2012ರ ಡಿ.16ರಂದೇ ಅತ್ಯಾಚಾರ ಎಸಗಿದ್ರು; ಡಿ.16ರಂದೇ ನಿರ್ಭಯಾ ಆರೋಪಿಗಳಿಗೆ ಗಲ್ಲು?
ಆರೋಪಿಗಳನ್ನು ಗಲ್ಲಿಗೇರಿಸುವ ವ್ಯಕ್ತಿ ಉತ್ತರಪ್ರದೇಶದಿಂದ ಆಯ್ಕೆ ಮಾಡಲಾಗಿದೆ
Team Udayavani, Dec 12, 2019, 5:07 PM IST
ನವದೆಹಲಿ: ದೇಶದ ಜನತೆಯನ್ನು ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರಿ ಆರೋಪಿಗಳನ್ನು ಡಿಸೆಂಬರ್ 16ರಂದು ನೇಣುಗಂಬಕ್ಕೆ ಏರಿಸುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಆಂಗ್ಲ ವಾಹಿನಿಯೊಂದು ವರದಿ ಮಾಡಿದೆ.
ಆರೋಪಿಗಳನ್ನು ಗಲ್ಲಿಗೇರಿಸುವ ವ್ಯಕ್ತಿ ಉತ್ತರಪ್ರದೇಶದಿಂದ ಆಯ್ಕೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ನಿರ್ಭಯಾ ಪ್ರಕರಣದ ಆರೋಪಿಗಳಾದ ಪವನ್ ಗುಪ್ತಾ, ಅಕ್ಸಯ್ ಠಾಕೂರ್, ಮುಕೇಶ್ ಸಿಂಗ್ ಮತ್ತು ವಿನಯ್ ಶರ್ಮಾ ಸೇರಿದಂತೆ ನಾಲ್ವರನ್ನು ಡಿ.16ರಂದು ಗಲ್ಲಿಗೇರಿಸುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ ಎಂದು ವರದಿ ವಿವರಿಸಿದೆ.
ತಿಹಾರ್ ಜೈಲಿನಲ್ಲಿ ಆರೋಪಿಗಳನ್ನು ಗಲ್ಲಿಗೇರಿಸಲಿದ್ದು, ಹ್ಯಾಂಗ್ ಮನ್ ಗಳು ಲಕ್ನೋ ಹಾಗೂ ಮತ್ತೊಬ್ಬರು ಮೀರತ್ ನಿಂದ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 2012ರ ಡಿಸೆಂಬರ್ 16ರಂದು 23 ವರ್ಷದ ವೈದ್ಯ ವಿದ್ಯಾರ್ಥಿನಿ ಮನೆಗೆ ವಾಪಸ್ ಹೋಗುತ್ತಿದ್ದ ವೇಳೆಯಲ್ಲಿ ಆರು ಮಂದಿ ಚಲಿಸುತ್ತಿದ್ದ ಬಸ್ ನಲ್ಲಿಯೇ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು.
ತೀವ್ರ ಗಾಯಗಳಿಂದ ಸಂತ್ರಸ್ತೆ ಸಾವನ್ನಪ್ಪಿದ್ದಳು. ಈ ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣದಲ್ಲಿ ಆರು ಮಂದಿ ದೋಷಿಗಳಾಗಿದ್ದರು. ಅದರಲ್ಲಿ ಓರ್ವ ಅಪ್ರಾಪ್ತನಾಗಿದ್ದು ಆತನನ್ನು ಪುನರ್ ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಮತ್ತೊಬ್ಬ ಆರೋಪಿ ರಾಮ್ ಸಿಂಗ್ ತಿಹಾರ್ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ