ಪ್ರಧಾನಿ ಮಧ್ಯ ಪ್ರವೇಶಿಸಲಿ
ಮೇಕೆದಾಟು ವಿವಾದ: ತ.ನಾ.ಸಿಎಂ ಪತ್ರ
Team Udayavani, Jun 25, 2019, 5:00 AM IST
ಚೆನ್ನೈ: ಮೇಕೆದಾಟು ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ತಮಿಳುನಾಡು ಸಿಎಂ ಕೆ.ಪಳನಿಸ್ವಾಮಿ ಪತ್ರ ಬರೆದಿದ್ದಾರೆ. ಮೇಕೆದಾಟು ಯೋಜನೆಗೆ ಕರ್ನಾಟಕ ಸರ್ಕಾರ ಅನುಮತಿ ಕೋರುತ್ತಿರುವುದು 2018ರಲ್ಲಿ ಕಾವೇ ಜಲ ವಿವಾದಗಳ ನ್ಯಾಯಮಂಡಳಿ ಹಾಗೂ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಅವರು ಪತ್ರದಲ್ಲಿ ಆಕ್ಷೇಪಿಸಿದ್ದಾರೆ. ಅಲ್ಲದೆ, ಕರ್ನಾಟಕದ ಪ್ರಸ್ತಾವನೆಯನ್ನು ತಿರಸ್ಕರಿಸುವಂತೆ ಪರಿಸರ ಸಚಿವಾಲಯಕ್ಕೆ ಸೂಚಿಸಬೇಕೆಂದೂ ಪ್ರಧಾನಿಯನ್ನು ಅವರು ಕೋರಿದ್ದಾರೆ.
ಮೇಕೆದಾಟು ಏತ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗೆ ಕರ್ನಾಟಕ ಕಾವೇರಿ ನೀರಾವರಿ ನಿಗಮ ನಿಯಮಿತವು ಪರಿಸರ ಸಚಿವಾಲಯದ ಅನುಮತಿ ಕೋರಿತ್ತು. ಆದರೆ ತಮಿಳುನಾಡು ಮತ್ತು ಇತರ ನದೀ ತಟದ ರಾಜ್ಯಗಳ ಅನುಮತಿಯನ್ನು ಕೋರಿಲ್ಲ. ಕಾವೇರಿಯಲ್ಲಿ ಮೊದಲೇ ನೀರಿನ ಕೊರತೆಯಿದೆ. ಈ ಮಧ್ಯೆಯೂ ಇಂತಹ ಯೋಜನೆಯನ್ನು ಜಾರಿಗೊಳಿಸುವುದರಿಂದ ಇತರ ರಾಜ್ಯಗಳ ನೀರಿನ ಪಾಲಿಗೆ ತೊಂದರೆಯಾಗಲಿದೆ ಎಂದು ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!