10 ತಾಸು ಕಾರ್ಯಾಚರಣೆ; ಪೊಲೀಸರ ಗುಂಡಿಗೆ ಬಲಿಯಾದ ಆರೋಪಿಯ ಹೆಣ್ಣು ಮಗು ದತ್ತು ಪಡೆದ IGP
ಸುಭಾಶ್ ಬಾಥಮ್ ಎಂಬಾತ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಬಂದಿದ್ದ.
Team Udayavani, Feb 3, 2020, 4:48 PM IST
ಲಕ್ನೋ: ಇತ್ತೀಚೆಗೆ ಪೊಲೀಸರ ಕಾರ್ಯಾಚರಣೆಯಲ್ಲಿ 23 ಮಕ್ಕಳನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದ್ದ ಕೊಲೆ ಪ್ರಕರಣವೊಂದರ ಆರೋಪಿ ಸಾವನ್ನಪ್ಪಿದ್ದ. ಇದೀಗ ಆತನ ಒಂದು ವರ್ಷದ ಹೆಣ್ಣು ಮಗುವನ್ನು ದತ್ತು ತೆಗೆದುಕೊಳ್ಳುವುದಾಗಿ ಉತ್ತರಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಉತ್ತರಪ್ರದೇಶದ ಫಾರೂಖಾಬಾದ್ ನ ಗ್ರಾಮವೊಂದರಲ್ಲಿ ಈ ವ್ಯಕ್ತಿ ಮತ್ತು ಪತ್ನಿ 23 ಮಕ್ಕಳನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದ್ದ. ಪೊಲೀಸರು ಸುಮಾರು ಹತ್ತು ಗಂಟೆಗಳ ಕಾರ್ಯಾಚರಣೆ ನಡೆಸಿ ಆತನನ್ನು ಹತ್ಯೆಗೈದಿದ್ದರು. ಪತ್ನಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸ್ಥಳೀಯರು ಹೊಡೆದು, ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆಕೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು.
ಮಕ್ಕಳನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡು ಪೊಲೀಸರ ಗುಂಡಿಗೆ ಬಲಿಯಾಗಿದ್ದ ಆರೋಪಿಯ ಪುಟ್ಟ ಮಗುವನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದೇನೆ. ಅಲ್ಲದೇ ಅವಳು ಬೆಳೆದು ದೊಡ್ಡವಳಾದ ಮೇಲೆ ನನ್ನಂತೆ ಐಪಿಎಸ್ ಅಧಿಕಾರಿಯನ್ನಾಗಿ ಮಾಡುತ್ತೇನೆ ಎಂದು ಕಾನ್ಪುರದ ಪೊಲೀಸ್ ಮಹಾನಿರ್ದೇಶಕ ಮೋಹಿತ್ ಅಗರ್ವಾಲ್ ತಿಳಿಸಿದ್ದಾರೆ.
ಸುಭಾಶ್ ಬಾಥಮ್ ಎಂಬಾತ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಬಂದಿದ್ದ. ಈತ ತನ್ನ ಮಗಳ ಹುಟ್ಟು ಹಬ್ಬ ಆಚರಣೆಗಾಗಿ ಗ್ರಾಮಸ್ಥರು ಹಾಗೂ ಮಕ್ಕಳನ್ನು ಆಹ್ವಾನಿಸಿದ್ದ. ಅದರಂತೆ ಬಂದಿದ್ದ 23ಮಕ್ಕಳನ್ನು ಮತ್ತು ತನ್ನ ಪತ್ನಿಯನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದ್ದ. ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು.
ಪತ್ನಿ ಮತ್ತು ಚಿಕ್ಕಮಗುವನ್ನು ಕೂಡಾ ಗನ್ ಪಾಯಿಂಟ್ ಇಟ್ಟು ಹೆದರಿಸತೊಡಗಿದ್ದ. ಸ್ಥಳಕ್ಕೆ ಪೊಲೀಸ್ ವಾಹನ ಬಂದ ಬಳಿಕ ಸುಭಾಶ್ ಮನೆಯ ಟೆರೆಸ್ ಮೇಲಿಂದ ಗುಂಡಿನ ದಾಳಿ ಹಾಗೂ ಕಚ್ಛಾ ಬಾಂಬ್ ಎಸೆಯತೊಡಗಿದ್ದ. ಸುಮಾರು ಹತ್ತು ಗಂಟೆಗಳ ಕಾರ್ಯಾಚರಣೆಯ ಬಳಿಕ ಆತನನ್ನು ಹೊಡೆದುರುಳಿಸಲಾಗಿತ್ತು ಎಂದು ವರದಿ ವಿವರಿಸಿದೆ.
ಪತ್ನಿಯೂ ಗ್ರಾಮಸ್ಥರ ಆಕ್ರೋಶಕ್ಕೆ ಸಾವನ್ನಪ್ಪಿದ್ದಳು. ಇದರಿಂದಾಗಿ ಮಗು ಅನಾಥವಾಗಬಾರದು ಎಂದು ಸುಭಾಶ್ ಮಗಳನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದೇನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!