ಈ ಬಾರಿ 40 ಲಕ್ಷ ಟ್ರ್ಯಾಕ್ಟರ್ ಜತೆ ಸಂಸತ್ ಗೆ ಮುತ್ತಿಗೆ ಹಾಕ್ತೇವೆ: ಕೇಂದ್ರಕ್ಕೆ ಟಿಕಾಯತ್
ಸಂಸತ್ ಗೆ ಮುತ್ತಿಗೆ ಹಾಕುವ ದಿನಾಂಕವನ್ನು ಕಿಸಾನ್ ಒಕ್ಕೂಟ ನಿರ್ಧರಿಸಲಿದೆ
Team Udayavani, Feb 24, 2021, 11:45 AM IST
ಸಿಕಾರ್(ರಾಜಸ್ಥಾನ್): ಒಂದು ವೇಳೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯ್ದೆಯನ್ನು ರದ್ದುಗೊಳಿಸದಿದ್ದರೆ ಬೃಹತ್ ಸಂಖ್ಯೆಯಲ್ಲಿ ಸಂಸತ್ ಗೆ ಮುತ್ತಿಗೆ ಹಾಕುವುದಾಗಿ ರೈತ ಸಂಘಟನೆ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆಯ ಸಂದೇಶ ರವಾನಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಶ್ರೀದೇವಿ ಪುಣ್ಯಸ್ಮರಣೆ : ಬೊಗಸೆ ಕಂಗಳ ನಟಿ ಅಭಿಮಾನಿಗಳಿಗೆ ಆಘಾತ ನೀಡಿದ ದಿನವಿದು..!
ಯಾವುದೇ ಸಮಯದಲ್ಲಿಯೂ ದೆಹಲಿ ಚಲೋಗೆ ಕರೆ ನೀಡಬಹುದಾಗಿದ್ದು, ಎಲ್ಲಾ ರೈತರು ಪ್ರತಿಭಟನೆಗೆ ಸಿದ್ದರಾಗಿರುವಂತೆ ಟಿಕಾಯತ್ ಈ ಸಂದರ್ಭದಲ್ಲಿ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ರಾಜಸ್ಥಾನದ ಸಿಕಾರ್ ನಲ್ಲಿ ಕಿಸಾನ್ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಟಿಕಾಯತ್ ಮಾತನಾಡಿದ್ದು, ಈ ಬಾರಿ ನಾವು ಸಂಸತ್ ಗೆ ಮುತ್ತಿಗೆ ಹಾಕಲಿದ್ದೇವೆ. ನಾವು ಈ ಬಗ್ಗೆ ಘೋಷಿಸುತ್ತಿದ್ದು, ನಂತರ ದೆಹಲಿ ಚಲೋಗೆ ಕರೆ ನೀಡುತ್ತೇವೆ. ಅಷ್ಟೇ ಅಲ್ಲ ಈ ಬಾರಿ 40 ಲಕ್ಷ ಟ್ರ್ಯಾಕ್ಟರ್ ನೊಂದಿಗೆ ಆಗಮಿಸಿ ಪ್ರತಿಭಟನೆ ನಡೆಸುವುದಾಗಿ ಟಿಕಾಯತ್ ಹೇಳಿದರು.
ಸಂಸತ್ ಗೆ ಮುತ್ತಿಗೆ ಹಾಕುವ ದಿನಾಂಕವನ್ನು ಕಿಸಾನ್ ಒಕ್ಕೂಟ ನಿರ್ಧರಿಸಲಿದೆ ಎಂದು ಟಿಕಾಯತ್ ತಿಳಿಸಿದ್ದು, ಜನವರಿ 26ರಂದು ನಡೆದ ರೈತರ ಟ್ರ್ಯಾಕ್ಟರ್ ರಾಲಿಯಲ್ಲಿ ಸಂಚು ನಡೆಸಲಾಗಿತ್ತು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್