ಬೆಲೆ ಸಿಗದೆ ರಸ್ತೆಗೆ ಎಸೆದಿದ್ದ ಟೊಮೆಟೋ ಈಗ ದುಬಾರಿ

ಟೊಮೆಟೋವನ್ನು ದರ್ಜೆಗೆ ಅನುಗುಣವಾಗಿ 40ರಿಂದ 50 ರೂ.ಗೆ ಮಾರಾಟ ಮಾಡಲಾಗುತ್ತಿದೆ.

Team Udayavani, Oct 15, 2021, 5:00 PM IST

ಬೆಲೆ ಸಿಗದೆ ರಸ್ತೆಗೆ ಎಸೆದಿದ್ದ ಟೊಮೆಟೋ ಈಗ ದುಬಾರಿ

ಮುಂಬಯಿ: ಕಳೆದ ಎರಡು ತಿಂಗಳ ಹಿಂದೆ ಬೆಲೆ ಸಿಗದೆ ರೈತರು ಬೀದಿಗಳಲ್ಲಿ ಎಸೆಯಲಾಗುತ್ತಿದ್ದ ಟೊಮೆಟೋ ಈಗ ದುಬಾರಿಯಾಗಿದೆ. ನಿರಂತರ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಕೃಷಿಗೆ ಭಾರೀ ಹಾನಿಯಾಗಿದ್ದು, ತರಕಾರಿ ಸಹಿತ ಇತರ ಬೆಳೆಗಳ ಬೆಲೆ ಏರಿಕೆಯಾಗಿದೆ.

ಒಂದು ತಿಂಗಳ ಹಿಂದೆ ಪ್ರತಿ ಕೆ.ಜಿ. ಟೊಮೆಟೋ 10ರಿಂದ 20 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ಪ್ರಸ್ತುತ ಪುಣೆ, ಮುಂಬಯಿ ಮತ್ತು ಥಾಣೆ ಪ್ರದೇಶಗಳಲ್ಲಿ ಕೆ.ಜಿ.ಗೆ 45ರಿಂದ 60 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದರ ಜತೆ ಇತರ ತರಕಾರಿಗಳ ದರವೂ ಏರಿಕೆಯಾಗಿದೆ. ಪ್ರಸ್ತುತ ಬೇಡಿಕೆಗಿಂತ ಕಡಿಮೆ ಟೊಮೆಟೋ ಪೂರೈಕೆ ಆಗುತ್ತಿರುವುದರಿಂದ ಬೆಲೆ ಏರಿಕೆಯಾಗಿದೆ ಎಂದು ಛತ್ರಪತಿ ಶಿವಾಜಿ ಮಾರ್ಕೆಟ್‌ ಯಾರ್ಡ್‌ ಆಡ್ತೆ ಅಸೋಸಿ ಯೇಶನ್‌ ಅಧ್ಯಕ್ಷ ವಿಲಾಸ್‌ ಭುಜಬಲ್‌ ಹೇಳಿದ್ದಾರೆ.

ಬೆಳೆಗೆ ನಿರೀಕ್ಷಿತ ಬೆಲೆ
ಕೆಲವು ತಿಂಗಳ ಹಿಂದೆ ಟೊಮೆಟೋ ಬೆಳೆಗಾರರು ನಷ್ಟವನ್ನು ಎದುರಿಸಬೇಕಾಯಿತು. ಬೇಡಿಕೆಯ ಕೊರತೆಯಿಂದಾಗಿ ಕಳೆದ ತಿಂಗಳು ರೈತರು ಕಂಗಾಲಾಗಿದ್ದರು. ಆದರೆ ಈಗ ಸಗಟು ಮಾರುಕಟ್ಟೆಯಲ್ಲಿ ಟೊಮೆಟೋಗಳಿಗೆ ಉತ್ತಮ ಬೆಲೆ ಸಿಗುತ್ತಿದೆ. ಸಗಟು ಮಾರುಕಟ್ಟೆಯಲ್ಲಿ ಒಂದು ಕೆ.ಜಿ. ಟೊಮೆಟೋ ದರ್ಜೆಯನ್ನು ಅವಲಂಬಿಸಿ ಸಾಗಾಟ ವೆಚ್ಚವನ್ನು ಹೊರತುಪಡಿಸಿ ರೈತರು ಪ್ರತಿ ಕೆ.ಜಿ. ಟೊಮೆಟೋಗೆ 20ರಿಂದ 30 ರೂ. ಗಳನ್ನು ಪಡೆಯುತ್ತಿದ್ದಾರೆ.

ನವಿಮುಂಬಯಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ, ಪುಣೆ ಜಿಲ್ಲೆಯ ಜುನ್ನಾರ್‌, ಅಂಬೇಗಾಂವ್‌, ಖೇಡ್‌, ನಾಸಿಕ್‌ ಪ್ರದೇಶಗಳಿಂದ ಟೊಮೆಟೋಗಳ ದೊಡ್ಡ ಪ್ರಮಾಣದ ಪೂರೈಕೆ ಇತ್ತು. ಪ್ರಸ್ತುತ ಬೇಡಿಕೆಗೆ ಹೋಲಿಸಿದರೆ ಸಗಟು ಮಾರುಕಟ್ಟೆಯಲ್ಲಿ ಟೊಮೆಟೋ ಪೂರೈಕೆ ಕಡಿಮೆಯಾಗಿರುವುದರಿಂದ ಬೆಲೆ ಏರಿಕೆ ಯಾಗಿದೆ. ಮುಂಬಯಿ, ಥಾಣೆ ಮತ್ತು ಉಪನಗರ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೋವನ್ನು ದರ್ಜೆಗೆ ಅನುಗುಣವಾಗಿ 40ರಿಂದ 50 ರೂ.ಗೆ ಮಾರಾಟ ಮಾಡಲಾಗುತ್ತಿದೆ.

ಬೀದಿಗೆ ಎಸೆದಿದ್ದ ರೈತರು
ಸಗಟು ಮಾರುಕಟ್ಟೆಯ ಪ್ರಕಾರ ಕಳೆದ ತಿಂಗಳು ಟೊಮೆಟೋ ಪ್ರತೀ ಕೆ.ಜಿ.ಗೆ 5-10 ರೂ.ಗೆ ಮಾರಾಟವಾಗುತ್ತಿತ್ತು. ಮಾರುಕಟ್ಟೆಗಳಲ್ಲಿ ದರವಿಲ್ಲದ ಕಾರಣ ಆಕ್ರೋಶಗೊಂಡ ರೈತರು ರಾಜ್ಯಾದ್ಯಂತ ಟೊಮೆಟೋಗಳನ್ನು ಬೀದಿಗಳಲ್ಲಿ ಎಸೆದು ಹೋದ ಘಟನೆಗಳು ಸಂಭವಿಸಿದವು.
ಇಂಧನ ಬೆಲೆ ಏರಿಕೆಯಿಂದಾಗಿ ಸಾಗಾಟ ವೆಚ್ಚ ಜತೆಗೆ ಫ‌ಸಲಿಗೆ ಕಡಿಮೆ ಬೆಲೆ ಪಡೆದಿದ್ದರಿಂದ ಟೊಮೆಟೋಗಳನ್ನು ರೈತರು ಎಸೆಯಬೇಕಾಯಿತು. ಪಿತೃಪಕ್ಷದ ಸಂದರ್ಭ ಮಾರುಕಟ್ಟೆಗಳಲ್ಲಿ ಟೊಮೆಟೋ ಬೇಡಿಕೆ ಕಡಿಮೆಯಾಗಿತ್ತು.

ಪೂರೈಕೆ ಹೆಚ್ಚಾದ
ಬಳಿಕ ಬೆಲೆ ಸ್ಥಿರ ಪುಣೆ, ಅಹ್ಮದ್‌ನಗರ, ಸಾಂಗ್ಲಿ, ಸತಾರಾ, ಕೊಲ್ಲಾಪುರ, ಸೊಲ್ಲಾಪುರ ಮತ್ತು ನಾಸಿಕ್‌ ಪ್ರದೇಶಗಳಲ್ಲಿ ಟೊಮೆಟೋ ಅನ್ನು ವ್ಯಾಪಕವಾಗಿ ಬೆಳೆಯಲಾಗುತ್ತದೆ. ಪ್ರಸ್ತುತ ಸಗಟು ಮಾರುಕಟ್ಟೆಗೆ ಪ್ರತೀದಿನ ಆರರಿಂದ ಎಂಟು ಸಾವಿರ ಬಾಕ್ಸ್‌ ಟೊಮೆಟೋಗಳು ಬರುತ್ತಿವೆ. ಬೇಡಿಕೆಗೆ ಹೋಲಿಸಿದರೆ ಪ್ರಸ್ತುತ ಟೊಮೆಟೋಗಳ ಪೂರೈಕೆ ಕಡಿಮೆಯಾಗುತ್ತಿದ್ದು, ಮುಂದಿನ 10-15 ದಿನಗಳಲ್ಲಿ ಪೂರೈಕೆ ಹೆಚ್ಚಾಗಲಿದೆ. ಅದರ ನಂತರ ದರಗಳು ಸ್ಥಿರಗೊಳ್ಳಲಿದೆ.
– ವಿಲಾಸ್‌ ಭುಜಬಲ್‌ಅಧ್ಯಕ್ಷರು, ಶ್ರೀ ಛತ್ರಪತಿ
ಶಿವಾಜಿ ಮಾರುಕಟ್ಟೆ ಯಾರ್ಡ್

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.