ಬಂಗಾಳದಲ್ಲಿ ರಾಜಕೀಯ ಘರ್ಷಣೆ; 3 ಬಿಜೆಪಿ ಕಾರ್ಯಕರ್ತರಿಗೆ ಗುಂಡೇಟು
Team Udayavani, May 21, 2019, 9:25 AM IST
ಕೋಲ್ಕತಾ : ಮತದಾನ ಮುಗಿದು ಫಲಿತಾಂಶಕ್ಕಾಗಿ ಎದುರು ನೋಡುತ್ತಿರುವ ವೇಳೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಆತಂಕಕಾರಿ ಸ್ಥಿತಿ ನಿರ್ಮಾಣವಾಗಿದ್ದು, ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ಘರ್ಷಣೆಗಳು ಮುಂದುವರಿದಿವೆ. ಸೋಮವಾರ ತಡ ರಾತ್ರಿ ಕೂಚ್ ಬೆಹರ್ನ ಸಿತಾಯಿ ಪ್ರದೇಶದಲ್ಲಿ ನಡೆದ ಮಾರಾಮಾರಿಯಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಗುಂಡೇಟು ತಗುಲಿ ಗಾಯಗೊಂಡಿದ್ದಾರೆ.
ಬಿಜೆಪಿ ಕಾರ್ಯಕರ್ತನಿಗೆ ಸೇರಿದೆ ಎನ್ನಲಾದ ಅಂಗಡಿಯೊಂದನ್ನು ಧ್ವಂಸಗೈಯಲಾಗಿದೆ. ಈ ವೇಳೆ ಘರ್ಷಣೆ ನಡೆದಿದೆ.
ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಟಿಎಂಸಿ ನಮ್ಮ ಕಾರ್ಯಕರ್ತರು ದಾಳಿ ನಡೆಸಿಲ್ಲ ಎಂದು ಹೇಳಿದೆ.
ರಾಜ್ಯದೆಲ್ಲೆಡೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್