ಯೋಧನ ಸಾವಿಗೆ ಸೇಡು ತೀರಿಸಲು ಸೌದಿಯಿಂದ ಬಂದರು


Team Udayavani, Aug 4, 2018, 6:00 AM IST

c-10.jpg

ಶ್ರೀನಗರ: ಕಾಶ್ಮೀರದಲ್ಲಿ ಸೇವಾ ನಿರತ ಯೋಧರನ್ನು ಉಗ್ರರು ಹತ್ಯೆಗೈದಾಗ ಕೋಟ್ಯಂತರ ಭಾರತೀಯ ಮನಸ್ಸುಗಳು ಮಮ್ಮಲ ಮರುಗುತ್ತವೆ. ಆದರೆ, ದೂರದ ಸೌದಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕಾಶ್ಮೀರದ ಸುಮಾರು 50 ಯುವಕರು ಇದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿದ್ದು, ತಾವಿದ್ದ ಉತ್ತಮ ಉದ್ಯೋಗಗಳನ್ನು ತೊರೆದು ಕಾಶ್ಮೀರದ ಮೆಂದಾರ್‌ ಪ್ರಾಂತ್ಯದ ತಮ್ಮ ಹಳ್ಳಿಯಾದ ಸಲಾನಿಗೆ ಹಿಂದಿರುಗಿದ್ದಾರೆ. ಅಷ್ಟೇ ಅಲ್ಲ, ಭದ್ರತಾ ಪಡೆಗಳನ್ನು ಸೇರಿ ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿದ್ದಾರೆ. 

ಇವರೆಲ್ಲರೂ ಹೀಗೆ ಉದ್ಯೋಗ ತೊರೆದು ಬರಲು ಕಾರಣ ಯೋಧ ಔರಂಗಜೇಬ್‌. ಕಳೆದ ಜೂ. 14ರಂದು ಕಾಶ್ಮೀರದಲ್ಲಿ ಉಗ್ರರಿಂದ ಅಪಹರಿಸಲ್ಪಟ್ಟು ಹತ್ಯೆಗೀಡಾದ ಔರಂಗಜೇಬ್‌ ಅವರ ಸ್ನೇಹಿತರು ಇವರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಈ ಆಪ್ತ ಸ್ನೇಹಿತರಾದ ಮೊಹಮ್ಮದ್‌ ಕಿರಾಮತ್‌, ತಮ್ಮ ಜೀವದ ಗೆಳೆಯನ ಹತ್ಯೆಯ ಸುದ್ದಿ ಕಿವಿಗೆ ಬೀಳುತ್ತಿದ್ದಂತೆ ರಕ್ತ ಕುದಿಯಿತು. ಸುದ್ದಿ ಬಂದ ದಿನವೇ ಎಲ್ಲರೂ ಒಂದೆಡೆ ಸಭೆ ಸೇರಿ, ಭಾರತಕ್ಕೆ ಮರಳಲು ಹಾಗೂ ಉಗ್ರರ ವಿರುದ್ಧ ಸೇಡು ತೀರಿಸಿಕೊಳ್ಳಲು ತೀರ್ಮಾನಿಸಿದೆವು. ಹಾಗೆ ತಕ್ಷಣಕ್ಕೆ ಕೆಲಸ ಬಿಡುವುದು ಸುಲಭವಿರಲಿಲ್ಲ. ಹೇಗೋ ಆ ಸಮಸ್ಯೆ ನಿಭಾಯಿಸಿಕೊಂಡು ಬಂದಿದ್ದೇವೆ. ಗೆಳೆಯನ ಸಾವಿನ ಪ್ರತೀಕಾರವೇ ನಮ್ಮ ಮುಂದಿನ ಹೆಜ್ಜೆ” ಎಂದಿದ್ದಾರೆ.  

ಏತನ್ಮಧ್ಯೆ, ಜಮ್ಮು ಕಾಶ್ಮೀರದಲ್ಲಿ ಜನರ ಚಲನವಲನದ ಮಾಹಿತಿ ಸಂಗ್ರಹಿಸಲು ನಿಯೋಜಿಸಲಾಗಿರುವ ಸ್ಪೆಷಲ್‌ ಪೊಲೀಸ್‌ ಆಫೀಸರ್‌ ಹುದ್ದೆಗಳನ್ನು ತ್ಯಜಿಸುವಂತೆ ಉಗ್ರರು ಅಧಿಕಾರಿಗಳಿಗೆ ತಾಕೀತು ಮಾಡಿ ಬೆದರಿಕೆ ಹಾಕಲಾರಂಭಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಔರಂಗಜೇಬ್‌ನ ಸಹೋದರ, ಯೋಧ ಮೊಹಮ್ಮದ್‌ ಖಾಸಿಂ, “”ಉಗ್ರರ ಬೆದರಿಕೆಗೆ ಮಣಿಯುವುದಿಲ್ಲ. ಇದು ಕೇವಲ ಉಗ್ರರ ಆಣತಿಯಲ್ಲ, ಅವರನ್ನು ಬೊಂಬೆಗಳಂತೆ ಆಡಿಸುವ ಕೈಗಳ ಆಣತಿ. ಇದಕ್ಕೆಲ್ಲಾ ಬೆದರಿ ನಮ್ಮ ಕರ್ತವ್ಯದಿಂದ ಹಿಂದೆ ಸರಿಯುವುದಿಲ್ಲ. ಔರಂಗಜೇಬ್‌ ಸೇರಿ ಇತರ ನನ್ನ ಎಲ್ಲಾ ಸೇನಾ ಸಹೋದ್ಯೋಗಿಗಳ ಹತ್ಯೆಗಳಿಗೆ ಪ್ರತೀಕಾರ ಪಡೆದೇ ತೀರುತ್ತೇನೆ” ಎಂದಿದ್ದಾರೆ.

ಎನ್‌ಕೌಂಟರ್‌: ಯೋಧ ಹುತಾತ್ಮ 
ಜಮ್ಮು ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಆದರೆ, ಕಾರ್ಯಾಚರಣೆ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಇಲ್ಲಿಯ ದುರೂ ಗ್ರಾಮದ ರಫೀಯಾಬಾದ್‌ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಭದ್ರತಾ ಪಡೆ ಪಹರೆ ಮತ್ತು ಶೋಧಕಾರ್ಯದಲ್ಲಿ ತೊಡಗಿದ್ದಾಗ, ಉಗ್ರರು ಗುಂಡಿನ ಮಳೆಗೆರೆದರು. ಹೀಗಾಗಿ ಎರಡೂ ಕಡೆ ಗುಂಡಿನ ಚಕಮಕಿ ನಡೆಯಿತು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.