ವ್ಯಕ್ತಿ ಮೇಲೆ ದಾಳಿ; ಟ್ರ್ಯಾಕ್ಟರ್ ಹತ್ತಿಸಿ ಹುಲಿ ಕೊಂದ ಗ್ರಾಮಸ್ಥರು
Team Udayavani, Nov 5, 2018, 3:56 PM IST
ಲಕ್ನೋ:ನರಭಕ್ಷಕ “ಅವನಿ” ಹೆಣ್ಣು ಹುಲಿಯನ್ನು ಮಹಾರಾಷ್ಟ್ರ ಅರಣ್ಯದಲ್ಲಿ ಹತ್ಯೆಗೈದ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ವ್ಯಕ್ತಿಯೊಬ್ಬನ ಮೇಲೆ ಹುಲಿಯೊಂದು ದಾಳಿ ಮಾಡಿದ್ದು ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಆಕ್ರೋಶಿತ ಗ್ರಾಮಸ್ಥರು ಹುಲಿಯನ್ನು ಕೊಂದ ಘಟನೆ ಭಾನುವಾರ ಉತ್ತರಪ್ರದೇಶದಲ್ಲಿ ನಡೆದಿದೆ.
ಲಕ್ನೋದಿಂದ 210 ಕಿಲೋ ಮೀಟರ್ ದೂರದ ದುದ್ವಾ ಪ್ರದೇಶದಲ್ಲಿ 50 ವರ್ಷದ ವ್ಯಕ್ತಿಯೊಬ್ಬನ ಮೇಲೆ ಹುಲಿ ದಾಳಿ ನಡೆಸಿತ್ತು. ಆಕ್ರೋಶಗೊಂಡ ಗ್ರಾಮಸ್ಥರು ಪಾರ್ಕ್ ನೊಳಗೆ ನುಗ್ಗಿ ಅರಣ್ಯ ಪಾಲಕನ ಮೇಲೆ ದಾಳಿ ನಡೆಸಿ, ಟ್ರ್ಯಾಕ್ಟರ್ ಅನ್ನು ಬಲವಂತವಾಗಿ ಕಸಿದುಕೊಂಡು ಬಲವಂತವಾಗಿ ಹುಲಿ ಮೇಲೆ ಹತ್ತಿಸಿ ಕೊಂದ ಘಟನೆ ನಡೆದಿದೆ ಎಂದು ವರದಿ ವಿವರಿಸಿದೆ.
Another #Tiger #NationalPride mercilessly killed by villagers with a tractor seized from @UpforestUp officials in #Chaltua #Mailani #KishanpurTigerSanctuary #UttarPradesh she injured a man when he ventured into the jungle. We need a special team for ever rising #ManAnimalConflict pic.twitter.com/FwN93fm2Ax
— Randeep Hooda (@RandeepHooda) November 4, 2018
ಅರಣ್ಯ ಪ್ರದೇಶದ ದಾರಿಯಲ್ಲಿ ಸಾಗುತ್ತಿದ್ದ ವ್ಯಕ್ತಿ ಮೇಲೆ ಈ ಹುಲಿ ದಾಳಿ ನಡೆಸಿತ್ತು. ಬಳಿಕ ಸಮಾಜಘಾತುಕ ವ್ಯಕ್ತಿಗಳು ಸೇರಿಕೊಂಡು ಹುಲಿಯನ್ನು ಹೊಡೆದು, ಅದರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಂದಿರುವುದಾಗಿ ವರದಿ ವಿವರಿಸಿದೆ. ಘಟನೆಯಲ್ಲಿ ಭಾಗಿಯಾದ ವ್ಯಕ್ತಿಗಳನ್ನು ನಾವು ಗುರುತಿಸಿದ್ದು, ಅವರ ವಿರುದ್ಧ ಎಫ್ ಐಆರ್ ದಾಖಲಿಸುವುದಾಗಿ ದುದ್ವಾ ನ್ಯಾಶನಲ್ ಪಾರ್ಕ್ ನ ನಿರ್ದೇಶಕ ಮಾಹಾವಿರ್ ಕೋಜಿಲಾಂಗಿ ತಿಳಿಸಿದ್ದಾರೆ.
ಈ ಹುಲಿ ಮನುಷ್ಯರ ಮೇಲೆ ದಾಳಿ ನಡೆಸುತ್ತಿದೆ ಎಂಬುದಾಗಿ ಹಲವಾರು ಬಾರಿ ಅರಣ್ಯಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಅದರೆ ಈವರೆಗೂ ಯಾವ ಕ್ರಮವನ್ನೂ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ