ಕತ್ತು ಸೀಳಿದ ಗಾಳಿಪಟದ ದಾರ;ಸ್ಕೂಟರ್ ಸವಾರೆಯಾಗಿದ್ದ ವೈದ್ಯೆ ದುರ್ಮರಣ
Team Udayavani, Oct 9, 2018, 12:47 PM IST
ಪುಣೆ: ಗಾಳಿ ಪಟದ ಚೈನಾ ಮಾಂಜಾ ದಾರ ಕತ್ತು ಸೀಳಿದ ಪರಿಣಾಮ ಫ್ಲೈಓವರ್ನಲ್ಲಿ ಸ್ಕೂಟರ್ ಸವಾರೆಯಾಗಿ ತೆರಳುತ್ತಿದ್ದ ಯುವ ವೈದ್ಯೆ ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಪುಣೆಯ ಬೋಸಾರಿ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದಿದೆ.
26 ರ ಹರೆಯದ ಆಯುರ್ವೇದ ವೈದ್ಯೆ ಕೃಪಾಲಿ ನಿಕ್ಕಂ ಅವರು ಮೃತ ದುರ್ದೈವಿ. ಹಾರಾಡುತ್ತಿದ್ದ ಗಾಳಿಪಟದ ಮಾಂಜಾ ದಾರ ಕತ್ತನ್ನು ಸೀಳಿದ ಪರಿಣಾಮ ಏಕಾಏಕಿ ಸ್ಕೂಟರ್ನಿಂದ ಕುಸಿದು ಬಿದ್ದಿದ್ದಾರೆ. ಕತ್ತಿನ ಭಾಗದಿಂದ ತೀವ್ರ ರಕ್ತಸ್ರಾವವಾಗುತ್ತಿತ್ತು. ಆಕೆ ಮಾತನಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
20 ನಿಮಿಷಗಳ ಕಾಲ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಯಾವುದೇ ವಾಹನಗಳು ಲಭ್ಯವಾಗಲಿಲ್ಲ. ಆ ಬಳಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಗಾಜು, ಲೋಹದ ತುಣುಕು, ಬಳೆಚೂರುಗಳನ್ನು ನಯವಾಗಿ ಪುಡಿಮಾಡಿ ದಾರಕ್ಕೆ ಲೇಪನ ಮಾಡಿ ಚೈನಾ ಮಾಂಜಾ ಹೆಸರಿನಲ್ಲಿ ಗಾಳಿಪಟದ ದಾರವನ್ನಾಗಿ ಬಳಸಲಾಗುತ್ತದೆ. ಇದು ಮಾರಕವಾಗಿದ್ದು ಸಾವಿರಾರು ಪಕ್ಷಿಗಳು ಸಾವನ್ನಪ್ಪಿವೆ. ಹಲವರಿಗೆ ಗಾಯಗಳೂ ಆಗಿದ್ದವು. ನಿಷೇಧವಿದ್ದರೂ ಚೈನಾ ಮಾಂಜಾ ದಾರಗಳ ಮಾರಾಟ ಮತ್ತು ಹಾರಾಟ ಎಗ್ಗಿಲ್ಲದೆ ಮುಂದುವರಿದಿರುವುದು ದುರಂತಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ