ರಾಜ್ಯಕ್ಕೆ ಬರ; ದೇಶದಲ್ಲಿ ಬಂಪರ್ ಬೆಳೆ !
Team Udayavani, Aug 7, 2017, 8:45 AM IST
ಹೊಸದಿಲ್ಲಿ: ಒಂದೆಡೆ ರಾಜ್ಯದಲ್ಲಿ ಸತತ ಎರಡನೇ ವರ್ಷವೂ ಮಳೆರಾಯ ಮುನಿಸಿಕೊಂಡು ಬರಗಾಲ ಮುಂದುವರಿದಿದ್ದು, ಕರ್ನಾಟಕದ ರೈತರು ಬೆಳೆ ಬೆಳೆಯಲಾಗದೆ ಕಂಗಾಲಾಗಿ ಕುಳಿತಿದ್ದರೆ, ದೇಶದ ಇತರ ರಾಜ್ಯಗಳ ಕೃಷಿಕರು ಬಂಪರ್ ಬೆಳೆ ತೆಗೆಯುವ ಉತ್ಸಾಹದಲ್ಲಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ 2017-18ನೇ ಸಾಲಿನಲ್ಲಿ ಹೆಚ್ಚು ಪ್ರದೇಶದಲ್ಲಿ ಬಿತ್ತನೆ ನಡೆದಿರುವುದು ಹಾಗೂ ಉತ್ತಮ ಮುಂಗಾರು ಕೃಷಿಕರ ಕೈ ಹಿಡಿದಿರುವ ಹಿನ್ನೆಲೆಯಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಇಳು ವರಿ ದಾಖಲಾಗುವ ನಿರೀಕ್ಷೆಯಿದೆ. 2016-17ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 13.80 ಕೋಟಿ ಟನ್ ಆಹಾರ ಧಾನ್ಯಗಳ ಇಳು ವರಿ ದಾಖಲಾಗಿತ್ತು. ಈ ಬಾರಿ ಮುಂಗಾರು ಮಳೆ ಹಿಂದಿನ ಬಾರಿ ಗಿಂತಲೂ ಉತ್ತಮವಾಗಿದ್ದು, ಇಳುವರಿ ಕೂಡ ದಾಖಲೆ ಪ್ರಮಾಣ ತಲುಪುವ ಸಾಧ್ಯತೆಯಿದೆ ಎಂದು ಕೃಷಿ ಇಲಾಖೆ ಕಾರ್ಯದರ್ಶಿ ಶೋಭಾ ಕೆ. ಪಟ್ನಾಯಕ್ ಹೇಳಿದ್ದಾರೆ.
ಹೆಚ್ಚು ಕೃಷಿ ಭೂಮಿ ಹೊಂದಿರುವ ಕರ್ನಾಟಕದಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದಿರುವುದು ಬೇಸರ ತಂದಿದೆ. ಒಂದೊಮ್ಮೆ ಕರ್ನಾಟಕದಲ್ಲೂ ಉತ್ತಮ ಮಳೆಯಾಗಿದ್ದರೆ ಇಳುವರಿ ಇನ್ನೂ ಹೆಚ್ಚುವ ನಿರೀಕ್ಷೆ ಇತ್ತು. ಆದರೆ ಇನ್ನೂ ಸಾಕಷ್ಟು ಮಳೆ ಬರಲು ಅವಕಾಶವಿದ್ದು, ಕರ್ನಾಟಕದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಯಿದೆ ಎಂದು ಶೋಭಾ ಅವರು ಆಶಾಭಾವ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್