ತಿರುಪತಿ ದೇಗುಲ ಮುಚ್ಚಲು ಟಿಟಿಡಿ ಚಿಂತನೆ ; ಕೋವಿಡ್ 19 ಹಿನ್ನೆಲೆಯಲ್ಲಿ ಪೊಲೀಸರಿಂದ ಪತ್ರ
Team Udayavani, Jul 20, 2020, 6:35 AM IST
ತಿರುಪತಿ: 14 ಮಂದಿ ಅರ್ಚಕರೂ ಸೇರಿದಂತೆ ದೇವಾಲಯದ 140 ಉದ್ಯೋಗಿಗಳಿಗೆ ಈವರೆಗೆ ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ, ಕೆಲವು ವಾರಗಳವರೆಗೆ ತಿರುಪತಿ ತಿಮ್ಮಪ್ಪನ ದೇವಾಲಯದ ಬಾಗಿಲನ್ನು ಮುಚ್ಚಲು ಟಿಟಿಡಿ ಚಿಂತನೆ ನಡೆಸುತ್ತಿದೆ.
ಜೂನ್ 11ರಿಂದ ದೇವಾಲಯದ ಬಾಗಿಲನ್ನು ತೆರೆದು, ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿತ್ತು.
ಪ್ರತಿದಿನ 12 ಸಾವಿರ ಭಕ್ತರಿಗೆ ದರ್ಶನಕ್ಕೆ ಅವಕಾಶ ಸಿಗುತ್ತಿತ್ತು. ಈ ಮಧ್ಯೆ, ದೇವಾಲಯದ 140 ಉದ್ಯೋಗಿಗಳು ಈವರೆಗೆ ಕೋವಿಡ್ 19 ಸೋಂಕಿಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ದೇವಾಲಯದ ಉದ್ಯೋಗಿಗಳ ಹಿತದೃಷ್ಟಿಯಿಂದ ದೇವರ ದರ್ಶನ ಸ್ಥಗಿತಗೊಳಿಸಲು ಎಲ್ಲೆಡೆಯಿಂದ ಒತ್ತಡ ಬರುತ್ತಿದೆ.
ಜತೆಗೆ ತಿರುಮಲ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯವರು ಶನಿವಾರ ಈ ಸಂಬಂಧ ಟಿಟಿಡಿಗೆ ಪತ್ರ ಬರೆದು, ಭಕ್ತರಿಗೆ ದರ್ಶನ ಸ್ಥಗಿತಗೊಳಿಸಿ. ಇದು ಸಾಧ್ಯವಾಗದಿದ್ದರೆ ಕನಿಷ್ಠ ಪಕ್ಷ ಕಂಟೈನ್ಮೆಂಟ್ ವಲಯ ಅಥವಾ ಅತೀ ಹೆಚ್ಚು ಸೋಂಕಿಗೆ ಒಳಗಾದ ರಾಜ್ಯಗಳಿಂದ ಬರುವ ಭಕ್ತರಿಗೆ ಪ್ರವೇಶ ನಿಷೇಧಿಸಿ. ಜತೆಗೆ ಪ್ರತೀ ಗಂಟೆಗೆ 250 ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ಮಾಡಿಕೊಡಿ ಎಂದು ಸೂಚಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಟಾರೆಡ್ಡಿ, ಭಕ್ತರಿಗೆ ದೇವಾಲಯದ ಬಾಗಿಲನ್ನು ಮುಚ್ಚಬೇಕೇ, ಬೇಡವೇ? ಎಂಬುದರ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಜತೆ ಸಮಾಲೋಚನೆ ನಡೆಸಿದ ಅನಂತರ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ