ರಾಷ್ಟ್ರಪತಿ ಕುರಿತು ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚಿಸಿದ ಟಿಎಂಸಿ ಸಚಿವ
Team Udayavani, Nov 13, 2022, 7:25 AM IST
ನಂದಿಗ್ರಾಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಪಶ್ಚಿಮ ಬಂಗಾಳ ಸಚಿವ ಅಖಿಲ್ ಗಿರಿ ಅವರ ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸ್ವತಃ ಅವರ ಪಕ್ಷ ಟಿಎಂಸಿ ಕೂಡ ಹೇಳಿಕೆಯನ್ನು ಖಂಡಿಸಿದ್ದು, ವಿವಾದದಿಂದ ಅಂತರ ಕಾಯ್ದುಕೊಂಡಿದೆ.
ಈ ಹಿನ್ನೆಲೆಯಲ್ಲಿ ಶನಿವಾರ ಅಖಿಲ್ ಗಿರಿ ಕ್ಷಮೆಯಾಚಿಸಿದ್ದಾರೆ. ನಂದಿಗ್ರಾಮದ ಹಳ್ಳಿಯೊಂದರಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಗಿರಿ, “ನಾನು ನೋಡಲು ಚೆನ್ನಾಗಿಲ್ಲ ಎಂದು ಅವರು(ಬಿಜೆಪಿ) ಹೇಳುತ್ತಾರೆ. ಯಾರನ್ನೂ ಅವರ ಬಾಹ್ಯ ನೋಟದಿಂದ ತೀರ್ಮಾನಿಸಬಾರದು. ನಾವು ರಾಷ್ಟ್ರಪತಿ ಕಚೇರಿಯನ್ನು ಗೌರವಿಸುತ್ತೇವೆ. ಆದರೆ ನಮ್ಮ ರಾಷ್ಟ್ರಪತಿ ನೋಡಲು ಹೇಗಿದ್ದಾ ರೆ?,’ ಎಂದು ವ್ಯಂಗ್ಯವಾಡಿದ್ದರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.
“ನಮಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಹೆಚ್ಚಿನ ಗೌರವ ಇದೆ. ನಮ್ಮ ಪಕ್ಷ ಅಖಿಲ್ ಗಿರಿ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತದೆ. ಮಹಿಳಾ ಸಬಲೀಕರಣದ ಈ ಯುಗದಲ್ಲಿ, ಇಂತಹ ಸ್ತ್ರೀದ್ವೇಷ ಸ್ವೀಕಾರಾರ್ಹವಲ್ಲ,’ ಎಂದು ಟಿಎಂಸಿ ಟ್ವೀಟ್ ಮಾಡಿದೆ.
“ರಾಷ್ಟ್ರಪತಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಅಖಿಲ್ ಗಿರಿ ಅವರನ್ನು ಕೂಡಲೇ ಬಂಧಿಸಬೇಕು ಹಾಗೂ ಶಾಸಕ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು,’ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಬರೆದ ಪತ್ರದಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಸಂಸದ ಸೌಮಿತ್ರ ಖಾನ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ