ತಮಿಳು ನಾಡು : ನಾಳೆಯಿಂದ 27 ಜಿಲ್ಲೆಗಳಲ್ಲಿ ಮೊದಲ ಹಂತದ ಅನ್ ಲಾಕ್ ಘೋಷಿಸಿದ ಸರ್ಕಾರ
Team Udayavani, Jun 13, 2021, 8:29 PM IST
ಚೆನ್ನೈ : ಕೋವಿಡ್ ಸೋಂಕಿನ ನಿರಂತರ ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ ತಮಿಳು ನಾಡಿನ 27 ಜಿಲ್ಲೆಗಳಲ್ಲಿ ನಾಳೆಯಿಂದ(ಜೂನ್ 14) ಲಾಕ್ ಡೌನ್ ಸಡಿಲಗೊಳಿಸಿ ಅಲಲಿನ ಸರ್ಕಾರ ಾದೇಶ ಹೊರಡಿಸಿದೆ.
27 ಜಿಲ್ಲೆಗಳನ್ನು ಹೊರತಾಗಿ ಉಳಿದ ಇತರೆ 11 ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ಹೊಸ ಪ್ರಕರಣಗಳಲ್ಲಿ ಇಳಿಮುಖ ಕಂಡುಬಂದಿಲ್ಲವಾದ್ದರಿಂದ ಕಠಿಣ ಲಾಕ್ ಡೌನ್ ಮುಂದುವರಿಯಲಿದೆ ಎಂದು ಸ್ಟ್ಯಾಲಿನ್ ನೇತೃತ್ವದ ಸರ್ಕಾರ ಮಾಹಿತಿ ನೀಡಿದೆ.
ಇದನ್ನೂ ಓದಿ : ಬಿಜೆಪಿಯ ಮಾಜಿ ಶಾಸಕ ಜಿ.ವೀರಪ್ಪ ನಿವಾಸಕ್ಕೆ ಎಚ್.ಆರ್.ಶ್ರೀನಾಥ್ ಭೇಟಿ, ರಾಜಕೀಯ ಚರ್ಚೆ
ಟೀ ಶಾಪ್ ತೆರೆಯಲು ಅನುಮತಿಸಿರುವುದನ್ನು ಒಳಗೊಂಡು ಹಲವು ನಿರ್ಬಂಧಗಳನ್ನು ಸಡಿಲಿಕೆ ಮಾಡಿ ಘೋಷಣೆ ಮಾಡಿದೆ.
ಇನ್ನು, ಚೆನ್ನೈ ನಗರವನ್ನು ಸೇರಿದಂತೆ ಈ 27 ಜಿಲ್ಲೆಗಳಲ್ಲಿ ಟೀ ಶಾಪ್ ಗಳನ್ನು ಬೆಳಿಗ್ಗೆ 6 ರಿಂದ ಸಂಜೆ 5ರವರೆಗೂ ತೆರೆಯಲು ಅವಕಾಶ ಕೊಟ್ಟಿದ್ದು, ಪಾರ್ಸಲ್ ಗೆ ಅವಕಾಶವಿದೆ. ಬಿಸಿ ಪಾನೀಯ ಒಯ್ಯಲು ಪಾತ್ರೆ ಬಳಸಬೇಕು. ಆದಷ್ಟು ಪ್ಲಾಸ್ಟಿಕ್ ಬ್ಯಾಗ್ ಬಳಕೆ ತಪ್ಪಿಸಬೇಕು ಎಂದು ಸರ್ಕಾರ ಮಾರ್ಗ ಸೂಚಿಯ ಮೂಲಕ ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದೆ.
ಮೊದಲ ಹಂತದ ಅನ್ ಲಾಕ್ ಘೋಷಣೆ ಮಾಡಿರುವ ತಮಿಳು ನಾಡು ಸರ್ಕಾರ, ಸಿಹಿ ಮತ್ತು ಖಾರದ ತಿನಿಸು ಮಾರುವ ಅಂಗಡಿಗಳಿಗೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2ರವರೆಗೆ ತೆರೆಯಲು ಅನುಮತಿ ನೀಡಿದ್ದು, ಕೇವಲ ಪಾರ್ಸಲ್ ಒಯ್ಯಬಹುದು ಎಂದು ತಿಳಿಸಲಾಗಿದೆ.
ತಮಿಳುನಾಡಿನಲ್ಲಿ ಟೀ ಶಾಪ್ಗಳು ಅಧಿಕ ಸಂಖ್ಯೆಯಲ್ಲಿದ್ದು, ಲಾಕ್ ಡೌನ್ ಕಾರಣ ಮೇ 10ರಿಂದ ಬಂದ್ ಆಗಿವೆ. ಉಳಿದಂತೆ, ರೆಸ್ಟೋರಂಟ್ ಗಳು ಮತ್ತು ಬೇಕರಿಗಳು ಈಗಾಗಲೇ ವಹಿವಾಟು ನಡೆಸುತ್ತಿವೆ. ಸರ್ಕಾರಿ ಸೇವೆ ನಿರೀಕ್ಷಿಸುತ್ತಿರುವ ಜನರಿಗೆ ನೆರವಾಗಲು, ಇ–ಸರ್ವೀಸ್ ಸೆಂಟರ್ ತೆರೆಯಲು ಅನುಮತಿಸಲಾಗಿದೆ.
ಇದನ್ನೂ ಓದಿ : ಬೆಳಕು, ಕತ್ತಲೆಗಳ ಘರ್ಷಣೆಯಿಂದ ಹೊರಬಂದ ಹಾಡು ‘ಮರಳಿ ಬಾ ಮನ್ವಂತರವೇ ಕಂಬನಿಗಳ ಬಳಿಗೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?