ಅಯೋಧ್ಯೆಗೆ 3500 ಖಾಕಿ ಪಡೆ ; 45ಕ್ಕಿಂತ ಕಡಿಮೆ ವಯಸ್ಸಿನ ಪೊಲೀಸರಿಂದ ಸರ್ಪಗಾವಲು


Team Udayavani, Aug 2, 2020, 6:35 AM IST

ಅಯೋಧ್ಯೆಗೆ 3500 ಖಾಕಿ ಪಡೆ ; 45ಕ್ಕಿಂತ ಕಡಿಮೆ ವಯಸ್ಸಿನ ಪೊಲೀಸರಿಂದ ಸರ್ಪಗಾವಲು

ಅಯೋಧ್ಯೆ: ರಾಮಜನ್ಮಭೂಮಿಯ ಆ.5ರ ಚಾರಿತ್ರಿಕ ಭೂಮಿಪೂಜೆಗೆ ದಿನಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ 200 ಗಣ್ಯ ಅತಿಥಿಗಳು ಪಾಲ್ಗೊಳ್ಳುವ ಸಮಾರಂಭಕ್ಕೆ ಬಿಗಿಭದ್ರತೆ ಒದಗಿಸಲು ಉ.ಪ್ರ. ಸರಕಾರ ಕೋವಿಡ್ 19 ನೆಗೆಟಿವ್‌ ದೃಢಪಟ್ಟ 3500 ಪೊಲೀಸರನ್ನು ನಿಯೋಜಿಸಿದೆ.

ಸರ್ಪಗಾವಲಿಗೆ ಸನ್ನದ್ಧರಾದ 3500 ಪೊಲೀಸರೂ 45ಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಅಯೋಧ್ಯೆಯ ಭದ್ರತಾ ವ್ಯವಸ್ಥೆಗಳ ಕಾರ್ಯವನ್ನು ಇವರು ನಿರ್ವಹಿಸಲಿದ್ದಾರೆ. ಗುಪ್ತಚರ ಇಲಾಖೆ ಉಗ್ರರ ದಾಳಿಯ ಮುನ್ಸೂಚನೆ ನೀಡಿರುವುದರಿಂದ ಉ.ಪ್ರ. ಸರಕಾರ‌ ಅಯೋಧ್ಯೆಯಲ್ಲಿ ಭಾರೀ ಕಟ್ಟೆಚ್ಚರ ವಹಿಸಿದೆ.

ಬಿಗಿ ಭದ್ರತೆ: ಅಯೋಧ್ಯೆಯಲ್ಲಿ ಅಸ್ತಿತ್ವದಲ್ಲಿರುವ ಪ್ರಾಂತೀಯ ಸಶಸ್ತ್ರ ಪೊಲೀಸ್‌ ಪಡೆಯ 20 ಕಂಪೆನಿಗಳೂ ಸೇರಿ ಒಟ್ಟು 40 ಕಂಪೆನಿಗಳು ರಕ್ಷಣೆಗೆ ಸಾಥ್‌ ನೀಡಲಿವೆ. ಎಡಿಜಿ (ಕಾನೂನು ಸುವ್ಯವಸ್ಥೆ) ಪ್ರಶಾಂತ್‌ ಕುಮಾರ್‌, ಎಡಿಜಿ ಲಕ್ನೋ ವಲಯ ಸತ್ಯನಾರಾಯಣ್‌ ಸಬತ್‌ ಭೂಮಿಪೂಜೆಗೆ ಮುಂಚಿತವಾಗಿ ಪೊಲೀಸ್‌ ಭದ್ರತಾ ವ್ಯವಸ್ಥೆಯನ್ನು ಮುನ್ನಡೆಸಲಿದ್ದಾರೆ. ಅಯೋಧ್ಯೆ ಎಸ್‌ಎಸ್‌ಪಿ ದೀಪಕ್‌ ಕುಮಾರ್‌ ಸೇರಿದಂತೆ 8 ವರಿಷ್ಠಾಧಿಕಾರಿಗಳು, ಇಬ್ಬರು ಡಿಐಜಿ ಮಟ್ಟದ ಅಧಿಕಾರಿಗಳ ತಂಡ ಭದ್ರತೆಯನ್ನು ನಿರ್ವಹಿಸಲಿದೆ.

ಗುಂಪುಗೂಡುವಂತಿಲ್ಲ: ಆ.5ರಂದು ಅಯೋಧ್ಯೆ ನಗರದ ಬೀದಿಗಳಲ್ಲಿ 5 ಜನಕ್ಕಿಂತ ಹೆಚ್ಚು ಮಂದಿ ಗುಂಪು ಗೂಡುವುದನ್ನು ನಿಷೇಧಿಸಲಾಗಿದೆ. ಭೂಮಿಪೂಜೆ ಭದ್ರತೆ ಹಾಗೂ ಕೋವಿಡ್ 19 ಪ್ರೊಟೊಕಾಲ್‌ ಅನ್ವಯ ಈ ನೀತಿ ಪಾಲಿಸಲು ಕಟ್ಟಾಜ್ಞೆ ಜಾರಿಯಾಗಿದೆ. ‘ಅಯೋಧ್ಯೆಯಲ್ಲಿ ಕೋವಿಡ್ 19 ಸಂಪೂರ್ಣ ನಿಯಂತ್ರಣದಲ್ಲಿದೆ. ಭೂಮಿಪೂಜೆ ದೃಷ್ಟಿಯಿಂದಲೂ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಡಿಸಿ ಅನೂಜ್‌ ಕುಮಾರ್‌ ತಿಳಿಸಿದ್ದಾರೆ.


ಯೋಧರ ಮನೆಗಳ ಮೃತ್ತಿಕೆ ಹೊತ್ತು ಸಾಗಿದ ಪೋರ

ವರ್ಷದ ಪೋರ, ಹುತಾತ್ಮ ಯೋಧರ ಮನೆಗಳ ಪವಿತ್ರ ಮೃತ್ತಿಕೆ ಹೊತ್ತು ಶನಿವಾರ ಅಯೋಧ್ಯೆ ತಲುಪಿದ್ದಾನೆ. ದೇಶಕ್ಕಾಗಿ ಪ್ರಾಣ ಸಮರ್ಪಿಸಿದ ಯೋಧರ ಗೌರವಾರ್ಥ ಈ ಮೃತ್ತಿಕೆಯನ್ನು ಭೂಮಿಪೂಜೆಗೆ ಬಳಸಲು ಟ್ರಸ್ಟ್‌ ನಿರ್ಧರಿಸಿದೆ. ದೇವ್‌ ಪರಾಶರ್‌ ಎಂಬ ಪುಟಾಣಿ 11 ಸಾವಿರ ಹುತಾತ್ಮ ಯೋಧರ ಮನೆಗಳಿಗೆ ಭೇಟಿ ನೀಡುವ ಉದ್ದೇಶ ಹೊಂದಿದ್ದಾನೆ. ಈಗಾಗಲೇ ಈತ 1600 ಹುತಾತ್ಮ ಯೋಧರ ಮನೆಯ ಮೃತ್ತಿಕೆಯನ್ನು ಸಂಗ್ರಹಿಸಿದ್ದಾನೆ. ಪ್ರತಿ ಯೋಧರ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಿ, ಅವರ ಸಮಾಧಿಯನ್ನು ಈತ ಸ್ವಚ್ಛಗೊಳಿಸಿದ್ದಾನೆ. ಈತನ ರಾಷ್ಟ್ರಪ್ರೇಮ ಮೆಚ್ಚಿ ‘ಪುಟಾಣಿ ಸೈನಿಕ’ ಅಂತಲೇ ಕರೆಯಲಾಗುತ್ತಿದೆ.

ಗಣ್ಯರಿಗೆ ದೂರವಾಣಿ ಮೂಲಕ ಆಹ್ವಾನ
ರಾಮಮಂದಿರ ಹೋರಾಟದಲ್ಲಿ ನಿರ್ಣಾಯಕ ಹೋರಾಟ ನಡೆಸಿದ್ದ ಬಿಜೆಪಿ ಧುರೀಣ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರನ್ನು ಆಹ್ವಾನಿಸಲಾಗುವುದು ಎಂದು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಮೂಲಗಳು ಸ್ಪಷ್ಟಪಡಿಸಿವೆ. ಈ ಇಬ್ಬರೂ ನಾಯಕರು ಸಿಬಿಐ ಸ್ಪೆಷಲ್‌ ಕೋರ್ಟ್‌ನಿಂದ ವಿಚಾರಣೆ ಎದುರಿಸುತ್ತಿದ್ದಾರೆ. ಎಲ್ಲ ಗಣ್ಯಾತಿಥಿಗಳಿಗೂ ಫೋನ್‌ ಕರೆ ಮೂಲಕ ಆಹ್ವಾನ ತಲುಪಿಸುವ ಕಾರ್ಯ ಸಾಗಿದೆ.

ಪ್ರತಿಯೊಬ್ಬ ಭಾರತೀಯನ ಸಮ್ಮತಿಯಿದೆ: ಕೈ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬ ಭಾರತೀಯನ ಸಮ್ಮತಿ ಇದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್‌ ಮುಖಂಡ ಕಮಲನಾಥ್‌ ಹೇಳಿದ್ದಾರೆ. ‘ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣವನ್ನು ನಾನು ಸ್ವಾಗತಿಸುತ್ತೇನೆ. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಕೂಡ ರಾಮಮಂದಿರ ನಿರ್ಮಾಣ ಬಯಸಿದ್ದರು. ದೇಶದ ಜನರೂ ಬಹಳ ಹಿಂದಿನಿಂದಲೂ ಇದನ್ನು ನಿರೀಕ್ಷಿಸಿದ್ದು, ಅವರೆಲ್ಲರೂ ಸಮ್ಮತಿ ವ್ಯಕ್ತಪಡಿಸಿದ್ದಾರೆ. ಇಂಥ ಬೆಳವಣಿಗೆ ಭಾರತದಲ್ಲಿ ಮಾತ್ರವೇ ಸಾಧ್ಯ’ ಎಂದಿದ್ದಾರೆ.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.