ನಾಳೆ ಕಂಕಣ ಸೂರ್ಯ ಗ್ರಹಣ;ದಕ್ಷಿಣ ಭಾರತದಲ್ಲಿ ಬಹುತೇಕ ಪೂರ್ಣ ಪ್ರಮಾಣ
Team Udayavani, Dec 25, 2019, 8:33 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ವಿಶ್ವದಲ್ಲೇ 150 ವರ್ಷಗಳ ಬಳಿಕ ಕಾಣಿಸಿಕೊಳ್ಳುತ್ತಿರುವ ‘ಬೆಂಕಿಯ ಉಂಗುರ’ (ಕಂಕಣ) ಸೂರ್ಯಗ್ರಹಣಕ್ಕೆ 1 ದಿನ ಮಾತ್ರ ಬಾಕಿ ಇದೆ. ಬೆಂಗಳೂರು, ಮಂಗಳೂರು, ಕೊಯಮತ್ತೂರು, ದಿಂಡಿಗಲ್ ಸೇರಿದಂತೆ ದಕ್ಷಿಣ ಭಾರತದಲ್ಲಿ ಬಹುತೇಕ ಪೂರ್ಣ ಪ್ರಮಾಣದಲ್ಲಿ ಗ್ರಹಣ ಗೋಚರಿಸಲಿದೆ.
ಅಂದು ಚಂದ್ರನು ಸೂರ್ಯ, ಭೂಮಿ ನಡುವಣ ರೇಖೆಗೆ ಬಂದರೆ ಪೂರ್ಣ ಪ್ರಮಾಣದಲ್ಲಿ ಸೂರ್ಯ ಗ್ರಹಣ ಕಾಣಿಸಿಕೊಳ್ಳುವುದಿಲ್ಲ. ಚಂದ್ರನು ಸೂರ್ಯನ ಕೇಂದ್ರೀಯ ಭಾಗವನ್ನು ಆವರಿಸಲಿದೆ. ಭಾಗಶಃ ಸೂರ್ಯಗ್ರಹಣ ಹಾಗೂ ಬೆಂಕಿಯ ಉಂಗುರ ಗೋಚರಿಸಲಿದೆ.
ಬೆಂಗಳೂರಿನಲ್ಲಿ ಶೇ.89.4, ಚೆನ್ನೈನಲ್ಲಿ ಶೇ. 78.8, ಮುಂಬಯಿ (74.3), ಹೈದರಾ ಬಾದ್ (66), ಅಹಮದಾಬಾದ್(44.7) ದಿಲ್ಲಿ (44.7), ಕೋಲ್ಕತಾದಲ್ಲಿ ಶೇ.45.1ರಷ್ಟು ಕಾಣಿಸಿಕೊಳ್ಳಲಿದೆ ಎಂದು ಬಿರ್ಲಾ ಇಂಡಸ್ಟ್ರಿಯಲ್ ಆ್ಯಂಡ್ ಟೆಕ್ನಾಲಜಿ ಮ್ಯೂಸಿಯಂ ತಿಳಿಸಿದೆ.
ಭಾರತದಲ್ಲಿ ಬೆಳಗ್ಗೆ 7.59ರಿಂದ ಸೂರ್ಯ ಗ್ರಹಣ ಶುರುವಾಗಲಿದೆ. 10.47ಕ್ಕೆ ಗರಿಷ್ಠ ಪ್ರಮಾಣದಲ್ಲಿ ಕಾಣಿಸಿಕೊಳ್ಳಲಿದೆ. ಸೌದಿ ಅರೇಬಿಯಾ, ಖತಾರ್, ಯುಎಇ, ಒಮನ್, ಶ್ರೀಲಂಕಾ, ಮಲೇಷ್ಯಾ, ಇಂಡೋನೇಷ್ಯಾ, ಸಿಂಗಾಪುರ ಮತ್ತಿತರ ದೇಶಗಳಲ್ಲಿ ಸೂರ್ಯ ಗ್ರಹಣ ಕಾಣಿಸಿಕೊಳ್ಳಲಿದೆ. ಯುಎಇನಲ್ಲಿ ಅಂದು ಮಸೀದಿಗಳಲ್ಲಿ ಬೆಳಗ್ಗೆ ಪ್ರಾರ್ಥನೆಗಳು ನಡೆಯಲಿವೆ. ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಒಡಿಶಾದಲ್ಲಿ ಗುರುವಾರ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ