Business 20: ಇಂದಿನ ಬಡವರೇ ನಾಳೆಯ ಮಧ್ಯಮ ವರ್ಗ- ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದನೆ

- ಸರ್ಕಾರದ ಬಡವರ ಪರ ನೀತಿಯಿಂದ ಮಧ್ಯಮವರ್ಗದ ಸಂಖ್ಯೆ ಹೆಚ್ಚಳ

Team Udayavani, Aug 27, 2023, 10:07 PM IST

modi imp 2

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಬಡವರ ಪರ ಯೋಜನೆಗಳು ಮುಂದಿನ ವರ್ಷಗಳಲ್ಲಿ ದೊಡ್ಡಮಟ್ಟದ ಮಧ್ಯಮ ವರ್ಗವನ್ನು ಸೃಷ್ಟಿಸಲಿದೆ. ಅದು ದೇಶದ ಅರ್ಥ ವ್ಯವಸ್ಥೆಯ ಬೆಳವಣಿಗೆಗೆ ಕಾರಣವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿಯಲ್ಲಿ ಭಾನುವಾರ ಆಯೋಜಿಸಲಾಗಿದ್ದ “ಬ್ಯುಸಿನೆಸ್‌ 20′ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಬಡ’ ವರ್ಗದಲ್ಲಿದ್ದವರು ಸರ್ಕಾರದ ಯೋಜನೆಗಳಿಂದಾಗಿ ಕೆಲವೇ ವರ್ಷಗಳಲ್ಲಿ “ಮಧ್ಯಮ ವರ್ಗ’ಕ್ಕೆ ಸೇರ್ಪಡೆಯಾಗಿ “ಹೊಸ ರೀತಿಯ ಮಧ್ಯಮ ವರ್ಗ’ (ನಿಯೋ ಮಿಡಲ್‌ ಕ್ಲಾಸ್‌) ಸೃಷ್ಟಿಯಾಗಲಿದೆ. ಅವರು ಹೊಸ ಆಶಾ ಭಾವನೆಗಳಿಂದ ಬಂದಿರುತ್ತಾರೆ ಮತ್ತು ವಿವಿಧ ಸೇವೆಗಳಿಗೆ ಅವರೇ ಖರೀದಿದಾರರು ಮತ್ತು ಅವರಿಂದಾಗಿಯೇ ದೇಶದ ಅರ್ಥ ವ್ಯವಸ್ಥೆ ಪ್ರಗತಿ ಹೊಂದಲಿದೆ ಎಂದಿದ್ದಾರೆ.

ಬಡವರ ನೆರವಿಗಾಗಿ ಮಾಡಿದ ಯೋಜನೆಗಳು ಫ‌ಲ ಕೊಟ್ಟಿವೆ. ಹೀಗಾಗಿ ಅವರೆಲ್ಲರೂ ಮಧ್ಯಮ ವರ್ಗಕ್ಕೆ ಬರುತ್ತಾರೆ ಎಂದು ಹೇಳಿದ ಪ್ರಧಾನಿ, ಇದರಿಂದಾಗಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ನೆರವು ಸಿಕ್ಕಿದಂತೆ ಆಗುತ್ತದೆ ಎಂದರು. ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಮುಂದಿನ ಐದರಿಂದ ಏಳು ವರ್ಷಗಳ ಅವಧಿಯಲ್ಲಿ ಮಧ್ಯಮ ವರ್ಗಕ್ಕೆ ಹೆಚ್ಚಿನ ಪ್ರಮಾಣದ ಜನರು ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ, ಕ್ರಿಪ್ಟೋ ಕರೆನ್ಸಿಗಳ ನಿಯಂತ್ರಣಕ್ಕಾಗಿ ಜಗತ್ತಿಗೇ ಅನ್ವಯವಾಗುವ ನಿಯಮಗಳನ್ನು ಜಾರಿಗೆ ತರಬೇಕು ಎಂದು ಸಲಹೆ ನೀಡಿದ ಪ್ರಧಾನಿ ಮೋದಿ, ಪ್ರಸ್ತುತ ಜನಪ್ರಿಯತೆಯ ಹಂತದಲ್ಲಿ ಇರುವ ಕೃತಕ ಬುದ್ಧಿಮತ್ತೆಯನ್ನು ಅಗತ್ಯಕ್ಕೆ ತಕ್ಕಂತೆ ಬಳಕೆ ಮಾಡಬೇಕಾಗಿದೆ ಎಂದಿದ್ದಾರೆ.
ನುಡಿದಂತೆ ನಡೆದುಕೊಂಡಿದೆ:

ಜಗತ್ತಿನ ದಕ್ಷಿಣ ಭಾಗಕ್ಕೆ ಉಂಟಾಗಿರುವ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ತಾನು ನೀಡಿರುವ ವಾಗ್ಧಾನಗಳಿಗೆ ಅನುಗುಣವಾಗಿ ಭಾರತ ನಡೆದುಕೊಂಡಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹೇಳಿದ್ದಾರೆ. ಸಮ್ಮೇಳನದಲ್ಲಿ ಮಾತನಾಡಿದ ಅವರು, ಕೊರೊನಾ ಅವಧಿಯಲ್ಲಿ ಭಾರತ ಜಗತ್ತಿಗೆ ಔಷಧೋದ್ಯಮ ಕ್ಷೇತ್ರದಲ್ಲಿ ಭಾರೀ ಪ್ರಮಾಣದ ನೆರವು ನೀಡಿದೆ. ಮೇಡ್‌ ಇನ್‌ ಇಂಡಿಯಾ ಲಸಿಕೆಯನ್ನು 100ಕ್ಕೂ ಅಧಿಕ ದೇಶಗಳಿಗೆ ರಫ್ತು ಮಾಡಲಾಯಿತು ಎಂದಿದ್ದಾರೆ.

ಟಾಪ್ ನ್ಯೂಸ್

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.