ಬಿರುಗಾಳಿ ಬದಲು ತುಂತುರು ಮಳೆ
Team Udayavani, May 9, 2018, 11:27 PM IST
ನವದೆಹಲಿ: ಧೂಳು ಬಿರುಗಾಳಿಯ ನಿರೀಕ್ಷೆಯಲ್ಲಿದ್ದ ರಾಷ್ಟ್ರ ರಾಜಧಾನಿ ನವದೆಹಲಿಯ ಜನರಿಗೆ ಬುಧವಾರ ತುಂತುರು ಮಳೆಯ ದರ್ಶನವಾಗಿದೆ. ಹವಾಮಾನ ಇಲಾಖೆ ಪ್ರಕಾರ 0.8 ಮಿಲಿಮೀಟರ್ನಷ್ಟು ಮಳೆ ಬಿದ್ದಿದೆ. ಇದೇ ವೇಳೆ ದೆಹಲಿಯಲ್ಲಿ ಬುಧವಾರ, ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳುವ ಮೂಲಕ ಜನರನ್ನು ಭೀತಿಗೊಳಿಸಿದ್ದಕ್ಕಾಗಿ ಹಲವಾರು ಟೀಕೆಗಳು ವ್ಯಕ್ತವಾಗಿದೆ.
ಕರ್ನಾಟಕದಲ್ಲಿ ಮಳೆ: ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು ಹಾಗೂ ಕೇರಳದಲ್ಲಿ ಮೇ 10 ಹಾಗೂ 11ರಂದು ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭೂಕಂಪ: ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಿಸಿರುವ ಭೂಕಂಪವು ಆಫ್ಘಾನಿಸ್ತಾನ-ತಜಕಿಸ್ತಾನ ಗಡಿ ಭಾಗದಲ್ಲಿ ಸಂಭವಿಸಿದೆ. ನವದೆಹಲಿ, ಪಂಜಾಬ್ ಸೇರಿ ಹಲವೆಡೆ ಕಂಪನ ಅನುಭವವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ