ಪುತ್ರನಿಗೆ ಟಿಕೆಟ್: ಅಪ್ಪನಿಗೆ ಧರ್ಮಸಂಕಟ
Team Udayavani, Mar 31, 2019, 6:13 AM IST
ನವದೆಹಲಿ: ಹಿಮಾಚಲ ಪ್ರದೇಶದ ಬಿಜೆಪಿ ಸರಕಾರದಲ್ಲಿ ಸಚಿವರಾಗಿರುವ ಅನಿಲ್ ಶರ್ಮಾ ಅವರಿಗೆ ಈಗ ಧರ್ಮಸಂಕಟ ಶುರುವಾಗಿದೆ. ಅವರ ಪುತ್ರ ಆಶ್ರಯ್ ಶರ್ಮಾ ಕಾಂಗ್ರೆಸ್ಗೆ ಸೇರ್ಪಡೆಯಾಗಿರುವ ಕಾರಣ, ಅವರಿಗೆ ಮಂಡಿ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಆದರೆ, ಮಂಡಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಮಸ್ವರೂಪ್ ಶರ್ಮಾ ಸ್ಪರ್ಧಿಸುತ್ತಿದ್ದಾರೆ.
ಹೀಗಾಗಿ, ಅನಿಲ್ಗೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಬೇಕೋ, ಪುತ್ರನ ಪರ ನಡೆಸಬೇಕೋ ಎಂದು ತೋಚುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ, ನಾನು ಮಗನ ವಿರುದ್ಧ ಪ್ರಚಾರ ಮಾಡಲ್ಲ ಎಂದಿದ್ದಾರೆ.
ಸೇತುವೆಗಾಗಿ ಚುನಾವಣೆ ಬಹಿಷ್ಕಾರ: ಉತ್ತರ ಪ್ರದೇಶದ ಮುಜಾಫರನಗರದ ಯೋಗೇಂದ್ರ್ ನಗರ ಎಂಬ ಗ್ರಾಮದ ಬಳಿ ಹಾದುಹೋಗುವ ಸೋಲನಿ ನದಿಗೆ ಅಡ್ಡಲಾಗಿ ಸೇತುವೆಯನ್ನು ಸರಕಾರ ನಿರ್ಮಿಸದೇ ಇದ್ದಲ್ಲಿ ಇಡೀ ಗ್ರಾಮವೇ ಲೋಕಸಭಾ ಚುನಾವಣೆ ಬಹಿಷ್ಕರಿಸಲಿದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಪಂಚಾಯತ್ ಸಭೆಯಲ್ಲಿ ಈ ನಿರ್ಧಾರವನ್ನು ಒಮ್ಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಗ್ರಾಮವು ನದಿ ತೀರದಲ್ಲೇ ಇರುವುದರಿಂದ ನದಿ ದಾಟಿ ಬೇರೆ ಊರಿಗೆ ಹೋಗುವುದು ದುಸ್ತರವಾಗಿದೆ ಎಂದಿದ್ದಾರೆ ಗ್ರಾಮಸ್ಥರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…