ಪಾರ್ಥ ಚಟರ್ಜಿ ಪ್ರಕರಣದಲ್ಲಿ ಹಸ್ತಕ್ಷೇಪ ಇಲ್ಲ: ಟಿಎಂಸಿ ಸ್ಪಷ್ಟನೆ
Team Udayavani, Jul 24, 2022, 10:10 PM IST
ಕೋಲ್ಕತಾ: ಶಿಕ್ಷಕರ ನೇಮಕದಲ್ಲಿ ಅಕ್ರಮ ಎಸಗಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಸಚಿವ ಪಾರ್ಥ ಚಟರ್ಜಿ ತನಿಖೆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ, ಕಾಲಮಿತಿಯಲ್ಲಿ ತನಿಖೆಯನ್ನು ಪೂರ್ತಿಗೊಳಿಸಬೇಕು ಎಂದು ತೃಣಮೂಲ ಕಾಂಗ್ರೆಸ್ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.
ಸದ್ಯದ ಬೆಳವಣಿಗೆಯಿಂದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರಕ್ಕೆ ಭಾರೀ ಮುಜುಗರ ಉಂಟಾಗಿದೆ. ಸಚಿವರ ಜತೆಗೆ ಇದ್ದ ಮಹಿಳೆಗೂ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಅವರು ಹೇಳಿ ಕೊಂಡಿದ್ದಾರೆ. ಕಾನೂನು ತನ್ನದೇ ಆಗಿ ರುವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತದೆಯಾದರೂ, ಸದರಿ ಪ್ರಕರಣದಲ್ಲಿ ನಿಗದಿತ ಕಾಲಮಿತಿಯಲ್ಲಿ ತನಿಖೆ ಮುಕ್ತಾಯ ಗೊಳಿಸಬೇಕು ಎಂದು ಒತ್ತಾಯಿಸಿದರು.
ಡಾನ್ ರೀತಿ ವರ್ತನೆ: ಬಂಧಿತ ಸಚಿವ ಪಾರ್ಥ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾ ಸಣೆ ವೇಳೆ ಡಾನ್ನಂತೆ ವರ್ತಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಕೋಲ್ಕತಾ ಹೈಕೋರ್ಟ್ನಲ್ಲಿ ಆರೋಪಿ ಸಿದೆ. ತನಿಖೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಸಚಿವರು ಅನಾರೋಗ್ಯ ಇರುವ ಬಗ್ಗೆ ನಟಿಸುತ್ತಿದ್ದಾರೆ ಎಂದು ದೂರಿದೆ.
ಒಂದು ದಿನ ವಶಕ್ಕೆ: ಸಚಿವ ಪಾರ್ಥ ಚಟರ್ಜಿ ನಿಕಟವರ್ತಿ ಮಹಿಳೆ ಅರ್ಪಿತಾ ಮುಖರ್ಜಿ ಎಂಬಾಕೆಯನ್ನು ಕೋಲ್ಕತಾದ ಕೋರ್ಟ್ ಒಂದು ದಿನದ ಮಟ್ಟಿಗೆ ವಿಚಾ ರಣೆಗಾಗಿ ಇ.ಡಿ. ವಶಕ್ಕೆ ಒಪ್ಪಿಸಿ ಆದೇಶಿ ಸಿದೆ. ಆಕೆಯನ್ನು ಸೋಮವಾರ ಮತ್ತೆ ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್
ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು
ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
ಇಸ್ರೇಲ್ ದೇಶದಲ್ಲಿ ಅಲ್ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್