ಟೂಲ್ಕಿಟ್: ತನಿಖೆಯ ಸ್ಥಿತಿಗತಿ ವರದಿ ಸಲ್ಲಿಕೆಗೆ ಸೂಚನೆ
Team Udayavani, Feb 28, 2023, 6:34 AM IST
ನವದೆಹಲಿ: 2021ರಲ್ಲಿ ರೈತರ ಪ್ರತಿಭಟನೆಯನ್ನು ಬೆಂಬಲಿಸುವ ಟೂಲ್ಕಿಟ್ ಅನ್ನು ಹಂಚಿಕೊಂಡ ಆರೋಪದ ಮೇಲೆ ಪರಿಸರ ಕಾರ್ಯಕರ್ತೆ ದಿಶಾ ರವಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯ ಸ್ಥಿತಿಗತಿ ಬಗ್ಗೆ ತಿಳಿಸುವಂತೆ ಕೇಂದ್ರ ಸರ್ಕಾರವನ್ನು ದೆಹಲಿ ಹೈಕೋರ್ಟ್ ಸೋಮವಾರ ಕೇಳಿದೆ.
ಎಫ್ಐಆರ್ಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ತಡೆ ಕೋರಿ ದಿಶಾ ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ತನಿಖೆಯ ಸ್ಥಿತಿ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿತು. ಕೇಂದ್ರದ ಮೂರು ಕೃಷಿ ಕಾಯಿದೆಗಳನ್ನು ವಿರೋಧಿಸಿ ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್ ಕಿಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಸಂಬಂಧ ದೆಹಲಿ ಪೊಲೀಸರು ದಿಶಾ ರವಿ ಅವರನ್ನು 2021 ಫೆ.13ರಂದು ಬಂಧಿಸಿದ್ದರು. ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
Ban; ಎಂಡಿಎಚ್, ಎವರೆಸ್ಟ್ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?