ಇನ್ನು ಮುಂದೆ ಹಿರಿಯ ನಾಗರಿಕರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಸುಲಭ
Team Udayavani, Nov 24, 2022, 7:25 AM IST
ತಿರುಪತಿ: ಹಿರಿಯ ನಾಗರಿಕರಿಗೆ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಇನ್ನು ಸುಲಭವಾಗಲಿದೆ.
ಹಿರಿಯ ನಾಗರಿಕರಿಗಾಗಿಯೇ ಎರಡು ಸ್ಲಾಟ್ಗಳನ್ನು ಟಿಟಿಡಿ ಮೀಸಲಿಟ್ಟಿದೆ. ಪ್ರತಿ ದಿನ ಬೆಳಗ್ಗೆ 10 ಗಂಟೆ, ಮಧ್ಯಾಹ್ನ 3 ಗಂಟೆ ಸ್ಲಾಟ್ನಲ್ಲಿ ವಿಶೇಷವಾಗಿ ಹಿರಿಯ ನಾಗರಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇದಕ್ಕಾಗಿ ವಯಸ್ಸು ನಮೂದಿಸಿರುವ ಪೋಟೋ ಇರುವ ಗುರುತಿನ ಪತ್ರ(ಆಧಾರ್)ವನ್ನು ಕೌಂಟರ್ನಲ್ಲಿ ಅವರು ತೋರಿಸಬೇಕಾಗುವುದು ಕಡ್ಡಾಯ.
ದರ್ಶನ ಉಚಿತವಾಗಿದೆ. ಜತೆಗೆ ಒಬ್ಬರಿಗೆ ಎರಡು ಲಾಡು ಪ್ರಸಾದಕ್ಕೆ 20 ರೂ. ಹಾಗೂ ಹೆಚ್ಚುವರಿ ಪ್ರತಿ ಲಾಡುಗೆ 25 ರೂ. ನೀಡಬೇಕಾಗುತ್ತದೆ.
ಹಿರಿಯ ನಾಗರಿಕರಿಗಾಗಿ ವಿಶೇಷ ಪಥ ನಿರ್ಮಿಲಾಗಿದೆ. ಅವರು ಮೆಟ್ಟಿಲು ಹತ್ತಬೇಕಾಗಿಲ್ಲ. ಜತೆಗೆ ದರ್ಶನದ ವೇಳೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.
ಕಾರ್ ಪಾರ್ಕಿಂಗ್ನಿಂದ ದೇಗುಲ ಬಾಗಿಲಿಗೆ ಕರೆತರಲು ಬ್ಯಾಟರಿ ಕಾರ್ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರ ಸ್ಲಾಟ್ 30 ನಿಮಿಷಗಳು ಇದ್ದು, ಅಲ್ಲಿಯವರೆಗೆ ಇತರರ ದರ್ಶನ ಸ್ಥಗಿತಗೊಳಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್