ತಮಿಳುನಾಡಿನಲ್ಲಿ ಅಪಘಾತ ಗಾಯಾಳುಗಳಿಗೆ ಉಚಿತ ಚಿಕಿತ್ಸೆ
Team Udayavani, Dec 19, 2021, 6:40 AM IST
ಚೆನ್ನೈ: ತಮಿಳುನಾಡಿನಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡವರ ಪ್ರಾಣ ರಕ್ಷಿಸುವ ನಿಟ್ಟಿನಲ್ಲಿ “ಇನ್ನುಯಿರ್ ಕಾಪ್ಪನ್’ ಎಂಬ ಹೆಸರಿನ ಹೊಸ ಯೋಜನೆಗೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶನಿವಾರ ಚಾಲನೆ ನೀಡಿದ್ದಾರೆ.
ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಮೊದಲ 48 ಗಂಟೆಗಳೊಳಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ.
ತಮಿಳುನಾಡಿನ ನಾಗರಿಕರು ಮತ್ತು ಆ ರಾಜ್ಯಕ್ಕೆ ಭೇಟಿ ನೀಡುವವರು ಅಪಘಾತದಲ್ಲಿ ಗಾಯಗೊಂಡರೆ ಘಟನೆ ನಡೆದ ಮೊದಲ 48 ಗಂಟೆಗಳ ಕಾಲ ಅವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಈ ಯೋಜನೆಯಡಿ ಸುಮಾರು 81 ಜೀವ ರಕ್ಷಕ ಪ್ರಕ್ರಿಯೆಗಳನ್ನು ಗುರುತಿಸಲಾಗಿದ್ದು, ಗರಿಷ್ಠ 1 ಲಕ್ಷ ರೂ.ಗಳವರೆಗಿನ ಮೊತ್ತದ ಚಿಕಿತ್ಸೆ ಉಚಿತವಾಗಿರಲಿದೆ.
ಇದನ್ನೂ ಓದಿ:ಒಂದೇ ನಂಬರಿನಿಂದ 20 ಕೋಟಿ ಸ್ಪ್ಯಾಮ್ ಕರೆ! ಟ್ರೂಕಾಲರ್ ವರದಿಯಲ್ಲಿ ಬಯಲು
ಅನಂತರದಲ್ಲೂ ಅವರು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಬಹುದು. ಆದರೆ ನಂತರದ ಚಿಕಿತ್ಸೆಗೆ ಹಣ ಪಾವತಿಸಬೇಕಾಗುತ್ತದೆ ಎಂದು ಸರಕಾರ ಹೇಳಿದೆ. ತಮಿಳುನಾಡಿನಾದ್ಯಂತ 408 ಖಾಸಗಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 609 ಆಸ್ಪತ್ರೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ