ಸೋನಿಯಾ, ದೀದಿ ಆಪ್ತರು ಬಿಜೆಪಿ ಬಲೆಗೆ
Team Udayavani, Mar 15, 2019, 12:30 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ದೇಶಾದ್ಯಂತ ಪಕ್ಷಾಂತರಿಗಳೇ ಸದ್ದು ಮಾಡುತ್ತಿದ್ದಾರೆ. ಇದಕ್ಕೆ ಗುರುವಾರ ಹೊಸ ಸೇರ್ಪಡೆಯಾಗಿದೆ. ಕಾಂಗ್ರೆಸ್ಗೆ ತೀವ್ರ ಮುಜುಗರವೆಂಬಂತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪರಮಾಪ್ತ ಮತ್ತು ಪಕ್ಷದ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಕೇರಳದ ಕಾಂಗ್ರೆಸ್ ನಾಯಕ ಟಾಮ್ ವಡಕ್ಕನ್ ಅವರು ದಿಢೀರನೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಗುರುವಾರ ನಡೆದ ಈ ಬೆಳವಣಿಗೆಯು ಕಾಂಗ್ರೆಸ್ಗೆ ಆಘಾತ ತಂದಿದೆ.
ಇನ್ನೊಂದೆಡೆ, ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆಪ್ತರಾಗಿದ್ದ, ಟಿಎಂಸಿ ಪ್ರಮುಖ ನಾಯಕ ಮತ್ತು 4 ಬಾರಿ ಶಾಸಕರಾಗಿ ಆಯ್ಕೆ ಯಾಗಿರುವ ಅರ್ಜುನ್ ಸಿಂಗ್ ಗುರುವಾರ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಲೋಕಸಭೆ ಚುನಾವಣೆ ವೇಳೆ ಪಶ್ಚಿಮ ಬಂಗಾಲದಲ್ಲಿ ಪ್ರಾಬಲ್ಯ ಹೆಚ್ಚಿಸಲು ಯತ್ನಿಸುತ್ತಿರುವ ಬಿಜೆಪಿಗೆ ಇವರ ಸೇರ್ಪಡೆಯು ವರದಾನವಾಗಲಿದೆ ಎಂದೇ ವಿಶ್ಲೇಷಿಸ ಲಾಗುತ್ತಿದೆ. ಇದರ ನಡುವೆಯೇ, ಉತ್ತರಾಖಂಡದ ಬಿಜೆಪಿ ಹಿರಿಯ ನಾಯಕ ಚಂದ್ರ ಖಂಡೂರಿ ಪುತ್ರ ಮನೀಷ್ ಖಂಡೂರಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ಗುರುವಾರ ಹರಿದಾಡಿವೆ.
ಬಿಜೆಪಿಗೆ ಸೇರ್ಪಡೆಯಾದ ಟಾಮ್ ವಡಕ್ಕನ್ ಮತ್ತು ಅರ್ಜುನ್ ಸಿಂಗ್, ಪುಲ್ವಾಮಾ ದಾಳಿ ಬಳಿಕ ತಮ್ಮ ತಮ್ಮ ಪಕ್ಷಗಳು ಮತ್ತು ನಾಯಕರು ನೀಡಿರುವ ಹೇಳಿಕೆಗಳಿಂದ ನೊಂದು ಪಕ್ಷ ತ್ಯಜಿಸಿರುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ