ಟೂಲ್ ಕಿಟ್ ಪ್ರಕರಣ : ಪರಿಸರ ಕಾರ್ಯಕರ್ತೆ ದಿಶಾ ರವಿಗೆ ದೆಹಲಿ ಕೋರ್ಟ್ ಜಾಮೀನು..!
ದಿಶಾ ರವಿ ಪರ ವಕೀಲ ಸಿದ್ದಾರ್ಥ ಅಗರ್ ವಾಲ್ ಮಾಹಿತಿ
Team Udayavani, Feb 23, 2021, 4:31 PM IST
ನವ ದೆಹಲಿ : ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್ಕಿಟ್ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ್ರೋಹ ಮತ್ತು ಇತರ ಆರೋಪಗಳಿಗಾಗಿ ಪ್ರಕರಣ ದಾಖಲಾಗಿರುವ ಮೂವರು ಆರೋಪಿಗಳಲ್ಲಿ ಒಬ್ಬರಾದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರಿಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಮಂಗಳವಾರ(ಫೆ. 23) ಜಾಮೀನು ನೀಡಿದೆ.
ಟೂಲ್ ಕಿಟ್ ಹಂಚಿಕೊಂಡ ಆರೋಪದಡಿ ದೆಹಲಿ ಪೊಲೀಸರಿಂದ ಬಂಧನವಾಗಿರುವ ದಿಶಾ ರವಿ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಓದಿ : ಸಿಐಡಿಯಿಂದ ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ ತನಿಖೆ: ಬೊಮ್ಮಾಯಿ
ದಿಶಾ ರವಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಕಳೆದ ಶನಿವಾರ ನಡೆಸಿ, ಮಂಗಳವಾರಕ್ಕೆ(ಫೆ.23) ಕಾಯ್ದಿರಿಸಿತ್ತು.
ದಿಶಾ ರವಿ ಅವರು ಯಾವುದೇ ಪಿತೂರಿಯ ಭಾಗವಾಗಿಲ್ಲ. ಅವರು ಉದ್ದೇಶಗಳೆಲ್ಲವೂ ಪರಿಸರ ಮತ್ತು ರೈತರ ಒಳಿತಿಗಾಗಿ ಇವೆ. ಖಲಿಸ್ತಾನಿ ಚಳುವಳಿಗೂ, ಅವರಿಗೂ ಯಾವುದೇ ಸಂಬಂಧವಿಲ್ಲ’ ಎಂದು ದಿಶಾ ಪರ ವಕೀಲ ಸಿದ್ದಾರ್ಥ ಅಗರ್ ವಾಲ್ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ವಾದ ಮಂಡಿಸಿದ್ದರು.
ಇದಕ್ಕೆ ಪ್ರತಿವಾದ ಮಂಡಿಸಿರುವ ದೆಹಲಿ ಪೊಲೀಸರ ಪರ ವಕೀಲರು, ‘ಭಾರತದ ಹೆಸರಿಗೆ ಮಸಿ ಬಳಿಯುವ ನಿಟ್ಟಿನಲ್ಲಿ ಹೆಣೆಯಲಾದ ಜಾಗತಿಕ ಪಿತೂರಿಯ ಭಾಗವಾಗಿ ದಿಶಾ ರವಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಜಾಮೀನು ನೀಡುವುದು ಸಮಂಜಸವಲ್ಲ’ ಡಾಕ್ಯುಮೆಂಟ್ನ ಸೂತ್ರೀಕರಣ ಮತ್ತು ಪ್ರಸಾರದಲ್ಲಿ ದಿಶಾ ರವಿ ಪ್ರಮುಖ ಸಂಚು ಹೂಡಿದ್ದರು ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ ಮತ್ತು ಅವರು ಖಲಿಸ್ತಾನಿ ಪರ ಗುಂಪು ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ನೊಂದಿಗೆ “ಭಾರತದ ವಿರುದ್ಧ ಅಸಮಾಧಾನವನ್ನು ಹರಡಲು” ಸಹಕರಿಸಿದರು ಮತ್ತು ಥನ್ ಬರ್ಗ್ ಅವರೊಂದಿಗೆ ಡಾಕ್ಯುಮೆಂಟ್ ಹಂಚಿಕೊಂಡಿದ್ದಾರೆ. ಟೆಲಿಗ್ರಾಮ್ ಆ್ಯಪ್ ಮೂಲಕ ರವಿ ಟೂಲ್ ಕಿಟ್ ನನ್ನು ಥನ್ ಬರ್ಗ್ ಗೆ ಕಳುಹಿಸಿದ್ದಾರೆ ಮತ್ತು ಎಂದು ದೆಹಲಿ ಪೊಲೀಸರು ಹೇಳಿದ್ದರು.
ಇಂದು, ನ್ಯಾಯಾಲಯಕ್ಕೆ ಹಾಜರಾಗುವ ಮುನ್ನಾ, ಸಹ-ಆರೋಪಿಗಳಾದ ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ಅವರನ್ನು ಭೇಟಿಯಾಗಲು ದಿಶಾ ರವಿ ಅವರನ್ನು ದೆಹಲಿ ಪೊಲೀಸ್ ಸೈಬರ್ ಸೆಲ್ ಕಚೇರಿಗೆ ಕರೆದೊಯ್ದಿದ್ದರು. ಜಾಕೋಬ್ ಮತ್ತು ಮುಲುಕ್ ಈ ಹಿಂದೆ ಬಾಂಬೆ ಹೈಕೋರ್ಟ್ ನಿಂದ ಟ್ರಾನ್ಸಿಟ್ ಜಾಮೀನು ಪಡೆದಿದ್ದು, ಬಂಧನದಿಂದ ರಕ್ಷಣೆ ನೀಡಿದ್ದರು.
ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವ ‘ಟೂಲ್ಕಿಟ್’ಹಂಚಿಕೊಂಡ ಆರೋಪದ ಮೇಲೆ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರ ಬಂಧನವಾಗಿತ್ತು.
ಈಗ ಪಟಿಯಾಲ ಹೌಸ್ ನ್ಯಾಯಾಲಯ ದಿಶಾ ರವಿ ಅವರಿಗೆ ತಲಾ ಒಂದು ಲಕ್ಷ ಎರಡು ಶೂರಿಟಿಗಳೊಂದಿಗೆ ಜಾಮೀನು ನೀಡಿದೆ ಎಂದು ದಿಶಾ ಪರ ವಕೀಲ ಸಿದ್ದಾರ್ಥ ಅಗರ್ ವಾಲ್ ಮಾಧ್ಯಮಗಳಿಗೆ ತಿಳಿಸಿರುವುದು ವರದಿಯಾಗಿದೆ.
ಓದಿ : ದೈನಂದಿನ ವೆಚ್ಚ ಭರಿಸಲು ಪರದಾಟ! ಎಪಿಎಂಸಿ ಮುಚ್ಚುವಂತಹ ಪರಿಸ್ಥಿತಿ ನಿರ್ಮಾಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ