಲೆ ಸೈನಿಕರು ಮುಗಿಬಿದ್ದಿದ್ದರು. ನಾಲ್ಕು ಗಂಟೆಯ ಸತತ ಕಾರ್ಯಾಚರಣೆಯಲ್ಲಿ ಉಗ್ರರ 7 ಬಂಕರ್ ಗಳನ್ನು ಧ್ವಂಸ ಮಾಡಲಾಗಿತ್ತು. ಬೆಳಗ್ಗೆ 4: 30ಕ್ಕೆ ಸರ್ಜಿಕಲ್ ದಾಳಿ ಮುಕ್ತಾಯವಾಗಿತ್ತು. ದಾಳಿ ನಡೆಸಿದ ನಂತರ ಯೋಧರು ಸುರಕ್ಷಿತವಾಗಿ ಮರಳುವುದು ಕಾರ್ಯಾಚರಣೆಯ ಅತ್ಯಂತ ಕಠಿಣ ಭಾಗವಾಗಿತ್ತು. ಏಕೆಂದರೆ ದಾಳಿಯ ಆಕ್ರೋಶದಲ್ಲಿ ಪಾಕಿಸ್ಥಾನಿ ಯೋಧರು ಮನ ಬಂದಂತೆ ಗುಂಡಿನ ದಾಳಿ ನಡೆಸಿದ್ದರು.

ಪಾಕ್ ಮಣ್ಣಲ್ಲಿ ಭಾರತೀಯ ಸೇನೆ ನಡೆಸಿದ ಮಿಂಚಿನ ಪ್ರಹಾರಕ್ಕೆ ಇಂದು ಮೂರು ವರ್ಷ ತುಂಬಿದೆ. ಒಂದೆಡೆ ಹೆಮ್ಮೆಯ ಯೋಧರನ್ನು ಕಳೆದುಕೊಂಡ ದು:ಖವಾದರೇ  ಮತ್ತೊಂದೆಡೆ ಭಯೋತ್ಪಾದನ ದಾಳಿಗೆ ತಕ್ಕ ಪ್ರತಿಕಾರ ತೀರಿಸಿಕೊಂಡ ಸಂತಸ. ಭಯೋತ್ಪಾದನೇಯ ನಿರ್ಮೂಲನೆಗೆ ಭಾರತೀಯ ಸೇನೆ ಅಂದು ತೆಗೆದಿಕೊಂಡ ದಿಟ್ಟ ನಿರ್ಧಾರ  ಎಲ್ಲರ ಮಚ್ಚುಗೆಗೆ ಪಾತ್ರವಾಗಿತ್ತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.