ನಾಳೆ ಎನ್ಡಿಎ 4ನೇ ವರ್ಷಾಚರಣೆ
Team Udayavani, May 25, 2018, 6:00 AM IST
ಹೊಸದಿಲ್ಲಿ: ಎನ್ಡಿಎ ಸರಕಾರ ಅಧಿಕಾರಕ್ಕೆ ಬಂದು ಶನಿವಾರ 4 ವರ್ಷ ಪೂರೈಸಲಿದ್ದು, ಬಿಜೆಪಿ ಸಂಭ್ರಮಾಚರಣೆ ಹಮ್ಮಿಕೊಂಡಿದೆ. ಈ ವೇಳೆ ನಾಲ್ಕು ವರ್ಷಗಳಲ್ಲಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ನಿರ್ಧರಿಸಲಾಗಿದೆ. ಅಲ್ಲದೆ ಮುಂಬರುವ ಲೋಕಸಭೆ ಚುನಾವಣೆ ಪ್ರಚಾರದ ಥೀಮ್ ಕೂಡ ಅನಾವರಣಗೊಳ್ಳಲಿದೆ. ವರ್ಷಾಚರಣೆ ಸಂಭ್ರಮಕ್ಕೆ ಸಾಫ್ ನಿಯತ್ ಸಹಿ ವಿಕಾಸ್ (ಪರಿಶುದ್ಧ ಧ್ಯೇಯ, ಸರಿಯಾದ ಅಭಿವೃದ್ಧಿ) ಎಂಬ ಟ್ಯಾಗ್ಲೈನ್ ಬಳಸಲು ನಿರ್ಧರಿಸಲಾಗಿದೆ. ಸರಕಾರ ಈ ನಾಲ್ಕು ವರ್ಷಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಈ ವೇಳೆ ಜನರಿಗೆ ತಲುಪಿಸಲಾಗುತ್ತದೆ. ನಾವು ಸರಿದಾರಿಯಲ್ಲಿ ಸಾಗುತ್ತಿದ್ದೇವೆ ಎಂಬುದನ್ನು ಜನರಿಗೆ ಮನದಟ್ಟು ಮಾಡುವುದು ಈ ಪ್ರಚಾರದ ಮುಖ್ಯ ಉದ್ದೇಶ.
ಪ್ರಮುಖ ಸಚಿವಾಲಯದಲ್ಲಿನ ಸಾಧನೆಗಳ ಬಗ್ಗೆ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಅಲ್ಲದೆ ಇದನ್ನು ಸಾಮಾಜಿಕ ಮಾಧ್ಯಮಗಳಲ್ಲೂ ಪ್ರಸಾರ ಮಾಡಲಾಗು ತ್ತದೆ. ಒಂದು ಲಕ್ಷಕ್ಕೂ ಹೆಚ್ಚು ಪ್ರತಿಭಾನ್ವಿತರು ದೇಶದ ದಲಿತರನ್ನು ಭೇಟಿ ಮಾಡಲಿದ್ದಾರೆ. ಇದಲ್ಲದೆ ಇತರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂದು ಪ್ರಧಾನಿ ಮೋದಿ ಒಡಿಶಾದಲ್ಲಿ ಇರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ