ದೇಶದ ಪ್ರತಿಷ್ಠಿತ ಸಂಶೋಧನಾ ಕೇಂದ್ರದಲ್ಲಿ ವೇತನ ಪಾವತಿಸಲು ಹಣವಿಲ್ಲ!
Team Udayavani, Mar 7, 2019, 11:41 AM IST
ಮುಂಬಯಿ: ದೇಶದ ಪ್ರತಿಷ್ಠಿತ ಸಂಶೋಧನಾ ಕೇಂದ್ರಗಳಲ್ಲಿ ಒಂದಾಗಿರುವ ಟಾಟಾ ಇಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ (TIFR) ಕೇಂದ್ರದ ಸಿಬ್ಬಂದಿಗಳಿಗೆ ಫೆಬ್ರವರಿ ತಿಂಗಳಿನ ವೇತನವನ್ನು ಅರ್ಧ ಪಾವತಿಸಲಾಗುವುದು ಎಂದು ಟಿ.ಐ.ಎಫ್.ಆರ್. ರಿಜಿಸ್ಟ್ರಾರ್ ವಿಂಗ್ ಕಮಾಂಡರ್ (ನಿವೃತ್ತ) ಜಾರ್ಜ್ ಆಂಟೋನಿ ತಿಳಿಸಿದ್ದಾರೆ. ವೇತನ ಪಾವತಿಗೆ ಅಗತ್ಯವಿರುವಷ್ಟು ನಿಧಿ ಸಂಗ್ರಹ ಇಲ್ಲದಿರುವುದೇ ಇದಕ್ಕೆ ಕಾರಣವೆನ್ನಲಾಗಿದೆ.
‘ವೇತನ ಪಾವತಿಸಲು ಸಾಕಷ್ಟು ನಿಧಿ ನಮ್ಮ ಬಳಿ ಇಲ್ಲದಿರುವುದರಿಂದ ನಮ್ಮೆಲ್ಲಾ ಸಿಬ್ಬಂದಿಗಳಿಗೆ ಫೆಬ್ರವರಿ ತಿಂಗಳಿನ ಮೂಲವೇತನದ ಅರ್ಧದಷ್ಟನ್ನು ಮಾತ್ರ ಪಾವತಿಸಲಾಗುವುದು ಮತ್ತು ಸೂಕ್ತ ನಿಧಿ ಸಂಗ್ರಹಗೊಂಡ ಬಳಿಕ ಉಳಿದ ಮೊತ್ತವನ್ನು ಪಾವತಿ ಮಾಡಲಾಗುವುದು’ ಎಂದು ಅವರು ತಿಳಿಸಿದರು.
ಅಣು ಶಕ್ತಿ ಸಚಿವಾಲಯದಡಿಯಲ್ಲಿ ಬರುವ ಟಿ.ಐ.ಎಫ್.ಆರ್. ಭಾರತ ಸರಕಾರದ ಅಧೀನಕ್ಕೊಳಪಡುವ ಸಂಸ್ಥೆಯಾಗಿದೆ ಮತ್ತು ಡಾಕ್ಟರೇಟ್ ಪದವಿಗಳನ್ನು ಪ್ರಧಾನಿಸುವ ಸ್ವಾಯತ್ತ ವಿಶ್ವವಿದ್ಯಾನಿಲಯವಾಗಿದೆ. ಡಾ. ಹೋಮಿ ಬಾಬಾ ಅವರ ದೂರದರ್ಶಿತ್ವದಲ್ಲಿ ಸರ್ ದೊರಾಬ್ಜಿ ಟಾಟಾ ಟ್ರಸ್ಟ್ ಬೆಂಬಲದೊಂದಿಗೆ 1945ರಲ್ಲಿ ಟಿ.ಐ.ಎಫ್.ಆರ್. ಸಂಸ್ಥೆಯು ಸ್ಥಾಪಿಸಲ್ಪಟ್ಟಿತು. ಈ ಸಂಸ್ಥೆಯು ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಮತ್ತು ವಿಜ್ಞಾನ ಶಿಕ್ಷಣ ವಿಷಯಗಳಲ್ಲಿ ಸಂಶೋಧನಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಈ ಸಂಸ್ಥೆಯ ಪ್ರಧಾನ ಕ್ಯಾಂಪಸ್ ಮುಂಬಯಿಯಲ್ಲಿದೆ ಮತ್ತು ಪುಣೆ, ಬೆಂಗಳೂರು ಹಾಗೂ ಹೈದ್ರಾಬಾದ್ ಗಳಲ್ಲಿಯೂ ಈ ಸಂಸ್ಥೆಯು ತನ್ನ ಕೇಂದ್ರಗಳನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ